Bharat Jodo Yatra – ಭಾರತ್ ಜೋಡೋ ಯಾತ್ರೆ : ಸಂಚಾರಕ್ಕೆ ಬದಲಿ ಮಾರ್ಗ
ಚಾಮರಾಮನಗರ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸಲಿದ್ದು, ಅಂತರರಾಜ್ಯ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ.
ಮೊದಲ ದಿನ ರಾಹುಲ್ ಗಾಂಧಿ ಹಾಗು 120 ಪಾದಯಾತ್ರಿಗಳೊಂದಿಗೆ ರಾಷ್ಟ್ರ ಹಾಗು ರಾಜ್ಯ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.
ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆ.ಎಚ್. ಮುನಿಯಪ್ಪ, ರೆಹಮಾನ್ ಖಾನ್ ಮೊದಲಾದವರು ಭಾಗಿಯಾಗಲಿದ್ದಾರೆ.

ಸಂಚಾರ ಹೇಗೆ ?
ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕೇರಳದ ಸುಲ್ತಾನ್ ಬತ್ತೇರಿಯಿಂದ ಮೂಲೆಹೊಳೆ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು ಬದಲಿ ಮಾರ್ಗ ಬಳಸಬೇಕಾಗಿದೆ.
ಗುಂಡ್ಲುಪೇಟೆಯ ಕಗ್ಗಳದಹುಂಡಿ ಗ್ರಾಮದ ಕ್ರಾಸ್ ಬಳಿಯಿಂದ ಚೆನ್ನಮಲ್ಲಿಪುತ – ಹೊಂಗಹಳ್ಳಿ- ಮೂಕಹಳ್ಳಿ- ಮುಂಟಿಪುರ- ಬರಗಿ-ದೇಶಿಪುರ – ಆಲತ್ತೂರು ಮಾರ್ಗವಾಗಿ ಮೈಸೂರಿಗೆ ತೆರಳಬೇಕು.
ಕೇರಳದ ಸುಲ್ತಾನ್ ಬತ್ತೇರಿಯಿಂದ ಮೂಲೆಹೊಳೆ ಮಾರ್ಗವಾಗಿ ಊಟಿಗೆ ತೆರಳುವ ವಾಹನಗಳು ಗುಂಡ್ಲುಪೇಟೆಯ ಕಗ್ಗಳದಹುಂಡಿ ಕ್ರಾಸ್ ಬಳಿಯಿಂದ ಬೇರಂಬಾಡಿ-ಬೀಚನಹಳ್ಳಿ-ಲಕ್ಕಿಪುರ-ದೇವರಹಳ್ಳಿ-ಹಂಗಳ ಮಾರ್ಗವಾಗಿ ಊಟಿಗೆ ತೆರಳಬೇಕು.








