ಬೆಂಗಳೂರಿನ ಹೊರ ಹೊಲಯದಲ್ಲಿ ಧರ್ಮಸ್ಥಳದ ಕ್ಷೇಮವನ ಉದ್ಘಾಟನೆ…
ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕೇಂದ್ರದ ವತಿಯಿಂದ ಬೆಂಗಳೂರಿನ ನೆಲಮಂಗಲದ ಹೊರ ವಲಯದಲ್ಲಿಂದು ನೂತನವಾಗಿ ನಿರ್ಮಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ -ಕ್ಷೇಮವನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಈವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆದಿಚುಂಚನಗಿರಿ ಮಹಾಸಂಸ್ಥಾನ ಪೀಠದ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತಿತರರು ಉಪಸ್ಥಿತರಿದ್ದರು.
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವನ ಎಂದರೆ ಹಸಿರು, ಸಮೃದ್ಧಿ ಹಾಗೂ ಆಮ್ಲಜನಕ. ಆಮ್ಲಜನಕ ಜೀವನದ ಸೂತ್ರ. ಈ ಕ್ಷೇಮವನ, ಜೀವನದ ಸೂತ್ರವಾಗಲಿ ಎಂದು ಹಾರೈಸಿದರು. ಆರೋಗ್ಯ ಎನ್ನುವುದು ಮನಸ್ಥಿತಿಯ ಮೇಲೆ ಅವಲಂಬಿತವಾಗಿದೆ. ದೇಹ ಮತ್ತು ಮನಸ್ಸುಗಳಿಗೆ ಆರೋಗ್ಯ ನೀಡುವ ಕೆಲಸವನ್ನು , ಕ್ಷೇಮವನ ಮಾಡುತ್ತದೆ. ಬಾಹ್ಯದಿಂದ ಚಿಕಿತ್ಸೆ, ಔಷಧ ನೀಡದೇ ಸಹಜ ರೀತಿಯಲ್ಲಿ ಚಿಕಿತ್ಸೆ ನೀಡಿ ರೋಗ ವಾಸಿ ಮಾಡುವ ಕ್ಷೇತ್ರ ಕ್ಷೇಮವನ ಎಂದು ಹೇಳಿದರು.
ಚಿಕಿತ್ಸೆಯಲ್ಲಿ ಧರ್ಮವನ್ನು ಸೇರಿರುವ ಕ್ಷೇತ್ರ . ದೇಹ ಮತ್ತು ಮನಸ್ಸಿನ ನಡುವೆ ಉತ್ತಮ ಸ್ಥಿತಿಯ ಆರೋಗ್ಯ, ಸಂಯಮ, ಮನಸ್ಥಿತಿ ಅಗತ್ಯ. ಮನಸ್ಸು ಹತೋಟಿಯಲ್ಲಿದ್ದರೆ, ಸ್ಥಿತಪ್ರಜ್ಞೆತೆಗೆ ದಾರಿ ಮಾಡಿಕೊಡುತ್ತದೆ. ಮಾನವ ಪ್ರತಿ ಅಂಗಾಂಗವು ಕ್ಷೇಮವಾಗಿರಬೇಕು. ಹೀಗಾಗಿ ದಿನಚರಿ ಶಿಸ್ತಿನಿಂದ ಕೂಡಿರಬೇಕು ಎಂದು ಹೇಳಿದರು.
ವೀರೇಂದ್ರ ಹೆಗ್ಗಡೆ ಅವರು ಸಮಾಜದಲ್ಲಿರುವ ಕಂದಚಾರವನ್ನು ದೂರ ಮಾಡಿ, ಸಕಾರಾತ್ಮಕ ಬದುಕಿಗೆ ಹೊಸ ಆಯಾಮ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ, ಎಲ್ಲರಿಗೂ ಶುದ್ಧ ಕುಡಿಯುವ ನೀರು ದೊರೆಯ ಬೇಕು ಎನ್ನುವ ಪರಿಕಲ್ಪನೆಯಡಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.








