ಹಬ್ಬದ ದಿನಗಳಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಲ್ಲ – ಸರ್ಕಾರ ವಿಶ್ವಾಸ
ಪ್ರಸಕ್ತ ಹಬ್ಬ ಹರಿದಿನಗಳಲ್ಲಿ ಬೇಳೆಕಾಳು ಮತ್ತು ಈರುಳ್ಳಿ ಬೆಲೆ ಏರಿಕೆಯಾಗುವುದಿಲ್ಲ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.
ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್, ದೇಶದಲ್ಲಿ ಎರಡು ಸರಕುಗಳ ಸಾಕಷ್ಟು ದಾಸ್ತಾನು ಇದೆ ಮತ್ತು ಕೇಂದ್ರವು ಬೆಲೆ ಪರಿಸ್ಥಿತಿಯ ಮೇಲೆ ನಿಕಟ ನಿಗಾ ಇರಿಸುತ್ತಿದೆ ಎಂದು ಹೇಳಿದರು.
43 ಲಕ್ಷ ಟನ್ ಬೇಳೆಕಾಳುಗಳು ಮತ್ತು 2.5 ಲಕ್ಷ ಟನ್ ಈರುಳ್ಳಿ ಬಫರ್ ಸ್ಟಾಕ್ನಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. ಟೊಮೇಟೊ ಬೆಲೆಗಳ ಬಗ್ಗೆ, ಸಿಂಗ್ ಅವರು ಇದು ಹೆಚ್ಚು ಹಾಳಾಗುವ ವಸ್ತುವಾಗಿದೆ ಮತ್ತು ಅದರ ಬೆಲೆ ಸ್ಥಳೀಯ ದರಗಳು ಸೇರಿದಂತೆ ಹಲವಾರು ಅಂಶಗಳ ಮೇಲೆ ಅವಲಂಬಿತವಾಗಿರುವುದರಿಂದ ಹೆಚ್ಚು ಮಾಡಲಾಗುವುದಿಲ್ಲ ಎಂದು ಹೇಳಿದರು.
ವಿವಿಧ ಕಲ್ಯಾಣ ಯೋಜನೆಗಳಿಗೆ ಬಳಸಲು ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಿಯಾಯಿತಿ ದರದಲ್ಲಿ ಬೇಳೆಕಾಳುಗಳನ್ನು ನೀಡುತ್ತಿದೆ ಎಂದು ಕಾರ್ಯದರ್ಶಿ ಹೇಳಿದರು. ಬೇಳೆಕಾಳುಗಳ ಪೂರೈಕೆಗಾಗಿ ರಾಜ್ಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಅವರು ಹೇಳಿದರು.
Prices of pulses and onion will not go up during festive season: Government expresses confidence








