ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಂಟೈನ್ಮೆಂಟ್ ವ್ಯಾಖ್ಯಾನ ಬದಲಾಗಿದೆ, ಸೋಂಕಿತ ವ್ಯಕ್ತಿಯ ಮನೆ ಮಾತ್ರ ಕಂಟೈನ್ ಮೆಂಟ್ ಪ್ರದೇಶವಾಗಿರುತ್ತದೆ : ಡಾ.ಕೆ.ಸುಧಾಕರ್

saaksha tv by saaksha tv
June 12, 2020
in Newsbeat, Politics, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ನಗರದಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಒಟ್ಟು ಕೊರೋನ ಪ್ರಕರಣಗಳಲ್ಲಿ 50% ಜನರು ಗುಣಮುಖರಾಗಿದ್ದು ಮನೆಗೆ ಹಿಂದಿರುಗಿದ್ದಾರೆ. ಇನ್ನು ಉಳಿದ 50% ಪ್ರಕರಣಗಳಲ್ಲಿ 97% ಜನರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ. ಉಳಿದ 3% ಸೋಂಕಿತರಿಗೆ ಮಾತ್ರ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಇದಕ್ಕೆ ಕಾರಣಗಳನ್ನು ತಿಳಿಸಿದ ಸಚಿವ ಸುಧಾಕರ್, ಹೆಚ್ಚಿನ ಸೋಂಕಿತರು ರೋಗ ತೀವ್ರವಾಗಿ ಉಲ್ಬಣವಾದ ನಂತರ ಆಸ್ಪತ್ರೆಗೆ ಬರುತ್ತಿದ್ದಾರೆ. ಕೊನೆಯ ಹಂತದಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಐಎಲ್ಐ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಜ್ವರ ತಪಾಸಣಾ ಕೇಂದ್ರಗಳಿಗೆ ತೆರಳಿ ತೋರಿಸಿಕೊಳ್ಳುವಂತೆ ಸೂಚಿಸಿದರು. ಅದರಲ್ಲೂ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಯಾವುದೇ ಲಕ್ಷಣ ಕಂಡುಬಂದಲ್ಲಿ ಮನೆಯಲ್ಲಿರುವ ಯುವಕರು ಜವಾಬ್ದಾರಿಯಿಂದ ತುರ್ತಾಗಿ ತಪಾಸಣೆ ಮಾಡಿಸುವಂತೆ ಸಚಿವರು ಕೋರಿದರು. ನಗರದಲ್ಲಿ ದೊಡ್ಡ ದೊಡ್ಡ ಸ್ಟೇಡಿಯಂಗಳನ್ನು ಕ್ವಾರಂಟೈನ್ ಕೇಂದ್ರವಾಗಿ ಮಾರ್ಪಾಡು ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದರು.

Related posts

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

August 11, 2026
ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

August 11, 2026

ಬಿಬಿಎಂಪಿ ತಂಡ ರಚನೆ ರೋಗಲಕ್ಷಣಗಳಿರುವವರನ್ನು ಪತ್ತೆ ಹಚ್ಚಿ ತಪಾಸಣೆಗೆ ಒಳಪಡಿಸಲು ಅನುವಾಗುವಂತೆ ಬಿಬಿಎಂಪಿ ವತಿಯಿಂದ 800 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಮನೆಮನೆಗೆ ತೆರಳಿ ರೋಗ ಲಕ್ಷಣವಿರುವವರ ಸಮಿಕ್ಷೆ ನಡೆಸಲಿದ್ದಾರೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಸಚಿವರು ಕೋರಿದರು. ಇದರಿಂದಾಗಿ ಸೋಂಕಿತರ ಪತ್ತೆಗೆ ಅನುಕೂಲವಾಗಲಿದ್ದು, ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀದಬಹುದು ಎಂದು ಅವರು ಹೇಳಿದರು. ಬದಲಾದ ಕಂಟೈನ್ಮೆಂಟ್ ವ್ಯಾಖ್ಯಾನ ನಗರದಲ್ಲಿ ಕಂಟೈನ್ಮೆಂಟ್ ಪ್ರದೇಶಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಂಟೈನ್ಮೆಂಟ್ ಪ್ರದೇಶಗಳು ಈಗ ಮೊದಲಿನಂತಿಲ್ಲ. ಅದರ ವ್ಯಾಖ್ಯಾನ ಬದಲಾಗಿದೆ. ಮೊದಲು ಪೂರ್ಣ ವಾರ್ಡ್ಗಳನ್ನು ಅಥವಾ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಕಂಟೈನ್ಮೆಂಟ್ ಆಗಿ ಘೋಷಿಸಲಾಗುತ್ತಿತ್ತು. ಈಗ ಅದು ಕೇವಲ ಸೋಂಕಿತ ವ್ಯಕ್ತಿಯ ಮೆನೆಗೆ ಮಾತ್ರ ಸೀಮಿತವಾಗಿದೆ. ಆದ್ದರಿಂದ 1.2 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ 60 ಕಂಟೈನ್ಮೆಂಟ್ ಜ಼ೋನ್ ಹೆಚ್ಚೇನು ಅಲ್ಲ ಅಂದು ಸಚಿವರು ತಿಳಿಸಿದ್ದಾರೆ. ನಗರದಲ್ಲಿ ಕೋವಿಡ್ ಅಲ್ಲದ ರೋಗಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಂತ ಹಂತವಾಗಿ ಕೋವಿಡ್ ಅಲ್ಲದ ಚಿಕಿತ್ಸೆಗಾಗಿ ಮುಕ್ತವಾಗಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು. ಪ್ರಥಮ ಹಂತದಲ್ಲಿ ಬೋರಿಂಗ್ ಆಸ್ಪತ್ರೆಯನ್ನು ಕೋವಿಡ್ ಅಲ್ಲದ ರೋಗಗಳಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.

Tags: K.Sudhakar
ShareTweetSendShare
Join us on:

Related Posts

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

by Shwetha
August 11, 2026
0

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾಗಿದೆ ಎಂಬ ಆರೋಪ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ದೌರ್ಜನ್ಯದ ಆರೋಪ ಖಂಡಿಸಿ ವಿರೋಧ ಪಕ್ಷದ ಸಂಸದರು...

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ’; ಖಾತೆ ಹಂಚಿಕೆ ಬಗ್ಗೆ ಡಿಸಿಎಂ ಪರಂ ಸ್ಪಷ್ಟನೆ

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ’; ಖಾತೆ ಹಂಚಿಕೆ ಬಗ್ಗೆ ಡಿಸಿಎಂ ಪರಂ ಸ್ಪಷ್ಟನೆ

by Shwetha
August 11, 2026
0

ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು,...

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

by Shwetha
August 11, 2026
0

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜಕೀಯ ಜಿದ್ದಾಜಿದ್ದಿ ಈಗ ಹೊಸ ರೂಪ ಪಡೆದುಕೊಂಡಿದೆ. ತಮ್ಮ ಚುಚ್ಚುಮಾತು ಮತ್ತು ವಿಶಿಷ್ಟ ಶೈಲಿಯ ವ್ಯಂಗ್ಯಕ್ಕೆ ಹೆಸರಾದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ...

ಆನ್ ಇದ್ದ ಮೈಕ್ ತಂದಿಟ್ಟ ಆಪತ್ತು:  ವಿಜಯೇಂದ್ರ ಎಲ್ಲಿದ್ದೀಯಪ್ಪಾ? ಬಿಡದಿ ಪಾದಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷರ ಗೈರು ಹಾಜರಿ ಬಗ್ಗೆ ಕೈ ಪಡೆ ವ್ಯಂಗ್ಯ

ಆನ್ ಇದ್ದ ಮೈಕ್ ತಂದಿಟ್ಟ ಆಪತ್ತು: ವಿಜಯೇಂದ್ರ ಎಲ್ಲಿದ್ದೀಯಪ್ಪಾ? ಬಿಡದಿ ಪಾದಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷರ ಗೈರು ಹಾಜರಿ ಬಗ್ಗೆ ಕೈ ಪಡೆ ವ್ಯಂಗ್ಯ

by Shwetha
August 11, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆಯು ಈಗ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಎರಡನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram