ಕಾಂಗ್ರೆಸ್ ಸರ್ಕಾರ ಬುಡಕಟ್ಟು ಸಮುದಾಯವನ್ನು ಮತಬ್ಯಾಂಕ್ ಮಾಡಿಕೊಂಡಿತ್ತು – ಜೆ.ಪಿ. ನಡ್ಡಾ
ದೀರ್ಘಕಾಲ ದೇಶವನ್ನು ಆಳಿದ ಕಾಂಗ್ರೆಸ್ ಸರ್ಕಾರ ಬುಡಕಟ್ಟು ಸಮುದಾಯವನ್ನು ಮತಬ್ಯಾಂಕ್ ಮಾಡಿಕೊಂಡಿತ್ತು. ಬುಡಕಟ್ಟು ದಿನ ಆಚರಿಸಲು 74 ವರ್ಷಗಳ ಕಾಲ ಕಾಯಬೇಕಾಯಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕಾಂಗ್ರೇಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬುಡಕಟ್ಟು ಸಮುದಾಯದ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.
ಬಳ್ಳಾರಿಯಲ್ಲಿಂದು ಆಯೋಜಿಸಲಾಗಿದ್ದ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬುಡಕಟ್ಟು ಸಮುದಾಯದ ಮೀಸಲಾತಿಯನ್ನು ಶೇಕಡ 3ರಿಂದ ಶೇಕಡ 7ಕ್ಕೆ ಏರಿಕೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಕಲ್ಪಿಸಿ ಆಧುನಿಕ ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದೆ ಎಂದರು.
ಪ್ರಧಾನಮಂತ್ರಿ ವಸತಿ ಯೋಜನೆ, ಉಜ್ವಲಾ, ಬಡವರ ಕಲ್ಯಾಣ ಯೋಜನೆ ಮುಂತಾದವು ಬುಡಕಟ್ಟು ಸಮುದಾಯದ ಜನರ ಜೀವನ ಸುಗಮಗೊಳಿಸಲು ನೆರವಾಗಿವೆ ಎಂದು ತಿಳಿಸಿದರು.
ಬಸವರಾಜ ಬೊಮ್ಮಾಯಿ, ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹೆಚ್ಚಳ ನಿರ್ಧಾರದ ಮೂಲಕ ತಳಸಮುದಾಯಗಳಿಗೆ ಸಾಮಾಜಿಕ ಮನ್ನಣೆ ಸ್ವಾಭಿಮಾನದ ಬದುಕನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಸಮಭಾವದ ಮೂಲಕ ಸರ್ವ ಸಮಾನತೆಯನ್ನು ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಶೋಷಿತರ ಅಭಿವೃದ್ಧಿ ಮೂಲಕ ಪರಿವರ್ತನೆಯ ಸಂಕಲ್ಪಕ್ಕೆ ನಾಂದಿ ಹಾಡಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅರ್ಜುನ್ ಮುಂಡಾ, ಎ. ನಾರಾಯಣಸ್ವಾಮಿ, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಬಿ. ಶ್ರೀರಾಮುಲು ಸೇರಿದಂತೆ ಅನೇಕ ಗಣ್ಯರು ಭಾಗಿಯಾದರು.
The Congress government had made the vote bank of the tribal community – J.P. Nadda








