ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah : ಸಿದ್ರಾಮುಲ್ಲಾಖಾನ್  ಬಿಜೆಪಿಯ ಚಾರಿತ್ರ್ಯಹನನದ ರಾಜಕೀಯ ಸರಕು  – ಸಿದ್ದರಾಮಯ್ಯ…  

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನ  ಸಿದ್ರಾಮುಲ್ಲಾಖಾನ್  ಎಂದು   ಹೆಸರು ಬದಲಿಸಿ ಕರೆದ  ಬಿಜೆಪಿ ಕರ್ನಾಟಕದ  ಮಾತಿಗೆ  ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. 

Naveen Kumar B C by Naveen Kumar B C
December 7, 2022
in Newsbeat, Politics, ರಾಜಕೀಯ
siddaramaih

file photo

Share on FacebookShare on TwitterShare on WhatsappShare on Telegram

Siddaramaiah: ಸಿದ್ರಾಮುಲ್ಲಾಖಾನ್  ಬಿಜೆಪಿಯ ಚಾರಿತ್ರ್ಯಹನನದ ರಾಜಕೀಯ ಸರಕು  – ಸಿದ್ದರಾಮಯ್ಯ…

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನ  ಸಿದ್ರಾಮುಲ್ಲಾಖಾನ್  ಎಂದು   ಹೆಸರು ಬದಲಿಸಿ ಕರೆದ  ಬಿಜೆಪಿ ಕರ್ನಾಟಕದ  ಮಾತಿಗೆ  ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್ ಮಾಡಿ “ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಬಿಜೆಪಿ ಕರ್ನಾಟಕ ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿ ನಡೆಸುತ್ತಿರುವ ಅಪಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ.

ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳ ಮಸಿ ಬಳಿದುಕೊಂಡ ಮುಖ ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ? ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ. ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಬಿಜೆಪಿ ಕರ್ನಾಟಕ ಇಂತಹ ನೈತಿಕ ಅಧ:ಪತನಕ್ಕೆ ಬಿದ್ದಿರುವುದರ ಬಗ್ಗೆ ಎಲ್ಲರೂ ಸಂತಾಪ ಸೂಚಿಸೋಣ.

ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಗೋವಿಂದ ಭಟ್ಟರ ಶಿಷ್ಯರಾದ ಶಿಶುನಾಳ ಷರೀಪ್, ಸಂತ ರಮಾನಂದರ ಶಿಷ್ಯರಾದ ಕವಿ ಕಬೀರರ ಪರಂಪರೆ ನಮ್ಮದು. ಆದ್ದರಿಂದ ಮುಸ್ಲಿಂ ಹೆಸರನ್ನು ನನ್ನ ಹೆಸರಿಗೆ ಜೋಡಿಸಿ ಜಾತ್ಯತೀತತೆಯ ನನ್ನ ನಂಬಿಕೆಯನ್ನು ಪುರಸ್ಕರಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ.

ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ಧತೆಯಿಂದ ನಾನು ಮುಸ್ಲಿಂ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ.  ಬಿಜೆಪಿ ಕರ್ನಾಟಕ  ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ.

ಮುಸ್ಲಿಂ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ, ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ಧವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆಯೂ ಇದೆ, ಅಭಿಮಾನವೂ ಇದೆ.

ಟಿಪ್ಪು ಸುಲ್ತಾನ ಜಯಂತಿಯನ್ನು ವಿವಾದವನ್ನಾಗಿ ಮಾಡಿ  ಕರ್ನಾಟಕ ಬಿಜೆಪಿ ಹುಟ್ಟುಹಾಕಿದ ವಿವಾದ ಮತ್ತು ಗಲಭೆಗಳು ರಾಜಕೀಯ ಪ್ರೇರಿತವಾದುದು ಎಂದು ರಾಜ್ಯದ ಜನರಿಗೆ ಮನದಟ್ಟಾಗಿದೆ. ಬಿಜೆಪಿಯ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವ-ಶಾಸಕರ ವರೆಗೆ ಎಲ್ಲರೂ ಬಗೆಬಗೆಯ ವೇಷಧರಿಸಿ ಟಿಪ್ಪು ಜಯಂತಿ ಆಚರಿಸಿರುವುದನ್ನು ಜನ ನೋಡಿದ್ದಾರೆ.

ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದಾಗ ಟಿಪ್ಪುವಿನ ಬಗ್ಗೆ 400 ಪುಟಗಳ ಪುಸ್ತಕ ಬರೆಸುವ ಜೊತೆಗೆ ಟಿಪ್ಪುವನ್ನು ಕೊಂಡಾಡಿ ಮುನ್ನುಡಿಯನ್ನೂ ಬರೆದಿದ್ದರು. ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಮ್ಮ ಭಾಷಣದಲ್ಲಿ ಟಿಪ್ಪು ಸುಲ್ತಾನನ ಸಾಧನೆಗಳನ್ನು ಉಲ್ಲೇಖಿಸಿ ಶ್ಲಾಘಿಸಿದ್ದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಹಿಂದೂ ಯುವಕರ ಕೊಲೆ ನಡೆದಿತ್ತು ಎಂಬ ಸುಳ್ಳು ಪ್ರಚಾರವನ್ನೂ ಬಿಜೆಪಿ ನಡೆಸುತ್ತಿದೆ.  ಶೋಭ ಕರಂದ್ಲಾಜೆ ಅವರು ರಾಜ್ಯದಲ್ಲಿ 24 ಹಿಂದೂಗಳ ಹತ್ಯೆಗಳು ನಡೆದಿವೆ ಎಂದು ಕೇಂದ್ರ ಗೃಹಸಚಿವರಾದ ರಾಜ್ ನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಜೀವಂತವಿದ್ದ ವ್ಯಕ್ತಿಯ ಹೆಸರನ್ನೂ ಸೇರಿಸಲಾಗಿತ್ತು.

ಬಿಜೆಪಿಯವರು ಹೇಳುತ್ತಿರುವ ಹನ್ನೊಂದು ಹಿಂದೂಗಳ ಹತ್ಯೆಯಲ್ಲಿ ಆರೋಪಿಗಳಾಗಿದ್ದವರು ಎಸ್‌ಡಿಪಿಐ ಮತ್ತು ಪಿಎಫ್ಐ ಸದಸ್ಯರು. ಅವರ ವಿರುದ್ಧ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವು ಹತ್ಯೆಯಲ್ಲ ಎಂದು ಸಿಬಿಐ ಇತ್ತೀಚೆಗೆ ಹೇಳಿರುವುದು ಬಿಜೆಪಿ ಕರ್ನಾಟಕ  ಸುಳ್ಳುಗಳನ್ನು ಬಯಲುಮಾಡಿದೆ.

ನಮ್ಮ ಸರ್ಕಾರದ ಅವಧಿಯಲ್ಲಿ 11 ಮುಸ್ಲಿಂ ಯುವಕರ ಹತ್ಯೆಯೂ ನಡೆದಿತ್ತು. ಈ ಹತ್ಯೆಗಳ ಎಲ್ಲ ಆರೋಪಿಗಳು ಬಜರಂಗದಳ ಮತ್ತಿತರ ಸಂಘಪರಿವಾರದ ಸಂಘಟನೆಗಳ ಕಾರ್ಯಕರ್ತರಾಗಿದ್ದಾರೆ. ಅವರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿತ್ತು. ಈ ಪ್ರಕರಣಗಳ ಸಮಗ್ರ ಮಾಹಿತಿಯನ್ನು ಅಂದಿನ ಗೃಹಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ.

ಕರ್ನಾಟಕದ ಜನತೆ ಪ್ರಜ್ಞಾವಂತರಿದ್ದಾರೆ, ಸರಿ-ತಪ್ಪುಗಳನ್ನು ಅರ್ಥಮಾಡಿಕೊಳ್ಳುವಷ್ಟು ವಿವೇಕವುಳ್ಳವರಾಗಿದ್ದಾರೆ. ಆದ್ದರಿಂದ ಅಪಪ್ರಚಾರ ನಡೆಸಿದಷ್ಟು ಅಪಪ್ರಚಾರ ನಡೆಸಿದವರೇ ರಾಜ್ಯದ ಜನರ ಮುಂದೆ ಬತ್ತಲಾಗುತ್ತಾರೆ ಎನ್ನುವುದು ನನಗೆ ಗೊತ್ತು.

ನನ್ನ ವಿರುದ್ಧದ ಅಪಪ್ರಚಾರವನ್ನು ನಿಲ್ಲಿಸಬೇಕೆಂದು ನಾನೇನು ಮನವಿ ಮಾಡುವುದಿಲ್ಲ. ಆದರೆ ಇಂತಹ ಅಪಪ್ರಚಾರಗಳಿಗೆ ಹೆದರಿ ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮತ್ತು ಕೋಮುವಾದದ ರಾಜಕಾರಣದ ವಿರುದ್ಧದ ನನ್ನ ಹೋರಾಟವನ್ನು ನಾನು ನಿಲ್ಲಿಸುತ್ತೇನೆ ಎಂದು ತಿಳಿದುಕೊಂಡರೆ ಅದು ಮೂರ್ಖತನ ಅಷ್ಟೆ ಎಂದು ಟ್ವೀಟ್ ಮಾಡಿದ್ದಾರೆ.

Siddaramaiah : Siddramaullah Khan is the political commodity of BJP’s character assassination – Siddaramaiah…

Related posts

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ನೀಟ್ ವಿಚಾರದಲ್ಲಿ ಕೇಂದ್ರ ಸಚಿವರ ರಾಜೀನಾಮೆ ಆದರ್ಶ ಕರ್ನಾಟಕಕ್ಕೇಕಿಲ್ಲ? ರಾಜ್ಯದ ಸರಣಿ ಸಾವು ಮತ್ತು ಭ್ರಷ್ಟಾಚಾರಕ್ಕೆ ಹೊಣೆ ಯಾರು? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ಆಕ್ರೋಶ

July 27, 2026
ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

July 27, 2026
Tags: siddaramaih
ShareTweetSendShare
Join us on:

Related Posts

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ನೀಟ್ ವಿಚಾರದಲ್ಲಿ ಕೇಂದ್ರ ಸಚಿವರ ರಾಜೀನಾಮೆ ಆದರ್ಶ ಕರ್ನಾಟಕಕ್ಕೇಕಿಲ್ಲ? ರಾಜ್ಯದ ಸರಣಿ ಸಾವು ಮತ್ತು ಭ್ರಷ್ಟಾಚಾರಕ್ಕೆ ಹೊಣೆ ಯಾರು? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ಆಕ್ರೋಶ

by Shwetha
July 27, 2026
0

ಬೆಂಗಳೂರು: ನೀಟ್ ಪರೀಕ್ಷೆಯ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವ ಬೆನ್ನಲ್ಲೇ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ...

ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

by Shwetha
July 27, 2026
0

ಮಂಡ್ಯ: ಕರ್ನಾಟಕ ರಾಜಕಾರಣದ ಧ್ರುವತಾರೆ, ಸಮಾಜವಾದಿ ಸಿದ್ಧಾಂತದ ಪ್ರಬಲ ಧ್ವನಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮುಂಬರುವ...

ವಿದ್ಯಾರ್ಥಿಗಳ ರಕ್ತಕ್ಕೆ ಹೊಣೆ ಯಾರು? ಸಿವಿಲ್ ಡ್ರೆಸ್ ನಲ್ಲಿ ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಹೊಡೆದವರು ಯಾರು? ಅಮಿತ್ ಶಾ ಉತ್ತರಿಸಲಿ ಎಂದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ರಕ್ತಕ್ಕೆ ಹೊಣೆ ಯಾರು? ಸಿವಿಲ್ ಡ್ರೆಸ್ ನಲ್ಲಿ ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಹೊಡೆದವರು ಯಾರು? ಅಮಿತ್ ಶಾ ಉತ್ತರಿಸಲಿ ಎಂದ ರಾಹುಲ್ ಗಾಂಧಿ

by Shwetha
July 27, 2026
0

ನವದೆಹಲಿ: ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಅನಾಗರಿಕ ಹಲ್ಲೆ ಮತ್ತು ಭದ್ರತಾ ಪಡೆಗಳ ಅಟ್ಟಹಾಸವನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಅದು ಬಲವಂತದ್ದೇ ಹೊರತು ಆತ್ಮಸಾಕ್ಷಿಯದ್ದಲ್ಲ: ಮೋದಿ ಮತ್ತು ಅಮಿತ್ ಶಾ ಮೌನವೇಕೆ? ದೇಶದ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದರೂ ಉತ್ತರಿಸದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಅದು ಬಲವಂತದ್ದೇ ಹೊರತು ಆತ್ಮಸಾಕ್ಷಿಯದ್ದಲ್ಲ: ಮೋದಿ ಮತ್ತು ಅಮಿತ್ ಶಾ ಮೌನವೇಕೆ? ದೇಶದ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದರೂ ಉತ್ತರಿಸದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
July 27, 2026
0

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಅವರು ನೀಡಿರುವ ರಾಜೀನಾಮೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಇದು ಅವರ ಅಂತರಾತ್ಮದ ಕರೆಯಿಂದ ಬಂದಿದ್ದಲ್ಲ, ಬದಲಿಗೆ ಪಕ್ಷದ...

ಯುವಜನತೆ ಬೀದಿಗಿಳಿದು ಹೋರಾಡಿದರೆ ಮೋದಿಜಿಯೂ ಸೋಲಲೇಬೇಕು- ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ಆರಂಭ- ಮೋದಿ ಸರ್ಕಾರದ ಪತನದ ಮುನ್ಸೂಚನೆ ನೀಡಿದ CM ರೇವಂತ್ ರೆಡ್ಡಿ

ಯುವಜನತೆ ಬೀದಿಗಿಳಿದು ಹೋರಾಡಿದರೆ ಮೋದಿಜಿಯೂ ಸೋಲಲೇಬೇಕು- ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ಆರಂಭ- ಮೋದಿ ಸರ್ಕಾರದ ಪತನದ ಮುನ್ಸೂಚನೆ ನೀಡಿದ CM ರೇವಂತ್ ರೆಡ್ಡಿ

by Shwetha
July 27, 2026
0

ಹೈದರಾಬಾದ್: ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ದೇಶದ ಯುವಶಕ್ತಿ ಬೀದಿಯಿಂದ ಸಂಸತ್ತಿನವರೆಗೆ ನಡೆಸಿದ ಹೋರಾಟದ ಮುಂದೆ ಕೇಂದ್ರದ ಬಿಜೆಪಿ ಸರ್ಕಾರ ಮಂಡಿಯೂರಿದೆ. ರೈತರು ಮತ್ತು ಯುವಕರು ಒಗ್ಗಟ್ಟಾಗಿ ಪ್ರತಿಹೋರಾಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram