Manish Sisodia: ದೆಹಲಿ ಉಪಮುಖ್ಯಮಂತ್ರಿ ಬ್ಯಾಂಕ್ ಲಾಕರ್ ಪರಿಶೀಲಿಸಿ CBI
ಸಿಬಿಐ ಅಧಿಕಾರಿಗಳು ಮಂಗಳವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬ್ಯಾಂಕ್ ಲಾಕರ್ ಗಳನ್ನ ಪರಿಶೀಲಿಸಿದರು. ಸಿಬಿಐ ದಾಳಿಯ ವೇಳೆ ಮನೆಯಲ್ಲೂ ಏನೂ ಪತ್ತೆಯಾಗಿಲ್ಲ ಬ್ಯಾಂಕ್ ಲಾಕರ್ ಅಲ್ಲೂ ಏನೂ ಪತ್ತೆಯಾಗಿಲ್ಲ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಸುಮಾರು ಐದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಅಧಿಕಾರಿಗಳ ತಂಡ ರಾಜಧಾನಿಯ ಹೊರವಲಯದಲ್ಲಿರುವ ಗಾಜಿಯಾಬಾದ್ನ ಸೆಕ್ಟರ್ 4 ವಸುಂಧರಾದಲ್ಲಿರುವ PNB ಶಾಖೆಯ ಲಾಕರ್ ಗಳನ್ನ ತಡಕಾಡಿದ್ದಾರೆ.
ದೆಹಲಿ ಸರ್ಕಾರದ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿ ಅಕ್ರಮ ಪ್ರಕರಣದಕ್ಕೆ ಸಂಬಂಧಿಸಿದಂತೆ ದಾಖಲಿಸಿದ ಎಫ್ಐಆರ್ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಹೆಸರು ಸಹ ಸೇರಿದೆ.
“ನಾಳೆ, ನಮ್ಮ ಬ್ಯಾಂಕ್ ಲಾಕರ್ ಪರಿಶೀಲಿಸಲು ಸಿಬಿಐ ಬರುತ್ತಿದೆ, ಆಗಸ್ಟ್ 19 ರಂದು ನನ್ನ ನಿವಾಸದಲ್ಲಿ 14 ಗಂಟೆಗಳ ಕಾಲ ದಾಳಿ ನಡೆಸಿದಾಗ ಅವರಿಗೆ ಏನೂ ಸಿಕ್ಕಿಲ್ಲ. ಲಾಕರ್ನಲ್ಲಿಯೂ ಅವರು ಏನನ್ನೂ ಕಾಣುವುದಿಲ್ಲ. ಸಿಬಿಐ ಸ್ವಾಗತ. ನನ್ನ ಕುಟುಂಬ ಮತ್ತು ನಾನು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.