Siddaramaiah | ನನ್ನನ್ನು ಹಿಂದುವಿರೋಧಿ ಎಂದು ಬಿಂಬಿಸುವ ಪ್ರಯತ್ನ
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜನ ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಜನಾಕ್ರೋಶವನ್ನು ಬೇರೆ ಕಡೆ ತಿರುಗಿಸುವ ಉದ್ದೇಶದಿಂದ ಇಂತಹ ಧರ್ಮ-ದೇವರಿಗೆ ಸಂಬಂಧಿಸಿದ ವಿವಾದವನ್ನು ಸೃಷ್ಟಿಸಿ ನನ್ನನ್ನು ಹಿಂದುವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬಿಜೆಪಿ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿರುವ ಸಿದ್ದರಾಮಯ್ಯ, ಮಾಂಸಾಹಾರ ಮನುಷ್ಯನ ವೈಯಕ್ತಿಕ ವಿಚಾರ. ಯಾವುದಾದರೂ ಧಾರ್ಮಿಕ ಕೇಂದ್ರಗಳಲ್ಲಿ ಅಂತಹ ನಿರ್ಬಂಧಗಳಿದ್ದರೆ ಖಂಡಿತ ನಾವು ಅದನ್ನು ಪಾಲಿಸಬೇಕು. ನನಗೆ ತಿಳಿದಂತೆ ಎಲ್ಲಿಯೂ ಮೀನು-ಮಾಂಸ ತಿಂದು ದೇವಸ್ಥಾನಕ್ಕೆ ಬರಬಾರದು ಎಂಬ ನಿರ್ಬಂಧ ಇಲ್ಲ. ಹೀಗಿದ್ದಾಗ ಯಾಕೆ ಈ ವಿವಾದ ಎಂದು ಪ್ರಶ್ನಿಸಿದ್ದಾರೆ.
ಹಂದಿ ಮಾಂಸ ತಿಂದು ಮಸೀದಿಗೆ ಹೋಗ್ತಿರಾ? ಎಂದು ಸಂಸದ ಪ್ರತಾಪ್ ಸಿಂಹ ಕೇಳಿದ್ದಾರೆ. ನಾನು ನನ್ನ ಜೀವನದಲ್ಲಿ ಹಂದಿ ಮಾಂಸ ತಿಂದಿಲ್ಲ, ತಿನ್ನುವವರನ್ನು ಬೇಡ ಎನ್ನುವುದಿಲ್ಲ. ನನಗೆ ತಿಳಿದ ಹಾಗೆ ಮಸೀದಿಯಲ್ಲಿ ಅಂತಹ ನಿರ್ಬಂಧ ಇಲ್ಲ. ಬೇಕಾದರೆ ಪ್ರತಾಪ ಸಿಂಹನೇ ಹಂದಿ ತಿಂದು ಹೋಗಲಿ.
ಹಂದಿ ಮಾಂಸ ತಿಂದು ಮಸೀದಿಗೆ ಹೋಗ್ತಿರಾ? ಎಂದು ಸಂಸದ @mepratap ಕೇಳಿದ್ದಾರೆ. ನಾನು ನನ್ನ ಜೀವನದಲ್ಲಿ ಹಂದಿ ಮಾಂಸ ತಿಂದಿಲ್ಲ, ತಿನ್ನುವವರನ್ನು ಬೇಡ ಎನ್ನುವುದಿಲ್ಲ. ನನಗೆ ತಿಳಿದ ಹಾಗೆ ಮಸೀದಿಯಲ್ಲಿ ಅಂತಹ ನಿರ್ಬಂಧ ಇಲ್ಲ. ಬೇಕಾದರೆ ಪ್ರತಾಪ ಸಿಂಹನೇ ಹಂದಿ ತಿಂದು ಹೋಗಲಿ. 10/18#Kodagu
— Siddaramaiah (@siddaramaiah) August 23, 2022
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜನ ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಜನಾಕ್ರೋಶವನ್ನು ಬೇರೆ ಕಡೆ ತಿರುಗಿಸುವ ಉದ್ದೇಶದಿಂದ ಇಂತಹ ಧರ್ಮ-ದೇವರಿಗೆ ಸಂಬಂಧಿಸಿದ ವಿವಾದವನ್ನು ಸೃಷ್ಟಿಸಿ ನನ್ನನ್ನು ಹಿಂದುವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಜ್ಞಾವಂತ ಮತದಾರರಿಗೆ ಈ ಕಳ್ಳಾಟವೆಲ್ಲ ಗೊತ್ತಾಗಿದೆ.
ಕೊಡಗು ಜಿಲ್ಲೆ 2019,2020, 2021 ಮತ್ತು ಈ ವರ್ಷ ನಿರಂತರವಾಗಿ ಅತಿವೃಷ್ಟಿಗೆ ಈಡಾಗಿದೆ. ನಮ್ಮ ಸರ್ಕಾರ 750 ಮನೆಗಳನ್ನು ಕಟ್ಟಿಸಿಕೊಟ್ಟಿದ್ದನ್ನು ಬಿಟ್ಟರೆ @BJP4Karnataka ಸರ್ಕಾರ ಯಾವ ಹೊಸ ಮನೆ ಕಟ್ಟಿಕೊಟ್ಟಿಲ್ಲ, ಪರಿಹಾರವನ್ನೂ ಸರಿಯಾಗಿ ವಿತರಿಸಿಲ್ಲ, ಕುಸಿದುಬಿದ್ದಿರುವ ಸೇತುವೆ-ರಸ್ತೆಗಳು ದುರಸ್ತಿಯಾಗಿಲ್ಲ. 12/18#Kodagu
— Siddaramaiah (@siddaramaiah) August 23, 2022
ಮಾಂಸ ತಿಂದು ದೇವಸ್ಥಾನಕ್ಕೆ ಹೋದರೂ ತಪ್ಪಲ್ಲ ಎಂದು ಹಿಂದೂ ಸಂಘಟನೆಯ ಪ್ರಮೋದ್ ಮುತಾಲಿಕ್ ಹೇಳಿದ್ದಾರಂತೆ. ಅದೇ ರೀತಿ ಜ್ಯೋತಿಷಿ ದೈವಜ್ಞ ಸೋಮಯಾಜಿಯವರು ಹೇಳಿದ್ದಾರೆ. ಬಿಜೆಪಿ ಪಕ್ಷದ ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದಗೌಡ ಅವರು ಇಂತಹ ವಿಷಯಗಳನ್ನೆಲ್ಲ ವಿವಾದ ಮಾಡಬಾರದು ಎಂದು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.