ಅಧಿಕಾರಕ್ಕೆ ಬಂದ್ರೆ ಅಗ್ನಿಫಥ್ ಯೋಜನೆ ರದ್ದು- ಪ್ರಿಯಾಂಕ ಗಾಂಧಿ
ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅಗ್ನಿಪಥ ಯೋಜನೆ ರದ್ದುಪಡಿಸುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಹೇಳಿದ್ದಾರೆ.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ನಿಮಿತ್ತ ಕಾಂಗ್ರಾ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ ಮಾತಾನಾಡಿದ ಪ್ರಿಯಾಂಕ ಕೊಟ್ಟ ಭರವಸೆಗಳನ್ನು ಖಂಡಿತ ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಕ್ಷಣಾ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಜಾರಿಗೆ ತಂದಿರುವುದು ಗೊತ್ತೇ ಇದೆ. ಈಗಾಗಲೇ ವಿವಿಧ ರಾಜ್ಯಗಳಲ್ಲಿ ಈ ಯೋಜನೆಯಡಿ ಆಯ್ಕೆಗಳನ್ನು ಮಾಡಲಾಗುತ್ತಿದೆ. ಪ್ರತಿಪಕ್ಷಗಳ ಟೀಕೆ ಮತ್ತು ಆಕ್ಷೇಪಗಳ ಹೊರತಾಗಿಯೂ, ರಕ್ಷಣಾ ಸಚಿವಾಲಯವು ಈ ಯೋಜನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೋದಿ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯನ್ನು ರದ್ದುಪಡಿಸುವುದಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಕಾಂಗ್ರಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ. ಭರವಸೆ ನೀಡಿದರೆ ಖಂಡಿತ ಈಡೇರಿಸುತ್ತೇವೆ ಎಂದಿದ್ದಾರೆ. ಛತ್ತೀಸ್ಗಢದಲ್ಲಿ ರೈತರ ಸಾಲ ರದ್ದು ಮಾಡುತ್ತೇವೆ ಎಂದು ಹೇಳಿ ಜಾರಿ ಮಾಡಿದ್ದೇವೆ ಎಂದಿದ್ದಾರೆ.
We will cancel the Agnipath scheme when our govt will be formed at the centre – Priyanka Gandhi Vadra
ಇದನ್ನೂ ಓದಿ – https://saakshatv.com/saakshatv-author…l-maru-avkasha-4/








