ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Health : ಆರೋಗ್ಯ ವ್ಯವಸ್ಥೆಯ ಸುಧಾರಣೆಗೆ ಮುನ್ನೆಚ್ಚರಿಕೆ ಅವಶ್ಯಕ – ಸುಧಾಕರ್

ಆರೋಗ್ಯ ವ್ಯವಸ್ಥೆಯ ಸುಧಾರಣೆಗೆ ಮುನ್ನೆಚ್ಚರಿಕೆ ಹಾಗೂ ಜಾಗೃತಿ ಅವಶ್ಯ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌

Namratha Rao by Namratha Rao
December 18, 2022
in News, Newsbeat, State, ಬೆಂಗಳೂರು
sudhakar
Share on FacebookShare on TwitterShare on WhatsappShare on Telegram

Health : ಆರೋಗ್ಯ ವ್ಯವಸ್ಥೆಯ ಸುಧಾರಣೆಗೆ ಮುನ್ನೆಚ್ಚರಿಕೆ ಅವಶ್ಯಕ – ಸುಧಾಕರ್

ಅಸಾಂಕ್ರಾಮಿಕ ರೋಗಗಳ ಕುರಿತು ಅಂಕಿ ಅಂಶ ಸಂಗ್ರಹ ಮಾಡಬೇಕು

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಬೆಂಗಳೂರು :  ಆರೋಗ್ಯ ವ್ಯವಸ್ಥೆಯಲ್ಲಿ ಹೆಚ್ಚು ಸುಧಾರಣೆ ತರಲು ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿದೆ. ಇದಕ್ಕಾಗಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಇದರ ಜೊತೆಗೆ ಅಸಾಂಕ್ರಾಮಿಕ ರೋಗಗಳ ಕುರಿತ ಅಂಕಿ ಅಂಶ ಸಂಗ್ರಹಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

KRSSDI ನಿಂದ ಆಯೋಜಿಸಿದ್ದ ಮಧುಮೇಹ ಕುರಿತ ರಾಜ್ಯ ಸಮ್ಮೇಳನದಲ್ಲಿ ಸಚಿವರು ಮಾತನಾಡಿದರು.

ಆಧುನಿಕ ತಂತ್ರಜ್ಞಾನಗಳ ಬಳಕೆಯ ಮೂಲಕ ಆಸ್ಪತ್ರೆ ಆರೈಕೆಯಿಂದ ಮನೆ ಆರೈಕೆಗೆ ಆರೋಗ್ಯ ವ್ಯವಸ್ಥೆಯನ್ನು ಬದಲಿಸಬೇಕಿದೆ. ವೈದ್ಯ ಕೇಂದ್ರಿತದಿಂದ ರೋಗಿ ಕೇಂದ್ರಿತ ವ್ಯವಸ್ಥೆಗೆ ಬದಲಾಗಬೇಕಿದೆ. ಆರೋಗ್ಯ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ತರಲು ಜಾಗೃತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಅವಶ್ಯವಾಗಿವೆ. ಮಾಹಿತಿ, ಶಿಕ್ಷಣ, ಸಂವಹನವಿದ್ದರೆ ಜನರಿಗೆ ಹೆಚ್ಚು ಉಪಯೋಗವಾಗುತ್ತದೆ. ಆರೋಗ್ಯದಲ್ಲಿ ಕರ್ನಾಟಕ ಪ್ರಗತಿ ಸಾಧಿಸಿದರೂ, ಮಾತೃ ಮರಣ, ಶಿಶು ಮರಣದಲ್ಲಿ ಹಿಂದುಳಿದಿದೆ. ಇದಕ್ಕಾಗಿ ಅರಿವು ಕಾರ್ಯಕ್ರಮ ಅಗತ್ಯ ಎಂದರು.

 

ರಾಜ್ಯದಲ್ಲಿ 8 ಸಾವಿರಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆ ಹೆಚ್ಚಿಸಲಾಗಿದೆ. ಈ ಮೂಲಕ ಸರಿಯಾದ ದತ್ತಾಂಶ ಸಂಗ್ರಹಿಸಲಾಗುತ್ತಿದೆ. ವೈದ್ಯರು ಕೂಡ ಸರಿಯಾದ ಅಂಕಿ ಅಂಶಗಳ ಸಂಗ್ರಹಕ್ಕೆ ಸಹಕಾರ ನೀಡಬೇಕು. ವ್ಯಾಯಾಮ, ವಾಕಿಂಗ್‌ ಮೊದಲಾದ ಚಟುವಟಿಕೆಗಳು ಎಷ್ಟು ಅಗತ್ಯ ಎಂಬುದು ಅನೇಕರಿಗೆ ಅರಿವಿಲ್ಲ. ಇದರಿಂದ ಮಧುಮೇಹ ಹೆಚ್ಚಾಗುತ್ತಿದೆ ಎಂದರು.

 

ನಿದ್ದೆಯಲ್ಲಿ ವ್ಯತ್ಯಾಸ, ನಿಯಮಿತ ವ್ಯಾಯಾಮ ಹಾಗೂ ಉತ್ತಮ ಆಹಾರ ಪದ್ಧತಿ ಇಲ್ಲದಿದ್ದರೆ, ಮಧುಮೇಹ ಉಂಟಾಗುತ್ತದೆ. ಭಾರತ ಈಗ ಮಧುಮೇಹಿಗಳ ಕೇಂದ್ರವಾಗಿರುವುದು ಬಹಳ ಬೇಸರದ ಸಂಗತಿ. ಈಗಿನ ಕಾಲದಲ್ಲಿ ಆಹಾರ ಪದ್ಧತಿಯಲ್ಲಿ ಬಹಳ ಬದಲಾವಣೆ ಉಂಟಾಗಿದೆ. ಅಭಿವೃದ್ಧಿ ಉತ್ತಮವಾಗಿ ಆಗುತ್ತಿದ್ದರೂ, ಆರೋಗ್ಯ ದೃಷ್ಟಿಯಿಂದ ಇದನ್ನು ನೋಡಿದರೆ ನಾವು ಹಿಮ್ಮುಖವಾಗಿ ಚಲಿಸುತ್ತಿದ್ದೇವೆ ಎಂದೆನಿಸುತ್ತದೆ ಎಂದರು.

 

ಗರಿಷ್ಠ ವಯೋಮಾನ ಈಗ 60 ವರ್ಷಕ್ಕಿಂತ ಹೆಚ್ಚಿರುವುದು ಆರೋಗ್ಯ ಮೂಲಸೌಕರ್ಯದಲ್ಲಿ ಉಂಟಾದ ಪ್ರಗತಿಯನ್ನು ತೋರಿಸುತ್ತದೆ. ಆದರೆ ಎಷ್ಟು ದೀರ್ಘ ಬದುಕಿದ್ದೇವೆ ಎನ್ನುವುದಕ್ಕಿಂತ ಎಷ್ಟು ಉತ್ತಮವಾಗಿ ಬದುಕಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ. 10 ವರ್ಷಕ್ಕೂ ಅಧಿಕ ಕಾಲ ಡಯಾಲಿಸಿಸ್‌ ಮಾಡಿಕೊಂಡೇ ಬದುಕಿದರೆ ಅದರಿಂದ ಏನು ಲಾಭ ಎಂದು ಚಿಂತಿಸಬೇಕಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ದಿನ 30 ಸಾವಿರ ಇದ್ದ ಪ್ರಕ್ರಿಯೆಯನ್ನು 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಖಾಸಗಿಯೂ ಸೇರಿದರೆ 1 ಲಕ್ಷಕ್ಕೂ ಅಧಿಕ ಪ್ರಕ್ರಿಯೆ ನಡೆಯುತ್ತಿದೆ ಎನ್ನಬಹುದು. ಇದು ಎಚ್ಚರಿಕೆಯ ಸಂಖ್ಯೆಯಾಗಿದೆ. ಈ ಎಲ್ಲಾ ಕಾರಣಗಳಿಂದ ಅಸಾಂಕ್ರಾಮಿಕ ರೋಗಗಳ ನಿರ್ವಹಣೆಗೆ ಆದ್ಯತೆ ನೀಡಲಾಗಿದೆ ಎಂದರು.

 

ಈ ಸಮ್ಮೇಳನದಲ್ಲಿ ಮಧುಮೇಹದ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸರ್ಕಾರಕ್ಕೆ ಸಲಹೆ ನೀಡಬಹುದು. ಇದರಿಂದ ಕಾರ್ಯಕ್ರಮಗಳನ್ನು ಜಾರಿ ಮಾಡಲು ನೆರವಾಗುತ್ತದೆ ಎಂದರು.

Tags: HealthHealth Minister Dr K Sudhakar
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram