Sunil Kumar – ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಹಾವೇರಿ : ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಮ್ಮೇಳನವನ್ನು ನಡೆಸಲು ಸಾಧ್ಯವಾಗಿರಲಿಲ್ಲ.
ಈ ಬಾರಿ ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಜನವರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಹಾವೇರಿಯಲ್ಲಿ ನಿನ್ನೆ ನಡೆಯಿತು.
ಈ ವೇಳೆ ಮಾತನಾಡಿದ ಸುನೀಲ್ ಕುಮಾರ್, ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಮ್ಮೇಳನವನ್ನು ನಡೆಸಲು ಸಾಧ್ಯವಾಗಿರಲಿಲ್ಲ.
ಈ ಬಾರಿ ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು.
ಸಮ್ಮೇಳನದ ಯಶಸ್ವಿಗೆ ಐದು ಸಾವಿರ ಸ್ವಯಂ ಸೇವಕರನ್ನು ನೇಮಿಸಲಾಗಿದೆ. ಧಾರವಾಡ- ಹಾವೇರಿ- ದಾವಣಗೆರೆಯಲ್ಲಿ ಅತಿಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಷಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.