ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Health : ಇನ್ನು ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಆನ್‌ಲೈನ್‌ ಹೆಸರು ನೋಂದಣಿ ವ್ಯವಸ್ಥೆ, ತಾಲೂಕು ಆಸ್ಪತ್ರೆಗಳಲ್ಲೂ ಜಾರಿ :  ಸುಧಾಕರ್‌

Health : ಇನ್ನು ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಆನ್‌ಲೈನ್‌ ಹೆಸರು ನೋಂದಣಿ ವ್ಯವಸ್ಥೆ, ತಾಲೂಕು ಆಸ್ಪತ್ರೆಗಳಲ್ಲೂ ಜಾರಿ :  ಸುಧಾಕರ್‌

Namratha Rao by Namratha Rao
August 22, 2022
in Health, Newsbeat, ಆರೋಗ್ಯ
sudhakar
Share on FacebookShare on TwitterShare on WhatsappShare on Telegram

ಇನ್ನು ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಆನ್‌ಲೈನ್‌ ಹೆಸರು ನೋಂದಣಿ ವ್ಯವಸ್ಥೆ, ತಾಲೂಕು ಆಸ್ಪತ್ರೆಗಳಲ್ಲೂ ಜಾರಿ :  ಸುಧಾಕರ್‌

ರೋಗಿಗಳು ಆಸ್ಪತ್ರೆಗೆ ಬಂದು ಸಾಲಿನಲ್ಲಿ ನಿಲ್ಲಬೇಕಿಲ್ಲ

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುಣಮಟ್ಟದಲ್ಲಿ ಲೋಪವಿಲ್ಲ, ಆಸ್ಪತ್ರೆಗೆ 5 ಕೋಟಿ ರೂ. ಅನುದಾನ

ಬೆಂಗಳೂರು, ಆಗಸ್ಟ್‌ 22, ಸೋಮವಾರ

ಜಯನಗರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್‌ ಹೆಸರು ನೋಂದಣಿ ಹಾಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ತರಲಾಗುವುದು. ಬಳಿಕ ತಾಲೂಕು ಆಸ್ಪತ್ರೆಗಳಲ್ಲೂ ಇದೇ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿ ವಾರ್ಡ್‌ಗೆ ಭೇಟಿ ನೀಡಿದ ಸಚಿವ ಡಾ.ಕೆ.ಸುಧಾಕರ್‌, ರೋಗಿಗಳನ್ನು ಮಾತನಾಡಿಸಿ ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದೇ ವೇಳೆ ಆಸ್ಪತ್ರೆ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಒದಗಿಸುವುದಾಗಿ ತಿಳಿಸಿದರು.

ಬಳಿಕ ಮಾತನಾಡಿದ ಸಚಿವರು, ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನದಟ್ಟಣೆ ಕಡಿಮೆ ಮಾಡಲು, ವೈದ್ಯರ ಭೇಟಿಗೆ ಆನ್‌ಲೈನ್‌ನಲ್ಲಿ ಅಥವಾ ಮೊಬೈಲ್‌ ಸಂದೇಶ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ತರಲು ಸೂಚಿಸಲಾಗಿದೆ. ಆಸ್ಪತ್ರೆಯಲ್ಲಿ ಜನರ ಉದ್ದದ ಸಾಲು ಕಡಿಮೆ ಮಾಡಲು ಈ ಕ್ರಮ ವಹಿಸಲಾಗುತ್ತಿದೆ. ವೈದ್ಯರ ಆಪಾಯಿಂಟ್‌ಮೆಂಟ್‌ ಸಮಯ, ಯಾವ ವೈದ್ಯರು ಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್‌ಗೆ ಸಂದೇಶ ಕಳುಹಿಸುವ ವ್ಯವಸ್ಥೆ ತರಲಾಗುತ್ತಿದೆ. ಆಸ್ಪತ್ರೆಗೆ ಯಾರೂ ಬಂದು ಕಾಯುವ ಅಗತ್ಯವಿಲ್ಲ. ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರು ಬರುವ ಮುನ್ನವೇ ಆನ್‌ಲೈನ್‌ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಹಾಗೂ ಡಿಜಿಟಲ್‌ ಪಾವತಿ ಮಾಡುವ ವ್ಯವಸ್ಥೆ ತರಲಾಗುವುದು ಎಂದು ಹೇಳಿದರು.

ಜಯನಗರ ಸರ್ಕಾರಿ ಆಸ್ಪತ್ರೆ ಎನ್‌ಕ್ಯೂಎಸ್‌ ಗುಣಮಟ್ಟವನ್ನು ಹೊಂದುವಂತೆ ಕ್ರಮ ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಮೂಲಕ ಸರ್ಕಾರಿ ಸೇವೆಯ ಗುಣಮಟ್ಟವನ್ನು ಹೆಚ್ಚಿಸಬೇಕಿದೆ. ಈಗ ಪರಿಶೀಲನೆ ನಡೆಸಿದ ಬಳಿಕವೂ ಮತ್ತೊಮ್ಮೆ ಬಂದು ಪರಿಶೀಲನೆ ನಡೆಸಿ ಗುರಿ ತಲುಪಲಾಗಿದೆಯೇ ಎಂದು ಗಮನಿಸಲಾಗುವುದು ಎಂದರು.

51 ಹಾಸಿಗೆಗಳ ಐಸಿಯು ಇಲ್ಲಿದೆ. ಕೋವಿಡ್‌ ಬಳಿಕ ಇಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸಿಬ್ಬಂದಿಯನ್ನು ನೀಡಲಾಗುವುದು. ಕಾಯಂ ಸಿಬ್ಬಂದಿ ನೇಮಕಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ನೀಡಲಾಗುವುದು. ನಾಲ್ಕು ಆರ್ಥೊಪೆಡಿಕ್‌ ತಜ್ಞರು ಈ ಆಸ್ಪತ್ರೆಯಲ್ಲಿದ್ದರೂ 40 ಪ್ರೊಸೀಜರ್‌ ಮಾತ್ರ ನಡೆಯುತ್ತಿದೆ. ಈ ಸಂಖ್ಯೆಯನ್ನು 100 ಕ್ಕೆ ಏರಿಸಿಕೊಳ್ಳಬೇಕು. ಹಾಗೆಯೇ ಸಭೆ ನಡೆಸಿ ವಿವಿಧ ವಿಭಾಗಗಳ ನಡುವೆ ಸಮನ್ವಯತೆ ತರಬೇಕು ಎಂದು ಸೂಚಿಸಲಾಗಿದೆ ಎಂದರು.

ಗುಣಮಟ್ಟದ ಚಿಕಿತ್ಸೆ, 5 ಕೋಟಿ ರೂ. ಅನುದಾನ

ಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಗ್ಗೆ ರೋಗಿಗಳನ್ನು ಮಾತನಾಡಿಸಿದ್ದು, ಒಬ್ಬರು ಕೂಡ ಗುಣಮಟ್ಟದಲ್ಲಿ ಲೋಪ ಆಗಿದೆ ಎಂದು ಹೇಳಿಲ್ಲ. ಐದು ವರ್ಷದಿಂದ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿರುವ ರೋಗಿಯೊಬ್ಬರು, ಯಾವುದೇ ಹಣ ನೀಡದೆ ಚಿಕಿತ್ಸೆ ಪಡೆಯುತ್ತಿದ್ದೇನೆ ಹಾಗೂ ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಾವಣಿ ಸೇರಿದಂತೆ ಕೆಲವೆಡೆ ದುರಸ್ತಿ ಕಾರ್ಯಗಳು ನಡೆಯಬೇಕಿದೆ. ಸುಮಾರು 5 ಕೋಟಿ ರೂ.ನಷ್ಟು ಅನುದಾನ ಬೇಕಿದ್ದು, ಅದನ್ನು ನೀಡಲಾಗುವುದು ಎಂದರು.

ರೋಗಿಗಳಿಗೆ ಚಿಕಿತ್ಸೆ ವಿಚಾರದಲ್ಲಿ ಸಮಾಧಾನ ಇದೆ ಎಂದು ತಿಳಿದುಬಂದಿದೆ. ಪ್ರಸೂತಿ ವಿಭಾಗದಲ್ಲಿ ಕೆಲ ದೂರುಗಳಿದ್ದು, ಅದಕ್ಕಾಗಿ ಸ್ಪಷ್ಟ ಸೂಚನೆ ನೀಡಲಾಗಿದೆ. ಪ್ರತಿ ವಿಭಾಗಗಳ ಮುಖ್ಯಸ್ಥರಿಗೆ ನಿಗದಿತ ಗುರಿ ನೀಡಲಾಗಿದೆ. ಜನರು ಖಾಸಗಿ ಆಸ್ಪತ್ರೆಗೆ ಹೋಗದೆ ಇಲ್ಲಿಯೇ ಬರುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಈ ಹಿಂದೆ ಲಂಚ ಪಡೆದ ಹೊರಗುತ್ತಿಗೆ ವೈದ್ಯರೊಬ್ಬರ ವಿರುದ್ಧ ತನಿಖೆ ನಡೆಯುತ್ತಿದೆ. ಈಗ ತಕ್ಷಣ ಕೆಲಸದಿಂದ ತೆಗೆದುಹಾಕಬೇಕು ಎಂದು ಸೂಚಿಸಲಾಗಿದೆ. ತನಿಖಾ ವರದಿ ಬರುವ ಮುನ್ನವೇ ಅವರನ್ನು ಕೆಲಸದಿಂದ ತೆಗೆದುಹಾಕಲು ತಿಳಿಸಲಾಗಿದೆ. ರಾಜ್ಯದ ಬೇರೆ ಬೇರೆ ಆಸ್ಪತ್ರೆಗಳಿಗೂ ಭೇಟಿ ನೀಡಲಾಗುವುದು. ನಮ್ಮ ಸರ್ಕಾರ ಮಾತೃ ಹೃದಯ ಹೊಂದಿದ್ದು, ಅದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು.

ಹಣ ವಾಪಸ್‌ ಕೊಡಿಸುವವರೆಗೂ ಬಿಡುವುದಿಲ್ಲ

ಕೋವಿಡ್‌ ರೋಗಿಗಳಿಂದ ಹಣ ಪಡೆದು ಬಳಿಕ ಸರ್ಕಾರದಿಂದ ಹಣ ಪಡೆದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ನೀಡಿ, ಹಣವನ್ನು ರೋಗಿಗಳಿಗೆ ಹಿಂದಿರುಗಿಸಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರ ಈ ರೀತಿಯ ಕ್ರಮ ವಹಿಸಿ, 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ವಾಪಸ್‌ ಮಾಡಲಾಗಿದೆ. ಇನ್ನು ಉಳಿದ ಮೊತ್ತವನ್ನು ಕೂಡ ವಾಪಸ್‌ ಕೊಡಿಸಲಾಗುವುದು. ಮೊತ್ತವನ್ನು ವಾಪಸ್‌ ಕೊಡಿಸುವವರೆಗೂ ಸರ್ಕಾರ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್‌ ಹಾಜರಿದ್ದರು.

Tags: BJPdistrict hospitalsHealthhealth ministerK.Sudhakarkarnataka
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram