Kumarswamy : ಮೈತ್ರಿ ಸಹವಾಸವೇ ಬೇಡ – ಹೆಚ್.ಡಿ.ಕುಮಾರಸ್ವಾಮಿ
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೆ ಏನಾಗುತ್ತದೆ ಅನ್ನುವುದು ಅನುಭವಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಾರಿಯ ಚುನಾವಣೆ ಬಳಿಕ ಯಾರ ಮನೆ ಬಾಗಿಲಿಗೂ ಹೋಗದೆ ಯಾರ ಸಹವಾಸವನ್ನೂ ಮಾಡದೆ ನಮ್ಮದೇ ದಾರಿಯಲ್ಲಿ ನಡೆಯುತ್ತೇವೆ. ಜನರ ಬದುಕು ಲೂಟಿ ಮಾಡುವ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಎರಡು ಬಾರಿ ಬಿಜೆಪಿ ಹಾಗೂ ಇನ್ನೊಂದು ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ ಎಂದು ಹೇಳಿದ ಹೆಚ್.ಡಿ.ಕುಮಾರಸ್ವಾಮಿ ನಾವಾಗಿ ಯಾವತ್ತೂ ಸ್ವತಂತ್ರವಾಗಿ ಸರ್ಕಾರ ರಚಿಸಿಲ್ಲ. ಹೀಗಾಗಿ ರಾಜ್ಯದ ಹಿತದೃಷ್ಟಿಯಿಂದ ಸ್ವತಂತ್ರವಾಗಿ ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೆ ನಮ್ಮದೇ ಸರ್ಕಾರವಿರಬೇಕು.ಅದಕ್ಕಾಗಿ ಜೆಡಿಎಸ್ ಗೆ ಅವಕಾಶ ನೀಡುವಂತೆ ಹೆಚ್ಡಿಕೆ ಜನರಲ್ಲಿ ಮನವಿ ಮಾಡಿದರು.
ಬಿಜೆಪಿ ಮತ್ತು ಕಾಂಗ್ರೆಸ್ಗಿಂತ ಮೊದಲೇ ರಾಜ್ಯಾದ್ಯಂತ ಯಾತ್ರೆ ಕೈಗೊಂಡಿರುವ ಜೆಡಿಎಸ್, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಸರತ್ತು ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಮೂಲಕ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಜನತೆಯ ನಾಡಿಮಿಡಿತ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
Kumaraswamy : No need for alliance – H.D. Kumaraswamy