ಮಂಗಳೂರು: ತುಳು ಭಾಷೆಯನ್ನು ಅಧಿಕೃತ ರಾಜ್ಯಭಾಷೆಯಾಗಿ ಮಾಡುವ ಭರವಸೆ ಕಾರ್ಯರೂಪಕ್ಕೆ ಬರಬೇಕೆಂದು ಆಗ್ರಹಿಸಿ ಜೈ ತುಳುನಾಡ್ ಸಂಘಟನೆ ಟ್ವಿಟ್ಟರ್ ಅಭಿಯಾನ ಆರಂಭಿಸಿತ್ತು. ಟ್ವೀಟ್ ತುಳುನಾಡ್ ಅಭಿಯಾನ ಸೋಮವಾರ ಸಂಜೆ 6ರಿಂದ ರಾತ್ರಿ 10ರ ವರೆಗೆ ನಡೆಯಿತು. #TuluOfficialinKA_KL ಹ್ಯಾಶ್ಟ್ಯಾಗ್ ಅಡಿಯಲ್ಲಿ ಅಭಿಯಾನ ನಡೆಸಲಾಯಿತು.
ತುಳು ಅಧಿಕೃತ ರಾಜ್ಯಭಾಷೆ ಮಾಡಬೇಕೆಂಬ ತುಳುನಾಡಿನ ಕೂಗನ್ನು ಈಗಾಗಲೇ ಇಲ್ಲಿನ ಶಾಸಕರು ಸರಕಾರಕ್ಕೆ ತಲುಪಿಸಿದ್ದಾರೆ. ಫೆ. 18ರಿಂದ ವಿಧಾನ ಮಂಡಲದ ಅಧಿವೇಶನ ಆರಂಭವಾಗುವುದರಿಂದ ಮತ್ತೂಮ್ಮೆ ನೆನಪಿಸುವ ಉದ್ದೇಶದಿಂದ ಹ್ಯಾಶ್ಟ್ಯಾಗ್ ಅಭಿಯಾನ ನಡೆಸಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ.
ಜೈ ತುಳುನಾಡ್ ಸಂಘಟನೆಯು ಈಗಾಗಲೇ ಹಲವು ಬಾರಿ ಟ್ವಿಟ್ಟರ್ ಅಭಿಯಾನ ನಡೆಸಿ ಜನಪ್ರತಿನಿಧಿಗಳ ಸೆಳೆಯುವಂತೆ ಮಾಡುವಲ್ಲಿ ಪ್ರಯತ್ನಿಸಿದೆ.
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...








