ಹೊಸದಿಲ್ಲಿ, ಜೂನ್ 8: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾರ್ಭಟ ದಿನದಿಂದ ದಿನಕ್ಕೆ ಜೋರಾಗಿ ಬಾಧಿಸುತ್ತಿದ್ದು, ಇಲ್ಲಿಯವರೆಗೆ ಒಟ್ಟು 27,654 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ.
ಈ ಮಧ್ಯೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅನಾರೋಗ್ಯಕ್ಕೆ ಒಳಗಾಗಿದ್ದು, ತಮ್ಮನ್ನು ತಾವೇ
ಐಸೋಲೇಶನ್ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಎಲ್ಲೆಡೆಯೂ ಕೊರೊನಾದ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಮಂಗಳವಾರ ಕರೋನಾ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆಯಿಂದ ಶೀತ , ಕೆಮ್ಮು , ಜ್ವರ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಐಸೋಲೇಶನ್ ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...








