ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ದೇಶದೆಲ್ಲೆಡೆ ಮನೆ ಮಾತಾಗಿದ್ದ ಶ್ರೀನಿವಾಸ್ ಗೌಡ ಹಾಗೂ ಮತ್ತವರ ತಂಡಕ್ಕೆ ಸಿಎಂ ಯಡಿಯೂರಪ್ಪರಿಂದ ಸನ್ಮಾನಕ್ಕಾಗಿ ಆಹ್ವಾನ ಬಂದಿದೆ. ಕ್ರೀಡಾ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಸನ್ಮಾನ ಮಾಡಲಿದ್ದು, ಶ್ರೀನಿವಾಸ್ ಗೌಡ ಅವರೊಂದಿಗೆ ವಾರ್ತಾ ಇಲಾಖೆಯ ಅರುಣಕಾಂತ, ವರದಿಗಾರ ನಾಗರಾಜ, ಕೆ.ಗೋಪಾಲನ್ ಕಡಬ ಹಾಗೂ ಸಿಬ್ಬಂದಿಗೂ ಬೆಂಗಳೂರಿಗೆ ಬರಲು ಆಹ್ವಾನ ನೀಡಲಾಗಿದೆ. ಈಗಾಗಲೇ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಶ್ರೀನಿವಾಸ ಗೌಡರಿಗೆ ಅಗತ್ಯ ತರಭೇತಿಯನ್ನು ನೀಡಿ ಒಲಿಂಪಿಕ್ಸ್ಗೆ ಕಳುಹಿಸಿಕೊಡುವ ಬಗ್ಗೆ ಟ್ವೀಟ್ ಮಾಡಿದ್ದರು. ನಂತರ ಸಚಿವರ ಮನವಿಯನ್ನು ತಿರಸ್ಕರಿಸಿರುವ ಶ್ರೀನಿವಾಸ ಗೌಡ ಮನವಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಹ್ವಾನದಂತೆ ನಾನು ಅವರನ್ನು ಸೋಮವಾರ ಭೇಟಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.
ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ
ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...








