13 ವರ್ಷದ ಬಾಲಕಿ ಹೃದಯಾಘಾತದಿಂದ ಸಾವು, ಕಣ್ಣು ದಾನ ಮಾಡಿದ ಪೋಷಕರು..
8 ನೇ ತರಗತಿ ಓದುತಿದ್ಧ 13 ವರ್ಷದ ಬಾದಲಕಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ವ್ಯಾಪ್ತಿಯ ತಲ್ಲೂರಿನಲ್ಲಿ ನಡೆದಿದೆ.
ಕುಂದಾಪುರ ಅಕ್ಷರ ದಾಸೋಹ ಯೋಜನೆಯ ಉಪ ನಿರ್ದೇಶಕರಾದ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಫ್ರೌಡ ಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ(13) ಮೃತ ಬಾಲಕಿ.
ಬುಧವಾರ ಮನೆಯಲ್ಲಿ ಓದುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಸ್ಪತ್ರೆಗೆ ದಾಖಲಿಸಾಯಿತಾದರೂ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.
ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮಗಳ ಸಾವಿನ ನಡುವೆಯೂ ಪೋಷಕರು ಕಣ್ಣುಗಳನ್ನ ದಾನ ಮಾಡಿದ್ದಾರೆ. ಗುರುವಾರ ರಾತ್ರಿ ಅಂತ್ಯಸಂಸ್ಕಾರ ನೆರವೇರಿದೆ.
13-year-old girl died of a heart attack in Kundapura








