ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Namma clinics : ಜನವರಿ ಅಂತ್ಯಕ್ಕೆ ಎಲ್ಲಾ 438 ನಮ್ಮ ಕ್ಲಿನಿಕ್‌ಗಳು ಕಾರ್ಯಾರಂಭ: ಡಾ.ಕೆ.ಸುಧಾಕರ್‌

ಹೊಸ ವರ್ಷದ ಜನವರಿ ಅಂತ್ಯಕ್ಕೆ ಎಲ್ಲಾ 438 ʼನಮ್ಮ ಕ್ಲಿನಿಕ್‌ʼಗಳು ಕಾರ್ಯಾರಂಭವಾಗಲಿವೆ. ಹಾಗೆಯೇ ಮಹಿಳೆಯರಿಗೆ ಮೀಸಲಾದ ʼಆಯುಷ್ಮತಿʼ ಕ್ಲಿನಿಕ್‌ಗಳನ್ನೂ ಜನವರಿಯಲ್ಲೇ ಉದ್ಘಾಟಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Naveen Kumar B C by Naveen Kumar B C
December 14, 2022
in Newsbeat, Health, ಆರೋಗ್ಯ
K sudhakar Namma clinics
Share on FacebookShare on TwitterShare on WhatsappShare on Telegram

ಜನವರಿ ಅಂತ್ಯಕ್ಕೆ ಎಲ್ಲಾ 438 ನಮ್ಮ ಕ್ಲಿನಿಕ್‌ಗಳು ಕಾರ್ಯಾರಂಭ: ಡಾ.ಕೆ.ಸುಧಾಕರ್‌

 

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಹೊಸ ವರ್ಷದ ಜನವರಿ ಅಂತ್ಯಕ್ಕೆ ಎಲ್ಲಾ 438 ʼನಮ್ಮ ಕ್ಲಿನಿಕ್‌ʼಗಳು ಕಾರ್ಯಾರಂಭವಾಗಲಿವೆ. ಹಾಗೆಯೇ ಮಹಿಳೆಯರಿಗೆ ಮೀಸಲಾದ ʼಆಯುಷ್ಮತಿʼ ಕ್ಲಿನಿಕ್‌ಗಳನ್ನೂ ಜನವರಿಯಲ್ಲೇ ಉದ್ಘಾಟಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

 

ಹುಬ್ಬಳ್ಳಿಯಲ್ಲಿ ಮೊದಲ ʼನಮ್ಮ ಕ್ಲಿನಿಕ್‌ʼಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ನಮ್ಮ ಕ್ಲಿನಿಕ್‌ನಲ್ಲಿ ಲ್ಯಾಬ್‌ ಪರೀಕ್ಷೆ, ತಪಾಸಣೆ, ಔಷಧಿ ಸಂಪೂರ್ಣ ಉಚಿತವಾಗಿದ್ದು, ಇದು ಆರೋಗ್ಯ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತರುವ ಹೆಜ್ಜೆಯಾಗಿದೆ. ಸದ್ಯ 114 ಕ್ಲಿನಿಕ್‌ಗಳನ್ನು ಉದ್ಘಾಟಿಸಲಾಗುತ್ತಿದೆ. ಇನ್ನು ಮುಂದೆ ಪ್ರತಿ ವಾರಕ್ಕೆ 100 ರಂತೆ ಕ್ಲಿನಿಕ್‌ಗಳನ್ನು ಉದ್ಘಾಟನೆ ಮಾಡಿ, ಜನವರಿ ಅಂತ್ಯಕ್ಕೆ ಎಲ್ಲಾ 438 ಕ್ಲಿನಿಕ್‌ಗಳನ್ನು ಆರಂಭಿಸಲಾಗುವುದು. ಹಾಗೆಯೇ, ಆಯುಷ್ಮತಿ ಕ್ಲಿನಿಕ್‌ ಕೂಡ ಆರಂಭವಾಗಲಿದೆ. ಇದು ಮಹಿಳೆಯರಿಗೆ ನಮ್ಮ ಸರ್ಕಾರ ನೀಡುತ್ತಿರುವ ಹೊಸ ವರ್ಷದ ಕೊಡುಗೆ ಎಂದು ತಿಳಿಸಿದರು.

 

ಮನೆ ಬಾಗಿಲಿಗೆ ಔಷಧಿ

 

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಈಗಾಗಲೇ ಆರಂಭಿಸಿದ್ದು, ಇಲ್ಲಿ 30 ವರ್ಷ ವಯಸ್ಸು ಮೇಲ್ಪಟ್ಟ ಎಲ್ಲರೂ ವರ್ಷಕ್ಕೆ ಒಮ್ಮೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಭಾರತ ಈಗ ಮಧುಮೇಹದ ಕೇಂದ್ರವಾಗಿದ್ದು, ಇಂತಹ ಅಸಾಂಕ್ರಾಮಿಕ ರೋಗಗಳ ಪತ್ತೆ ಅಗತ್ಯವಿದೆ. ಇದಕ್ಕಾಗಿ ಕಳೆದ ಒಂದು ವರ್ಷದಲ್ಲಿ ಈ ಕೇಂದ್ರಗಳಲ್ಲಿ ಶೇ.60 ರಷ್ಟು ಜನರನ್ನು ತಪಾಸಣೆ ಮಾಡಿದ್ದು, ವಿವಿಧ ರೋಗಗಳಿಗೆ ಉಚಿತ ಔಷಧಿ ನೀಡಲಾಗುತ್ತಿದೆ. ಜನವರಿ ತಿಂಗಳಿಂದ ಮಧುಮೇಹ, ಬಿಪಿ, ಕ್ಷಯ ಮೊದಲಾದ ರೋಗಗಳಿಗೆ ಔಷಧಿಯನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

 

ಇತಿಹಾಸದಲ್ಲಿ ಯಾವ ಸರ್ಕಾರವೂ ಒಂದೇ ಬಾರಿಗೆ 114 ಕ್ಲಿನಿಕ್‌ಗಳನ್ನು ಉದ್ಘಾಟನೆ ಮಾಡಿಲ್ಲ. ಇಂದು ನಮ್ಮ ಸರ್ಕಾರದ ಮೂಲಕ ಸಾರ್ವಕಾಲಿಕ ದಾಖಲೆಯಾಗಿದೆ. ಸಾಮಾನ್ಯ ಜನರ ಮುಖ್ಯಮಂತ್ರಿಯಾಗಿರುವ, ʼಕಾಮನ್‌ ಮ್ಯಾನ್‌ʼ ಬಸವರಾಜ ಬೊಮ್ಮಾಯಿ ಅವರಿಂದ ʼನಮ್ಮ ಕ್ಲಿನಿಕ್‌ʼಗಳು ಉದ್ಘಾಟನೆಯಾಗಿವೆ ಎಂದರು.

 

ನಗರಗಳೆಂದರೆ ಶ್ರೀಮಂತರೇ ಇರುವ ಪ್ರದೇಶ ಎಂಬ ತಪ್ಪು ಕಲ್ಪನೆ ಇದೆ. ನಗರಗಳಲ್ಲಿರುವ ಬಡವರು, ಕೂಲಿ ಕಾರ್ಮಿಕರು, ವಲಸೆ ಬಂದವರು, ಕೊಳೆಗೇರಿ ನಿವಾಸಿಗಳ ಆರೋಗ್ಯ ರಕ್ಷಣೆಗಾಗಿ ನಮ್ಮ ಕ್ಲಿನಿಕ್‌ ಆರಂಭಿಸಲಾಗಿದೆ. ಇಂದು ಮೊದಲ ನಮ್ಮ ಕ್ಲಿನಿಕ್‌ನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉದ್ಘಾಟಿಸುತ್ತಿರುವುದು ವಿಶೇಷವಾಗಿದೆ. ಒಟ್ಟು 114 ಕ್ಲಿನಿಕ್‌ಗಳನ್ನು ವಿವಿಧ ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ಉದ್ಘಾಟಿಸಲಾಗುತ್ತಿದೆ ಎಂದು ತಿಳಿಸಿದರು.

 

ಒಂದು ಕ್ಲಿನಿಕ್‌ನಲ್ಲಿ ಒಬ್ಬ ವೈದ್ಯ, ಲ್ಯಾಬ್‌ ತಂತ್ರಜ್ಞ, ನರ್ಸ್‌, ಡಿ ಗ್ರೂಪ್‌ ನೌಕರ ಇರುತ್ತಾರೆ. ಜ್ವರ, ಕೆಮ್ಮು, ನೆಗಡಿ ಮೊದಲಾದ ಸಣ್ಣ ಸಮಸ್ಯೆಗಳಿಗೆ ಹಿಂದೆ ಜಿಲ್ಲಾಸ್ಪತ್ರೆಗೆ ಹೋಗಬೇಕಿತ್ತು. ಆದರೆ ಈಗ ನಮ್ಮ ಕ್ಲಿನಿಕ್‌ಗೆ ಹೋಗಿ ಉಚಿತವಾಗಿ ಸೇವೆ ಪಡೆಯಬಹುದು. ಬೇರೆ ಆಸ್ಪತ್ರೆಗಳಲ್ಲಿ 10 ರೂ. ಶುಲ್ಕ ಪಡೆಯಲಾಗುತ್ತಿತ್ತು. ಆದರೆ ನಮ್ಮ ಕ್ಲಿನಿಕ್‌ನಲ್ಲಿ ಬಿಡಿಗಾಸನ್ನೂ ನೀಡಬೇಕಿಲ್ಲ ಎಂದು ವಿವರಿಸಿದರು.

 

ಆಯುಷ್ಮಾನ್‌ ಕಾರ್ಡ್‌, ಪ್ರಧಾನಿಗಳಿಂದ ವಿತರಣೆ

 

ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಇಲ್ಲದಿದ್ದರೆ ಸಂಪದ್ಭರಿತ ನಾಡನ್ನು ಸೃಷ್ಟಿಸಲು ಸಾಧ್ಯವಿಲ್ಲ. ಒಂದು ದೇಶ-ಒಂದು ಪಡಿತರ ಚೀಟಿ, ಒಂದು ದೇಶ-ಒಂದು ತೆರಿಗೆ ಎಂಬಂತೆ, ಒಂದು ದೇಶ-ಒಂದು ಹೆಲ್ತ್‌ ಕಾರ್ಡ್‌ ಎಂಬ ಘೋಷಣೆಯ ಆಯುಷ್ಮಾನ್‌ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. 1.20 ಕೋಟಿ ಕಾರ್ಡ್‌ಗಳ ನೋಂದಣಿ ಪೂರ್ಣಗೊಂಡಿದ್ದು, ಈ ಕಾರ್ಯಕ್ರಮಕ್ಕೂ ಚಾಲನೆ ನೀಡಬೇಕಿತ್ತು. ಆದರೆ ಕೇಂದ್ರದ ಆರೋಗ್ಯ ಸಚಿವರು ಕರೆ ಮಾಡಿ ಶ್ಲಾಘಿಸಿ, ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಈ ಕಾರ್ಡ್‌ ವಿತರಣೆ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ. ಆದ್ದರಿಂದ ಪ್ರಧಾನಿಗಳ ಕೈಯಿಂದಲೇ ಕಾರ್ಡ್‌ಗಳನ್ನು ಜನರಿಗೆ ಕೊಡಿಸಲಾಗುವುದು ಎಂದು ತಿಳಿಸಿದರು.

 

42 ಲಕ್ಷ ಜನರಿಗೆ ಉಚಿತ ಚಿಕಿತ್ಸೆ

 

ಕೆಲವರು ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ ನಾಲ್ಕು ವರ್ಷಗಳಲ್ಲಿ 42 ಲಕ್ಷ ಜನರಿಗೆ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಸೇವೆ ನೀಡಿದ್ದು, ಅದಕ್ಕಾಗಿ 5 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಪೈಕಿ ಶೇ.70 ರಷ್ಟು ರೋಗಿಗಳು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆ. ಸರ್ಕಾರಿ ಆರೋಗ್ಯ ವ್ಯವಸ್ಥೆ ಸರಿ ಇಲ್ಲ ಎಂದು ದೂರುವುದು ಸುಲಭ. ಆದರೆ ಉಚಿತ ಸೇವೆಯ ಪರಂಪರೆಯನ್ನು ನೋಡಬೇಕು. ನಮ್ಮ ಅವಧಿಯಲ್ಲಿ ಆಸ್ಪತ್ರೆಗಳ ಮೂಲಸೌಕರ್ಯದಲ್ಲಿ 5-6 ಪಟ್ಟು ಪ್ರಗತಿ, ಉಚಿತ ಔಷಧಿ ವಿತರಣೆ, ಡಯಾಲಿಸಿಸ್‌ ಸಂಖ್ಯೆಯನ್ನು 30 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಅನೇಕ ಸುಧಾರಣೆ ಮಾಡಲಾಗಿದೆ ಎಂದರು.

 

Namma clinics: All 438 of Namma clinics are operational by the end of January: Dr.K.Sudhakar

Tags: Dr. K SudhakarNamma clinics
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram