Siddaramaiah – ಸುಗ್ರೀವಾಜ್ಞೆ ಬಿಜೆಪಿಯವರ ಕಣ್ಣೊರೆಸುವ ತಂತ್ರ
ಬೆಂಗಳೂರು : ಪರಿಶಿಷ್ಠ ಜಾರಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಎ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವುದನ್ನ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ.
ಈ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರಿವಾಜ್ಞೆ ಬಿಜೆಪಿಯವರ ಕಣ್ಣೊರೆಸುವ ತಂತ್ರವಷ್ಟೆ ಎಂದು ವಾಗ್ದಾಳಿ ನಡೆಸಿದರು.
ನಾಳೆ ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಈ ಕಾರ್ಯಕ್ರಮಕ್ಕಾಗಿ ಸಿದ್ದರಾಮಯ್ಯ ಅವರು ದೆಹಲಿಗೆ ಹೊರಟರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾಗಮೋಹನ್ ದಾಸ್ ಕಮಿಟಿ ಮಾಡಿದ್ದು ನಮ್ಮ ಸರ್ಕಾರ.

ವರದಿ ಬಂದು ಎಷ್ಟು ಸಮಯ ಆಗಿದ್ದು, ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಕೊಡಬೇಕು ಎಂಬ ಇಚ್ಛೆ ಇದಿದ್ದರೆ ವರದಿ ಸಿಕ್ಕಿದ ಕೂಡಲೇ ಜಾರಿಗೆ ತರಬಹುದಿತ್ತು.
ಈಗ ಯಾಕೆ ತರಾತುರಿಯಲ್ಲಿ ಸುಗ್ರೀಯಾಜ್ಞೆ ತಂದರು ಪ್ರಶ್ನಿಸಿದ್ದಾರೆ.
ಈ ವರದಿ ಜಾರಿಗಾಗಿ ನಾವು ಸದನದಲ್ಲಿ ನಿರಂತರವಾಗಿ ಒತ್ತಾಯ ಮಾಡಿದ್ದೇವು.
ಈಗ ಸುಗ್ರೀವಾಜ್ಞೆ ಹೊರಡಿಸಿದ್ದಾರೆ. ಇದರ ಬದಲು ವಿಶೇಷ ಅಧಿವೇಶನ ಕರೆಯಬೇಕಾಗಿತ್ತು.
ಅಧಿವೇಶನ ಕರೆದು ಬಿಲ್ ಪಾಸ್ ಮಾಡಬೇಕಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.








