ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Thugs of Ramgarh ‘ಥಗ್ಸ್ ಆಫ್ ರಾಮಘಡ’ ಸಿನಿಮಾದ ಮೊದಲ ಸಾಂಗ್ ಬಿಡುಗಡೆ

Thugs of Ramgarh ಉತ್ತರ ಕರ್ನಾಟಕ ಭಾಗದ ಒಂದು ಚಿಕ್ಕ ಹಳ್ಳಿಯಲ್ಲಿ ನಡೆಯುವ ಕಥೆ ಇದು ಅದಕ್ಕೆಂದೇ ಪೂರ್ತಿ ಸಿನಿಮಾವನ್ನು ಉತ್ತರ ಕರ್ನಾಟಕ ಭಾಗದಲ್ಲೇ ಚಿತ್ರೀಕರಣ ನಡೆಸಲಾಗಿದೆ. ಆದಷ್ಟು ರಿಯಲಿಸ್ಟಿಕ್ ಆಗಿಯೇ ತೆರೆ ಮೇಲೆ ತರುವ ಪ್ರಯತ್ನ ಮಾಡಿದ್ದೇವೆ.

Ranjeeta MY by Ranjeeta MY
December 5, 2022
in Cinema, Newsbeat, ಮನರಂಜನೆ
ಥಗ್ಸ್ ಆಫ್ ರಾಮಘಡ

ಥಗ್ಸ್ ಆಫ್ ರಾಮಘಡ

Share on FacebookShare on TwitterShare on WhatsappShare on Telegram

‘Thugs of Ramgarh ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ’ ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಿರ್ದೇಶಕ ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದ್ದು, ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಚಿತ್ರತಂಡ ಒಂದಿಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದೆ.

 

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

‘ನಗು ನಗುತ ಆವರಿಸೋ ಈ ಹುಡುಗಿ’ ಹಾಡಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು ಪ್ರೀತಿಯ ಹಾಡಿಗೆ ಹೆಸರಾಂತ ಗಾಯಕರಾದ ರಾಜೇಶ್ ಕೃಷ್ಣನ್, ಅನುರಾಧ ಭಟ್ ದನಿಯಾಗಿದ್ದಾರೆ. ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜನೆ ಈ ಹಾಡಿಗಿದೆ. ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಮೂವರು ಕೂಡ ರಂಗಭೂಮಿ ಕಲಾವಿದರಾಗಿದ್ದು, ಈ ಚಿತ್ರದ ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದಾರೆ. ಸೂರ್ಯ ಕಿರಣ್, ಪ್ರಭು ಹೊಸದುರ್ಗ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

 

ಹಾಡು ಬಿಡುಗಡೆ ಮಾತನಾಡಿದ ನಟ ಪೃಥ್ವಿ ಅಂಬರ್ ‘ಥಗ್ಸ್ ಆಫ್ ರಾಮಘಡ’ ತುಂಬಾ ಕ್ರಿಯೇಟಿವ್ ತಂಡ ಅಂತ ಹೇಳಬಹುದು, ಪ್ರತಿ ಶಾಟ್, ಎಲಿಮೆಂಟ್ ನಲ್ಲೂ ಹೊಸತನವಿದೆ. ಹಾಡು ನೋಡಿ ತುಂಬಾ ಖುಷಿ ಆಯ್ತು. ನಿರ್ದೇಶಕರು ತುಂಬಾ ಎಫರ್ಟ್ ಹಾಕಿ, ತುಂಬಾ ಚೆನ್ನಾಗಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಡೀ ಚಿತ್ರತಂಡ ತುಂಬಾ ಚೆನ್ನಾಗಿ ಅಭಿನಯ ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ರು.

 

ಐಟಿ ಕ್ಷೇತ್ರ ಹಾಗೂ ಪ್ರಾಧ್ಯಾಪಕನಾಗಿ ಕೆಲಸ ಮಾಡಿದ ಅನುಭವವಿದೆ. ಸಿನಿಮಾ ಮೇಲಿನ ಅಪಾರ ಆಸಕ್ತಿಯಿಂದ ಚಿತ್ರರಂಗದ ಕಡೆ ಮುಖ ಮಾಡಿದೆ. ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ಮೂಲತಃ ನಾನು ಯಾದಗಿರಿಯವನು. ಈ ಚಿತ್ರದ ಕಥೆ ಉತ್ತರ ಕರ್ನಾಟಕ ಭಾಗದಲ್ಲಿ 1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದ್ದು ಅದಕ್ಕೆ ಒಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ ಸಿನಿಮಾ ಮಾಡಿದ್ದೇವೆ. ಉತ್ತರ ಕರ್ನಾಟಕ ಭಾಗದ ಒಂದು ಚಿಕ್ಕ ಹಳ್ಳಿಯಲ್ಲಿ ನಡೆಯುವ ಕಥೆ ಇದು ಅದಕ್ಕೆಂದೇ ಪೂರ್ತಿ ಸಿನಿಮಾವನ್ನು ಉತ್ತರ ಕರ್ನಾಟಕ ಭಾಗದಲ್ಲೇ ಚಿತ್ರೀಕರಣ ನಡೆಸಲಾಗಿದೆ. ಆದಷ್ಟು ರಿಯಲಿಸ್ಟಿಕ್ ಆಗಿಯೇ ತೆರೆ ಮೇಲೆ ತರುವ ಪ್ರಯತ್ನ ಮಾಡಿದ್ದೇವೆ. ಮುಂದಿನ ವರ್ಷ ಸಿನಿಮಾ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ ಎಂದು ನಿರ್ದೇಶಕ ಕಾರ್ತಿಕ್ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

 

ನಾಯಕ ಚಂದನ್ ಮಾತನಾಡಿ ನನಗೆ ಸಿನಿಮಾ ಬಿಟ್ಟು ಬೇರೇನೂ ಗೊತ್ತಿಲ್ಲ. ಸಿನಿಮಾದಲ್ಲೇ ಗೆಲ್ಲಬೇಕು ಅನ್ನೋದು ನನ್ನ ಕನಸು. ಈ ಚಿತ್ರದ ಸ್ಕ್ರೀಪ್ಟ್, ಸ್ಟೋರಿ ಲೈನ್ ಕೇಳಿದಾಗ ಏನೋ ವಿಶೇಷತೆ ಇದೆ ಅನ್ನೋದು ಗೊತ್ತಾಯ್ತು. ಒಂದು ಸಣ್ಣ ಪ್ರಯತ್ನ ಮಾಡಿದ್ದೇನೆ ಎಲ್ಲರೂ ನೋಡಿ ಪ್ರೋತ್ಸಾಹಿಸಿ. ಅಶ್ವಿನ್ ಹಾಸನ್ ಅವರಿಂದ ಈ ಪಾತ್ರ ನನಗೆ ಸಿಕ್ತು ಅವರಿಗೆ ತುಂಬಾ ಧನ್ಯವಾದ ತಿಳಿಸುತ್ತೇನೆ. ಸಿನಿಮಾ ಬಿಡುಗಡೆಯಾದ ಮೇಲೆ ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದು ಕೇಳಿಕೊಂಡ್ರು.

ನಾಯಕ ನಟಿ ಮಹಾಲಕ್ಷ್ಮೀ ಮಾತನಾಡಿ ನನ್ನ ಜರ್ನಿ ಆರಂಭವಾಗಿದ್ದು ರಂಗಭೂಮಿಯಿಂದ. ನನ್ನ ಪಾತ್ರ ಉತ್ತರ ಕರ್ನಾಟಕದ ಒಂದು ಕುಗ್ರಾಮದಲ್ಲಿರುವ ಹುಡುಗಿಯ ಪಾತ್ರ. ಎಷ್ಟೇ ನೋವಿದ್ರು ನಗು ನಗುತಾ ಇರುವ ಪಾತ್ರ ನನ್ನದು. ಈ ಚಿತ್ರಕ್ಕಾಗಿ ಉತ್ತರ ಕರ್ನಾಟಕ ಭಾಷೆ ಕಲಿತು ಡಬ್ ಮಾಡಿದ್ದೇನೆ. ತುಂಬಾ ಚೆನ್ನಾಗಿ ಸಿನಿಮಾ ಮೂಡಿ ಬಂದಿದೆ ಎಲ್ಲರೂ ನೋಡಿ ಆಶೀರ್ವಾದ ಮಾಡಿ ಎಂದು ತಿಳಿಸಿದ್ರು.

ಅಶ್ವಿನ್ ಹಾಸನ್ ಮಾತನಾಡಿ ಲಾಕ್ ಡೌನ್ ನಲ್ಲಿ ಕೇಳಿದ ಕಥೆ ಇದು. ನೀವು ಸಿನಿಮಾದಲ್ಲಿ ಒಂದು ಲೀಡ್ ರೋಲ್ ನಲ್ಲಿ ಇರ್ತಿರಾ ಎಂದಾಗ ಶಾಕ್ ಆಯ್ತು. ನಿರ್ದೇಶಕರು ಏನು ಕಥೆ ಬರೆದಿದ್ದಾರೆ ಅದಕ್ಕೆ ನ್ಯಾಯ ಒದಗಿಸಬೇಕು ಅನ್ನೋದು ನನ್ನ ಪಾಲಿಸಿ. ಆ ಪ್ರಯತ್ನ ಮಾಡಿದ್ದೇನೆ. ಈ ತಂಡದಲ್ಲಿರುವ ಎಲ್ಲರಿಗೂ ಸಿನಿಮಾನೇ ಉಸಿರು. ಪ್ರತಿಯೊಬ್ಬರು ತುಂಬಾ ಡೆಡಿಕೇಶನ್ ನಿಂದ ಈ ಸಿನಿಮಾ ಮಾಡಿದ್ದಾರೆ. ಈ ಸಿನಿಮಾ ಗೆಲ್ಲುತ್ತೆ ಅನ್ನೋ ಭರವಸೆ ನಮಗಿದೆ, ಗೆಲ್ಲಲೇಬೇಕು ಎಂದು ಸಿನಿಮಾ ಮಾಡಿದ್ದೀವಿ ಎಂದು ಅನಿಸಿಕೆ ಹಂಚಿಕೊಂಡ್ರು.

ಭಾರತ್ ಟಾಕೀಸ್ ನಡಿ ಜೈ ಕುಮಾರ್, ಕೀರ್ತಿ ರಾಜ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರಾಜೇಶ್ ಕೃಷ್ಣನ್, ಶಶಾಂಕ್ ಶೇಷಗಿರಿ, ಅನುರಾಧ ಭಟ್ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Tags: kannada movesandallwoodThugs of Ramgarh
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram