ಶಿವಮೊಗ್ಗ : ಸ್ಯಾಂಟ್ರೋ ರವಿ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ…
ಸ್ಯಾಂಟ್ರೋ ರವಿ ಪ್ರಕರಣ ವಿಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾಜಿ ಸಿ.ಎಂ. ಬಿ.ಎಸ್.ವೈ. ಹೇಳಿಕೆ ನೀಡಿ ಸ್ಯಾಂಟ್ರೋ ರವಿ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಯಡಿಯೂರಪ್ಪನವರು ಸ್ಯಾಂಟ್ರೋ ರವಿ ವಿಚಾರ ನಾನು ಸಂಪೂರ್ಣ ತಿಳಿದುಕೊಂಡಿದ್ದೆನೆ. ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ.ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಬಿಗಿಯಾದ ಕ್ರಮ ತೆಗೆದುಕೊಂಡು ತಕ್ಕ ಪಾಠ ಕಲಿಸುವ ಪ್ರಯತ್ನ ಸರ್ಕಾರ ಮಾಡಲಿದೆ.ಈ ಬಗ್ಗೆ ಯಾವುದೇ ಅನುಮಾನ ಬೇಡ. ಹಲವಾರು ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿದೆ. ಸತ್ಯಾಸತ್ಯತೆ ತನಿಖೆಯಾದ ಬಳಿಕ ಹೊರಬರಲಿದೆ. ಯಾರೇ ಏನೇ ಹೇಳಬಹುದು. ಆದರೆ, ಸ್ಯಾಂಟ್ರೋ ರವಿ ವಿರುದ್ಧ ಖಂಡಿತ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ.
ಸಂಪುಟ ವಿಸ್ತರಣೆ ವಿಚಾರ ಕುರಿತಂತೆ ಮಾತನಾಡಿದ ಮಾಜಿ ಸಿಎಂ “ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಇವತ್ತಲ್ಲ ನಾಳೆ ಮಾಡಬೇಕೆಂದು ಚರ್ಚೆ ನಡೆಯುತ್ತಿದೆ. ವಿಸ್ತರಣೆಯಾಗುತ್ತೆ ಅನ್ನೋದಷ್ಟೇ ಗೊತ್ತು. ಆದರೆ ಕಾದು ನೋಡಬೇಕಿದೆ. ಈಶ್ವರಪ್ಪ ಸಂಪುಟ ಸೇರುವ ಬಗ್ಗೆ ದೆಹಲಿಯವರು ಏನು ತೀರ್ಮಾನ ಮಾಡ್ತಾರೋ ಗೊತ್ತಿಲ್ಲ. ಆದರೆ, ಅವರು ಸಂಪುಟ ಸೇರಬೇಕೆಂಬ ಅಪೇಕ್ಷೆ ಇದೆ ಎಂದು ತಿಳಿಸಿದ್ದಾರೆ.
ನಿನ್ನೆಯ ಕಾಂಗ್ರೆಸ್ ನ ಎಸ್.ಸಿ. ಎಸ್.ಟಿ. ಸಮಾವೇಶ ವಿಚಾರದ ಬಗ್ಗೆ ಮಾತನಾಡಿ ಅವರ ಸಮಾವೇಶಕ್ಕೆ ಬೆಲೆ ಎಲ್ಲಿದೆ. ಬಿಜೆಪಿ ಮಾಡುವ ಪ್ರತಿಯೊಂದು ಕೆಲಸಕ್ಕೂ ಟೀಕೆ ಮಾಡಿಕೊಂಡು ಎಸ್.ಸಿ., ಎಸ್.ಟಿ. ಬಗ್ಗೆ ಮಾಡಿರುವ ತೀರ್ಮಾನವನ್ನು ತಿರುಚಿ ಮನಬಂದಂತೆ ಒಬ್ಬ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡುವುದು ಎಷ್ಟು ಗೌರವ ಬರುತ್ತೆ ಎಂಬುದು ಅರ್ಥವಾಗದ ವಿಷಯ. ಅವರಿಂದ ಈ ಮಾತುಗಳನ್ನು ನಿರೀಕ್ಷೆ ಮಾಡಿರಲಿಲ್ಲ. ವಾಸ್ತವ ಸಂಗತಿ ಇಟ್ಟುಕೊಂಡು ಮಾತನಾಡಲಿ. ನೀವಂತೂ ಮಾಡಲಿಲ್ಲ, ನಾವು ಮಾಡಿದ್ದನ್ನು ಸ್ವಾಗತ ಮಾಡಬೇಕಿತ್ತು. ಟೀಕೆ ಟಿಪ್ಪಣಿ ಮಾಡುವಂತದ್ದು, ಅವರಿಗೆ ಗೌರವ ತರುವಂತದ್ದಲ್ಲ. ಮೀಸಲಾತಿ ಬಗ್ಗೆ ಯಾವುದೇ ಗೊಂದಲ ಇಲ್ಲ. ನಮ್ಮ ನಿಲುವು ಸ್ಪಷ್ಟವಾಗಿದೆ. ಅದರಂತೆ ನಾವು ಮುಂದೆ ಹೋಗುತ್ತೆವೆ ಎಂದು ಬಿ ಎಸ್ ವೈ ಹೇಳಿದ್ದಾರೆ.
Shimoga: sure to take action against Santro Ravi…








