ನನ್ನ ಎರಡನೇ ಮದುವೆ ಬಗ್ಗೆ ನನಗೆ ಗೊತ್ತಿಲ್ಲ
ನನಗೆ ದಾಖಲೆ ಕೊಡಿ, ದಾಖಲೆ ಕೊಟ್ಟರೆ ಮಾತನಾಡುತ್ತೇನೆ
2ನೇ ಮದುವೆ ವದಂತಿಗೆ ವಿಜಯಾನಂದ ಕಾಶಪ್ಪನವರ್ ಹೇಳಿಕೆ
ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್
ಕೊಪ್ಪಳದ ಕುಷ್ಟಗಿಯಲ್ಲಿ ವಿಜಯಾನಂದ ಪ್ರತಿಕ್ರಿಯೆ
ಕೊಪ್ಪಳ : ನನ್ನ ಎರಡನೇ ಮದುವೆ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ದಾಖಲೆ ಕೊಡಿ, ದಾಖಲೆ ಕೊಟ್ಟರೆ ನಾನು ಮಾತನಾಡುತ್ತೇನೆ. ಇಲ್ಲದಿದ್ದರೆ ನಾನು ಇದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಕುಷ್ಟಗಿಯಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಮಗನ ಮದುವೆಗೆ ಆಗಮಿಸಿದ್ದ ವೇಳೆ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯನವರು ಸಿಎಂ ಆಗಬೇಕು ಎಂಬ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ಅದು ಅವರ ವೈಯುಕ್ತಿಕ ಹೇಳಿಕೆ. ನಾವೆಲ್ಲ ಪಕ್ಷದ ಸಿದ್ಧಾಂತದಲ್ಲಿ ಇದ್ದವರು. ವಿದ್ಯಾರ್ಥಿ ಕಾಂಗ್ರೆಸ್ನಿಂದ ಪಕ್ಷದಲ್ಲಿದ್ದೇವೆ. ಮುಖ್ಯಮಂತ್ರಿ ವಿಚಾರಕ್ಕೆ ನಮ್ಮ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ. ಇದಕ್ಕೆಲ್ಲ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ, ಅವರು ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ..








