Bangalore Indira canteens closed – ಇಂದಿರಾ ಕ್ಯಾಂಟೀನ್ ಗಳಿಗೆ ಬೀಗ – ಕಾಂಗ್ರೆಸ್ ಆಕ್ರೋಶ
ಬೆಂಗಳೂರು : ನಗರದಲ್ಲಿ ವಿವಿಧ ಕಡೆ 40 ಇಂದಿರಾ ಕ್ಯಾಂಟೀನ್ ಗಳಿಗೆ ಬೀಗ ಬಿದ್ದಿದೆ. ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
ಕಾಂಗ್ರೆಸ್ ತನ್ನ ಟ್ವಿಟ್ಟರ್ ನಲ್ಲಿ.. ಬಿಜೆಪಿಗೆ ತಿಳಿದಿರುವುದು ಕನ್ನ ಹಾಕುವುದು ಮಾತ್ರ, ಅನ್ನ ಹಾಕುವುದಲ್ಲ. 20 ಕ್ಯಾಂಟೀನ್ಗಳಿಗೆ ಬೀಗ ಹಾಕಿದ ಬಸವರಾಜ ಬೊಮ್ಮಾಯಿ ಅವರೇ, ಬಡವರ ಹಸಿವಿಗೂ ಬೀಗ ಹಾಕುವಿರಾ? ಬಡವರ ಬದುಕನ್ನೂ ಮುಚ್ಚುವಿರಾ? ಬಡವರ ಹೊಟ್ಟೆಗೆ ಹೊಡೆಯುವುದೇ ನಿಮ್ಮ ದಮ್ಮು, ತಾಕತ್ತೇ? ಜನಪರ ಯೋಜನೆ ರೂಪಿಸುವುದಿರಲಿ, ಇರುವುದನ್ನು ಉಳಿಸದಿರುವುದೇಕೆ ಎಂದು ಪ್ರಶ್ನೆ ಮಾಡಿದೆ.
ಇದೇ ವೇಳೆ ಬೆಂಗಳೂರು ರಸ್ತೆಗಳಲ್ಲಿರುವ ಗುಂಡಿಗಳ ಬಗ್ಗೆ ಕಾಂಗ್ರೆಸ್ ತನ್ನ ಟ್ವಿಟ್ಟರ್ ನಲ್ಲಿ.. 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಲಿದೆ ಎಂದು ಮಾತಿನಲ್ಲಿ ಮುತ್ತಿನ ಹಾರ ಪೋಣಿಸುವ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ರಸ್ತೆಗುಂಡಿಗಳು ಹೂಡಿಕೆದಾರರಿಗೆ ಆಕರ್ಷಣೆಯೇ? #40 ಪರ್ಸೆಂಟ್ ಸರ್ಕಾರ ದಿಂದಾಗಿ ಬ್ರಾಂಡ್ ಬೆಂಗಳೂರು ಕಳೆದುಹೋಗಿದೆ, ಹೂಡಿಕೆದಾರರು ಇತರ ರಾಜ್ಯದತ್ತ ಮುಖ ಮಾಡುತ್ತಿದ್ದಾರೆ. ಇಂತಹ ಅವಮಾನಕರ ಸ್ಥಿತಿ ನಿರ್ಮಿಸಿದ್ದು ನಿಮ್ಮ ಸಾಧನೆಯೇ?
ರಸ್ತೆಗುಂಡಿಗಳಿಗೆ ದಿನಕ್ಕೊಂದು ಸಾವುಗಳಾಗುತ್ತಿವೆ, ಸರ್ಕಾರದ ಬೇಜವಾಬ್ದಾರಿತನ ಮಿತಿ ಮೀರಿದೆ. ರಸ್ತೆಗುಂಡಿಗಳಿಂದಾದ ಸಾವುಗಳನ್ನು ಸರ್ಕಾರಿ ಕೊಲೆ ಎಂದು ಪರಿಗಣಿಸಿ ಅಧಿಕಾರಿಗಳು, ಸಚಿವರನ್ನು ಆರೋಪಿಗಳನ್ನಾಗಿಸಿ ಪ್ರಕರಣ ದಾಖಲಿಸಬೇಕು. ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ‘ಮರಣಪಥ’ವನ್ನು ಸರಿಪಡಿಸುವ ದಮ್ಮು ತಾಕತ್ತು ತೋರಿಸುತ್ತಿಲ್ಲವೇಕೆ ಎಂದು ಪ್ರಶ್ನಿಸಿದೆ.