Mallikarjun Kharge ಸಾಮಾನ್ಯ ಕಾರ್ಯಕರ್ತ ನಿಂದ ಎಐಸಿಸಿ ಅಧ್ಯಕ್ಷಗಿರಿ : ಕಾಂಗ್ರೆಸ್ ಭೀಷ್ಮ ಜರ್ಸಿ..
ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ನೂತನ ಅಧ್ಯಕ್ಷರಾಗಿ ಚುನಾಯಿತಗೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಒಟ್ಟು 9385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು.
ಈ ಪೈಕಿ ಮಲ್ಲಿಕಾರ್ಜುನ್ ಖರ್ಗೆ ಅವರು 7897 ಮತಗಳನ್ನು ಪಡೆದು ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.
ಖರ್ಗೆ ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ 1072 ಮತಗಳನ್ನು ಪಡೆದು ಸೋಲುಂಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ನ ಭೀಷ್ಮ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ.
ಸಾಮಾನ್ಯ ಕಾರ್ಯಕರ್ತ ನಿಂದ ಎಐಸಿಸಿ ಅಧ್ಯಕ್ಷಗಿರಿ
ಖರ್ಗೆ ಅವರ ಪೊಲಿಟಿಕಲ್ ಜರ್ನಿ ಶುರುವಾಗಿದ್ದು, ಕಾಲೇಜು ಯೂನಿಯನ್ ನಿಂದ. ಅವರು ಕಾಲೇಜು ಯೂನಿಯಲ್ ಎಲೆಕ್ಷನ್ ನಲ್ಲಿ ಜನರಲ್ ಸೆಕ್ರೆಟ್ರಿ ಯಾಗಿ ಆಯ್ಕೆಯಾಗಿದ್ದರು. ಕಲಬುಗರಿಯ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ನಾಯಕರಾಗಿ ಬೆಳೆದ ಖರ್ಗೆ, ಸಂಯುಕ್ತ ಮಜ್ದೂರ್ ಸಂಘದ ಕಾರ್ಮಿಕ ಸಂಘದಲ್ಲಿ ದೊಡ್ಡ ನಾಯಕರಾಗಿ ಗುರುಸಿಕೊಂಡರು.

1969ರಲ್ಲಿ ಕಾಂಗ್ರೆಸ್ ಪಾಳಯ ಸೇರಿದ ಖರ್ಗೆ 1972ರಲ್ಲಿ ಗುರುಮಿಠಕಲ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅಲ್ಲಿಂದ ಹಿಂದುರುಗಿ ನೋಡದ ಖರ್ಗೆ 2008ರ ವರೆಗೂ ಸತತ 9 ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದರ ನಡುವೆ 1990ರಲ್ಲಿ ಬಂಗಾರಪ್ಪ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ. ಧರ್ಮಸಿಂಗ್ ಸಂಪುಟದಲ್ಲಿ ಸಾರಿಗೆ, ಜಲ ಸಂಪನ್ಮೂಲ ಸಚಿವರಾಗಿ ಸೇವೆ ಸಲ್ಲಿದ್ದಾರೆ. 2005ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡರು. 2008ರಲ್ಲಿ ಎರಡನೇ ಬಾರಿಗೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದರು.
ಇದಾದ ಬಳಿಕ ರಾಷ್ಟ್ರ ರಾಜಕಾರಣಕ್ಕೆ ಧುಮುಕಿದ ಖರ್ಗೆ 2009ರಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಕೇಂದ್ರ ಮಂತ್ರಿಯಾದರು. ನಂತರ 2014ರಲ್ಲಿ ಎರಡನೇ ಬಾರಿಗೆ ಲೋಕಸಭಾ ಕ್ಷೇತ್ರದಿಂದ ಜಯ ಸಾಧಿಸಿದ್ರು. ಅಲ್ಲದೇ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿ ಆಯ್ಕೆಗೊಂಡರು. 2019ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸೋಲಿನ ರುಚಿಕಂಡ ಖರ್ಗೆ 2021ರಲ್ಲಿ ರಾಜ್ಯಸಭಾ ವಿಪಕ್ಷ ನಾಯಕರಾಗಿ ನೇಮಕಗೊಂಡರು.
ಸುಮಾರು 50 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿರುವ ಖರ್ಗೆ ಅವರು ಇದೀಗ ಅಖಿಲ ಭಾರತ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿ ಚುನಾಯಿತಗೊಂಡಿದ್ದಾರೆ.







