ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

State-ರಾಜ್ಯದ ರಾಜಕೀಯ ಘನತೆ ಮಣ್ಣುಪಾಲು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌

ಅಧಿಕಾರ ಕಳೆದುಕೊಂಡು ಹತಾಶರಾದ ಕಾಂಗ್ರೆಸ್‌ ನಾಯಕರಿಂದ ಪೇಸಿಎಂ ಅಭಿಯಾನ

Ranjeeta MY by Ranjeeta MY
September 24, 2022
in Newsbeat, State, ಬೆಂಗಳೂರು
Share on FacebookShare on TwitterShare on WhatsappShare on Telegram

ಕಾಂಗ್ರೆಸ್‌ನ ಹಿರಿಯ ನಾಯಕರೇ ಜಾಮೀನು ಮೇಲೆ ಹೊರಗಿದ್ದಾರೆ

ಮಾಜಿ ಮುಖ್ಯಮಂತ್ರಿಗಳು ಹೋಗಿ ಪೋಸ್ಟರ್‌ ಅಂಟಿಸುವ ಘಟನೆ 75 ವರ್ಷಗಳಲ್ಲಿ ಎಲ್ಲೂ ನಡೆದಿಲ್ಲ

Related posts

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

February 12, 2026
ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

February 12, 2026

ಬೆಂಗಳೂರು, ಸೆಪ್ಟೆಂಬರ್‌ 24, ಶನಿವಾರ

ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್‌ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಡೀ ದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ ನಾಯಕರು ಇಂತಹ ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡಿ ಬೆತ್ತಲಾಗಿದ್ದಾರೆ. ಆದರೆ ಅವರು ಏನೇ ಮಾಡಿದರೂ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅನಿಲ್‌ ಅಯ್ಯರ್‌ ಎಂಬುವರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ಸತ್ಯ ಹರಿಶ್ಚಂದ್ರರಂತೆ ವರ್ತನೆ ಮಾಡುತ್ತಿದ್ದಾರೆ. ಆದರೆ ಅವರ ಹಿರಿಯ ನಾಯಕರೇ ಜಾಮೀನು ಮೇಲೆ ಹೊರಗಿದ್ದಾರೆ. ಭ್ರಷ್ಟಾಚಾರದಿಂದಲೇ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡಿದೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದರು.

ಪದೇ ಪದೇ 40% ಕಮಿಶನ್‌ ಬಗ್ಗೆ ಹೇಳಿದರೆ ಜನರು ನಂಬುತ್ತಾರೆ ಎಂದು ಕಾಂಗ್ರೆಸ್‌ ತಿಳಿದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಅವರು ಜನಸಾಮಾನ್ಯರ ಸಿಎಂ ಎಂಬುದು ಜನರಿಗೆ ಗೊತ್ತಿದೆ. ಮುಖ್ಯಮಂತ್ರಿಗಳು ಒಳ್ಳೆಯ ಆಡಳಿತವನ್ನು ನೀಡುವುದನ್ನು ಕಾಂಗ್ರೆಸ್‌ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಾಜಿ ಮುಖ್ಯಮಂತ್ರಿಯೊಬ್ಬರು ಹೋಗಿ ಪೋಸ್ಟರ್‌ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ ಎಂದರು.

ಸಮುದಾಯದ ವಿರುದ್ಧ ನಡೆ

ಕಾಂಗ್ರೆಸ್‌ ಹಿಂದಿನಿಂದಲೂ ಪ್ರಬಲ ಸಮುದಾಯದವರ ವಿರುದ್ಧ ಕೆಲಸ ಮಾಡುತ್ತಿದೆ. ಹಿಂದೆ ವೀರೇಂದ್ರ ಪಾಟೀಲ್‌, ಕೆಂಗಲ್‌ ಹನುಮಂತಯ್ಯ ಅವರ ವಿರುದ್ಧ ಕಾಂಗ್ರೆಸ್‌ ಹೀಗೆಯೇ ಕೆಲಸ ಮಾಡಿತ್ತು. ಅದರಲ್ಲೂ ಲಿಂಗಾಯತ ಸಮುದಾಯದವರ ವಿರುದ್ಧ ಕಾಂಗ್ರೆಸ್‌ನವರು ಕೆಲಸ ಮಾಡುತ್ತಾರೆ. ಇದರಿಂದಾಗಿಯೇ ಅಧಿಕಾರಕ್ಕೆ ಬರುವ ಅಲ್ಪ ಅವಕಾಶವನ್ನೂ ಕಳೆದುಕೊಂಡಿದ್ದಾರೆ. ಜನಸಾಮಾನ್ಯರೇ ಕಾಂಗ್ರೆಸ್‌ ಗೆ ಸರಿಯಾದ ಉತ್ತರ ನೀಡಲಿದ್ದಾರೆ. ಚುನಾವಣೆಯ ಸಮಯದಲ್ಲಿ ಜನರೇ ಕಾಂಗ್ರೆಸ್‌ ನಾಯಕರನ್ನು ಮನೆಗೆ ಕಳುಹಿಸುತ್ತಾರೆ ಎಂದರು.

ಹಿರಿಯ ನಾಯಕ ಕೆ.ಎಚ್‌.ಮುನಿಯಪ್ಪ ಅವರೊಂದಿಗೆ ನನಗೆ ಉತ್ತಮ ವೈಯಕ್ತಿಕ ಸಂಬಂಧವಿದೆ. ಹೀಗಾಗಿ ಅವರನ್ನು ಭೇಟಿ ಮಾಡಲಾಗಿದೆಯೇ ಹೊರತು ಅದರಲ್ಲಿ ರಾಜಕೀಯ ಇಲ್ಲ. ಅವರು ಎಲ್ಲಿದ್ದರೂ ರಾಜಕೀಯ ಶಕ್ತಿಯಾಗಿಯೇ ಇದ್ದಾರೆ. ಯಾವುದೇ ಒಳ್ಳೆಯ ನಾಯಕರು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ. ಅನೇಕ ಮುಖಂಡರ ಜೊತೆ ನಾನು ಸಂಪರ್ಕದಲ್ಲಿದ್ದೇನೆ ಎಂದರು.

Tags: #Minister Dr.K.Sudhakar.dignity is at stake:educationHealth and MedicalState's political
ShareTweetSendShare
Join us on:

Related Posts

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram