Shraddha Murder Case – updates
ದೇಶದಲ್ಲಿ ಪ್ರಬಲ ನಾಯಕರಿಲ್ಲದೇ ಇದ್ದರೆ ಅಫ್ತಾಬ್ ಆಮೀನ್ ನಂತಹ ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ ಎಂದು ಅಸ್ಸಾಂ ನ ಸಿಎಂ ಹಿಮಾಂತ ಬಿಸ್ವ ಶರ್ಮಾ ಎಚ್ಚರಿಕೆ ನೀಡಿದ್ದಾರೆ..
ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ರಾಷ್ಟ್ರ ರಾಜಧಾನಿ ಶ್ರದ್ಧಾ ಮರ್ಡರ್ ಕೇಸ್ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ತಿದೆ..
ರಾಜಕೀಯವಾಗಿಯೂ ಚರ್ಚೆಯಾಗ್ತಿರುವ ಬೆನ್ನಲ್ಲೇ ಅಸ್ಸಾಂ ಸಿಎಂ ಇಂತಹದೊಂದು ಹೇಳಿಕೆ ನೀಡಿದ್ದಾರೆ..
ಗುಜರಾತ್ ಚುನಾವಣಾ ಪ್ರಚಾರ ಸಭೆಯ ಭಾಗವಾಗಿ ಕಚ್ ನಲ್ಲಿ ನಡೆದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಅಸ್ಸಾಂ ಸಿಎಂ , ದೇಶದಲ್ಲಿ ಪ್ರಬಲ ನಾಯಕನಿಲ್ಲದಿದ್ದರೆ, ಅಫ್ತಾಬ್ ನಂತಹ ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ. ಆಗ ನಮ್ಮ ಸಮಾಜ ರಕ್ಷಿಸಲು ಸಾಧ್ಯವಾಗುವುದಿಲ್ಲ ಹೇಳಿದ್ದಾರೆ.
ಕೊಲೆ ಪ್ರಕರಣದ ಭೀಕರತೆಗಳನ್ನು ವಿಚಾರಿಸಿದಾಗ ಇದನ್ನು ಲವ್ ಜಿಹಾದ್ ಪ್ರಕರಣ ಎನ್ನಲಾಗಿದೆ. ಅಲ್ಲದೆ ಹಿಂದೂ ಮಹಿಳೆಯರು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಾರೆ ಎಂದು ಆರೋಪಿಸಿದ್ದಾರೆ.
ಮುಂಬೈನಿಂದ ಶ್ರದ್ಧಾಳನ್ನು ಕರೆದುಕೊಂಡು ಬಂದಿದ್ದ ಅಫ್ತಾಬ್ 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ್ದ. ಇದೇ ಸಮಯದಲ್ಲಿ ಮತ್ತೊಬ್ಬ ಮಹಿಳೆಯನ್ನು ಕರೆತಂದು ಲೈಂಗಿಕ ಸಂಪರ್ಕ ಮಾಡಿದ್ದಾನೆ.
ಇಂತಹ ಕೃತ್ಯಗಳಿಂದ ದೇಶವನ್ನು ರಕ್ಷಿಸಬೇಕಾದರೆ ನಮ್ಮ ದೇಶಕ್ಕೆ ಶಕ್ತಿಯುತ ನಾಯಕನನ್ನು ಹೊಂದಿರಬೇಕು, ರಾಷ್ಟ್ರವನ್ನು ತಮ್ಮ ತಾಯಿ ಎಂದು ಪರಿಗಣಿಸುವವರಾಗಿರಬೇಕು. ಹಾಗಾಗಿ 2024ರಲ್ಲಿ 3ನೇ ಬಾರಿಗೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ಬಹಳ ಮುಖ್ಯ ಎಂದು ಕರೆ ನೀಡಿದ್ದಾರೆ.








