ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Helth Tips-ಮಳೆಗಾಲದಲ್ಲಿ ಆರೋಗ್ಯ ಕಾಪಾಡುವ ಆಹಾರಗಳು

ನಮ್ಮ ಆಹಾರ ಪದ್ಧತಿಯಲ್ಲಿ ಕೆಲವೊಂದಿಷ್ಟು ವಸ್ತುಗಳನ್ನು ದೈನಂದಿನ ಸೇವನೆಯ ಪಟ್ಟಿಗೆ ಸೇರಿಸಿಕೊಳ್ಳುವುದು ಉತ್ತಮ ಆ ರೀತಿ ಆಹಾರ ಪಟ್ಟಿಯ ಬಗ್ಗೆ ನಿಮಗೆ ಮಾಹಿತಿ ತಿಳಿದಿಲ್ಲವಾದರೆ. ಅದರ ಬಗ್ಗೆ ಮಾಹಿತಿ ಇಲ್ಲಿದೆ. 

Ranjeeta MY by Ranjeeta MY
September 1, 2022
in Health, Newsbeat, ಆರೋಗ್ಯ
good food good health

good food. good health

Share on FacebookShare on TwitterShare on WhatsappShare on Telegram

ಮಳೆಗಾಲ ಅಂದ್ರೆ ಯಾರಿಗ್ತಾನೆ ಇಷ್ಟ ಇಲ್ಲ ಹೇಳಿ. ಅದು ಈಗಿನ ಮಳೆಯಲ್ಲಿ ಸಂಜೆಯ ಹೊತ್ತಲ್ಲಿ, ಚುಮು ಚುಮು ಚಳಿಯಲ್ಲಿ, ಛಾ ಜೊತೆ ಬಿಸಿ ಬಿಸಿಯಾಗಿ ಏನಾದ್ರು ತಿನ್ಬೇಕಂತ ಮನಸ್ಸು ಹೇಳುವುದಂತೂ ಸಹಜ.

ಇನ್ನು ಕೆಲವರಿಗಂತೂ ಮಳೆಯಲ್ಲಿ ಐಸ್ ಕ್ರೀಮ್ ತಿನ್ನೋದು ಒಂದು ರೀತಿಯ ಖುಷಿ ಕೊಡುತ್ತೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಹಾಗೂ ಕೆಲವರಿಗಂತೂ ಮಳೆಗಾಲ ಬಂದ್ರೆ ಸಾಕು ಕುರುಕಲ್ಲು ತಿಂಡಿಗಳನ್ನು ತಿನ್ನುವುದು ಬಹಳ ಇಷ್ಟ.
ಆದರೆ ಈ ಮಳೆಗಾಲದಲ್ಲಿ ನಾವು ಅನುಸರಿಸುವ ಲೈಫ್ ಸ್ಟೈಲ್ ಎಷ್ಟು ಉತ್ತಮ.? ಎಷ್ಟು ಆರೋಗ್ಯಕರ.? ಎಂದು ಯಾವಾಗ್ಲಾದ್ರೂ ಯೋಚಿಸಿದ್ದೀರಾ..?

ಮಳೆಗಾಲದಲ್ಲಿ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಬೇಕಾದರೆ ಕೆಲವೊಂದಿಷ್ಟು ಮನೆಗೆ ಮದ್ದುಗಳನ್ನು ಅನುಸರಿಸುವುದು ಅತ್ಯವಶ್ಯಕವಾಗಿರುತ್ತದೆ.
ಅದರಂತೆ ನಮ್ಮ ಆಹಾರ ಪದ್ಧತಿಯಲ್ಲಿ ಕೆಲವೊಂದಿಷ್ಟು ವಸ್ತುಗಳನ್ನು ದೈನಂದಿನ ಸೇವನೆಯ ಪಟ್ಟಿಗೆ ಸೇರಿಸಿಕೊಳ್ಳುವುದು ಉತ್ತಮ.

ಆ ರೀತಿ ಆಹಾರ ಪಟ್ಟಿಯ ಬಗ್ಗೆ ನಿಮಗೆ ಮಾಹಿತಿ ತಿಳಿದಿಲ್ಲವಾದರೆ. ಅದರ ಬಗ್ಗೆ ಮಾಹಿತಿ ಇಲ್ಲಿದೆ.

ಹೆಚ್ಚಾಗಿ ಪ್ರೋಟೀನ್ ಅಂಶ ಇರುವ ಆಹಾರಗಳ ಸೇವನೆ.
ನಾವು ಸೇವಿಸುವ ಆಹಾರಗಳಲ್ಲಿ ಆರೋಗ್ಯಕ್ಕೆ ಬೇಕಾದ ಪ್ರೋಟೀನ್ ಅಂಶವಿರುವ ಆಹಾರ ಪದಾರ್ಥಗಳನ್ನುಹೆಚ್ಚು ಸೇವಿಸಿ.

ಮಳೆಗಾಲದಲ್ಲಿ  ಈ ರೀತಿ ಆಹಾರಗಳನ್ನು ನಿಯಮಿತವಾಗಿ ಸೇವಿಸುವುದರಿಂದ  ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಹಾಲು ಮತ್ತು ಹಾಲಿನ ಉತ್ಪನ್ನಗಳು, ಮೊಟ್ಟೆ ಮತ್ತು ಕೋಳಿ ಮಾಂಸ ಹಾಗೂ ಹೆಸರು ಬೇಳೆ, ಕೆಂಪು ಬೇಳೆ, ಅಲಸಂದಿ ಕಾಳು, ಕೆಂಪು ಬಳ್ಳಿ ಹುರುಳಿ, ಸೋಯಾ ಅವರೆ ಕಳು ಅಂತಹ ದ್ವಿದಳ ಧಾನ್ಯಗಳು ಆರೋಗ್ಯಕ್ಕೆ ಪ್ರೋಟೀನ್ ಗಳನ್ನು ಉತ್ತಮವಾಗಿ ಒದಗಿಸುತ್ತವೆ.

ಹಸಿರು ತರಕಾರಿಗಳನ್ನು ಹೆಚ್ಚಾಗಿ ಸೇವಿಸುವುದು.
ಸೋರೆಕಾಯಿಗಳ ಋತು ಎಂದೇ ಕರೆಯುವ ಮಳೆಗಾಲದಲ್ಲಿ ಈ ಹಸಿರು ತರಕಾರಿಯನ್ನು ಹೇರಳವಾಗಿ ನೋಡಬಹುದಾಗಿದೆ. ಈ ತರಕಾರಿಯ ಸೇವನೆ ಉತ್ತಮ.

ಶುಂಠಿ ಮತ್ತು ಬೆಳ್ಳುಳ್ಳಿಯನ್ನು ನಿಮ್ಮ ಆಹಾರಗಳಲ್ಲಿ ಹೆಚ್ಚಾಗಿ ಬಳಸಿರಿ

ದೈನಂದಿನ ಅಡುಗೆಯಲ್ಲಿ ಶುಂಠಿ ಮತ್ತು ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಸುವುದ ಉತ್ತಮ.

ಮಳೆಗಾಲದಲ್ಲಿ ಆಗಾಗ ಬರುವಂತಹ ಶೀತ,ಕೆಮ್ಮು,ಜ್ವರಗಳ ವಿರುದ್ಧ ನಮ್ಮ ದೇಹ ಹೋರಾಡಲು ಸಹಾಯ ಮಾಡುತ್ತದೆ.

ಮೂಗು ಮತ್ತು ಗಂಟಲಿನ ಸೋಂಕು ನಿವಾರಿಸುವಲ್ಲಿ ಶುಂಠಿ ಮತ್ತು ಬೆಳ್ಳುಳ್ಳಿ ಹೆಚ್ಚು ಪರಿಣಾಮಕಾರಿಯಾಗಿದೆ.

ಒಮೆಗಾ-3 ಕೊಬ್ಬಿನಾಮ್ಲಗಳಿರುವ ಪದಾರ್ಥಗಳನ್ನು ಸೇವಿಸಿರಿ
ಒಮೆಗಾ-3 ಯು ಪ್ರತಿರಕ್ಷಣಾ ಮಾಡ್ಯುಲೇಟರಿ ಪರಿಣಾಮವನ್ನು ಹೊಂದಿದೆ. ಮಳೆಗಾಲದಲ್ಲಿ, ಆಹಾರ ಮತ್ತು ನೀರಿನ ನಿಂದ ಸೋಂಕಿನ ಅಪಾಯವು ಹೆಚ್ಚಾವ ಸಮಯದಲ್ಲಿ,ರೋಗ ನಿರೋಧಕ ಶಕ್ತಿಯನ್ನುದೇಹದಲ್ಲಿ ಹೆಚ್ಚಿಸಲು ಈ ಅಂಶ ಸಹಾಯ ಮಾಡುತ್ತದೆ.

ಮೀನುಗಳು, ಸೀಗಡಿಗಳು, ಸಿಂಪಿಗಳು, ಬೀಜಗಳು, ಮತ್ತು ವಾಲ್ನಟ್ ಗಳು, ಪಿಸ್ತಾ, ಚಿಯಾ ಬೀಜಗಳು, ಅಗಸೆ ಬೀಜಗಳು ಮುಂತಾದ ಎಣ್ಣೆ ಬೀಜಗಳಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಹೆಚ್ಚಾಗಿಕಂಡು ಬರುತ್ತವೆ..

ಅಡುಗೆಯಲ್ಲಿ ಹಸಿರು ಕಾಳು ಮೆಣಸಿನ ಬಳಕೆ.
ಪೈಪರಿನ್ ಎಂಬ ಅಂಶವನ್ನು ಹಸಿರು ಕಾಳು ಮೆಣಸು ಹೊಂದಿರುತ್ತದೆ.  ವಿವಿಧ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಆಲ್ಕಲಾಯ್ಡ್ ಅನ್ನು ಹೊಂದಿದೆ.

ಇದರಲ್ಲಿ ವಿಟಮಿನ್ ಸಿ ಮತ್ತು ಕೆ ಯನ್ನುಹೊಂದಿದೆ.ಉತ್ಕರ್ಷಣ ನಿರೋಧಕ ಅಂಶಗಳನ್ನು ಹಸಿರು ಕಾಳು ಮೆಣಸುಗಳು ಹೊದಿರುತ್ತವೆ. ಇದು ಫ್ರೀ ರ್‍ಯಾಡಿಕಲ್ ಗಳನ್ನು ನಿಷ್ಕ್ರಿಯಗೊಳಿಸುವ ಮೂಲಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

ಮೆಂತ್ಯೆ ಬೀಜಗಳನ್ನು ಮತ್ತು ಮೆಂತ್ಯೆ ಸೊಪ್ಪನ ಬಳಕೆ.
ಮೆಂತ್ಯವು ಶಕ್ತಿ ವರ್ಧಕವಾಗಿದೆ. ಸಾಮಾನ್ಯವಾಗಿ ಬರುವ ಜ್ವರ ಮತ್ತು ಅಜೀರ್ಣತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.ಈ ಕಾಳುಗಳು ಖನಿಜಗಳನ್ನ ಒಳಗೊಂಡಿರುತ್ತವೆ

ಹೆಚ್ಚು ಹಣ್ಣುಗಳನ್ನು ಸೇವನೆ.
ವಿಟಮಿನ್ ಎ ಮತ್ತು ಸಿ ಹೊಂದಿರುವ ಪೀಚ್, ಪ್ಲಮ್, ಚೆರ್ರಿ, ದಾಳಿಂಬೆಯಂತಹ ಹಣ್ಣು ಗಳು   ಫೈಬರ್ ಮತ್ತು ಹೇರಳವಾದ ನಿರೋಧಕಗಳಿಂದ ತುಂಬಿರುತ್ತವೆ.

ರಸ್ತೆ ಬದಿ ವ್ಯಾಪಾರಿಗಳಿಂದ ಮೊದಲೇ ಕತ್ತರಿಸಿದ ಹಣ್ಣುಗಳನ್ನು ತಿನ್ನುವುದನ್ನು ಮತ್ತು ಹಣ್ಣುಗಳ ರಸ ಅಥವಾ ಜ್ಯೂಸ್ ಗಳನ್ನು ಕುಡಿಯುವುದನ್ನು ನಿಲ್ಲಿಸಿರಿ.

ಮನೆಯಲ್ಲಿ ತಾಜಾ ಕತ್ತರಿಸಿದ ಹಣ್ಣುಗಳು ,ಜ್ಯೂಸ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವಾಗಿರಬಹುದು.

ದ್ರವ ಪದಾರ್ಥಗಳ ಹೆಚ್ಚಾಗಿ ಸೇವನೆ.
ಸೂಪ್, ಮಸಾಲಾ ಚಹಾ, ಹಸಿರು ಚಹಾ (ಗ್ರೀನ್‌ ಟೀ), ಸಾರು,  ಇತ್ಯಾದಿಗಳಂತಹ ಸಾಕಷ್ಟು ಬೆಚ್ಚಗಿನ ದ್ರವಗಳನ್ನು ಸೇವಿಸುವುದರಿಂದ ದೇಹದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತದೆ.

ಮರುಜಲೀಕರಣಕ್ಕೆ ಒಳ್ಳೆಯದು ಮತ್ತು ದೇಹದಲ್ಲಿನ ರೋಗ ನಿರೋಧಕ ವ್ಯವಸ್ಥೆಯನ್ನು  ಇದು ಬಲಪಡಿಸುತ್ತದೆ.

ಅರಿಶಿಣ  ಮಿಶ್ರಿತ ಹಾಲಿನಲ್ಲಿ ಸೇವನೆ.
ಅರಿಶಿನವು ಕರ್ಕ್ಯುಮಿನ್ ಆಂಶವನ್ನು  ಹೊಂದಿರುತ್ತದೆ.

ಇದರಲ್ಲಿಉತ್ಕಕೃಷ್ಟ ಪ್ರಮಾಣದ ನಿರೋಧಕ, ಆಂಟಿಮೈಕ್ರೊಬಿಯಲ್ ಪರಿಣಾಮಗಳನ್ನು ಹೊಂದಿದೆ.

ಎಚ್. ಪೈಲೋರಿ, ಎಂ.ಆರ್.ಎಸ್.ಎ. ಮುಂತಾದ ಸೂಕ್ಷ್ಮಜೀವಿಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ.

ಗ್ಯಾಸ್ಟ್ರಿಕ್, ಹುಣ್ಣುಗಳನ್ನು ತಡೆಯುತ್ತದೆ, ರೋಗ ನಿರೋಧಕ ಪ್ರತಿಕ್ರಿಯೆಯನ್ನು ಸುಧಾರಿಸುತ್ತದೆ.

ಇತರ ರಕ್ಷಣಾತ್ಮಕ ಮತ್ತು ತಡೆಗಟ್ಟುವ ಕಾರ್ಯಗಳು  ಮಲೇರಿಯಾ ವಿರೋಧಿ ಹೋರಾಡಲು ಸಹಾಯ ಮಾಡುತ್ತದೆ.

Tags: food tipsGood foodgood healthHealth tipsHealthy foodsnews for healthrainy season foods
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram