Post Godra riots : ಗೋಧ್ರೋತ್ತರ ಗಲಭೆ ಪ್ರಕರಣದಲ್ಲಿ 22 ಆರೋಪಿಗಳ ಖುಲಾಸೆ
ಗೋಧ್ರೋತ್ತರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 22 ಆರೋಪಿಗಳನ್ನ ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ..
ಗೋದ್ರೋತ್ತರ ಗಲಭೆ ಪ್ರಕರಣದಲ್ಲಿ ಸುಮಾರು 17 ಸಾವಿರ ಜನರು ಮೃತಪಟ್ಟಿದ್ದರು.. ಇದೇ ಕೇಸ್ ಸಂಬಂಧಿಸಿದಂತೆ ಒಟ್ಟು 22 ಆರೋಪಿಗಳನ್ನ ಗುಜರಾತ್ ನ್ಯಾಯಾಲಯವು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ..
2002ರ ಗೋಧ್ರಾ ಹತ್ಯಾಕಾಂಡದ ನಂತರ ನಡೆದ ಕೋಮುಗಲಭೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ 17 ಮಂದಿ ಕೊಲೆ ನಡೆದಿತ್ತು.
ಬಳಿಕ ಸಾಕ್ಷ್ಯವನ್ನು ನಾಶಪಡಿಸಲು ದೇಹಗಳನ್ನು ಸುಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ಗುಜರಾತ್ ನ ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದ ನ್ಯಾಯಾಲಯವು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 22 ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಷ ತ್ರಿವೇದಿ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಈ ಪೈಕಿ ಎಂಟು ಮಂದಿ ವಿಚಾರಣೆಯ ಅವಧಿಯಲ್ಲಿ ಮೃತಪಟ್ಟಿದ್ದರು. 2002ರಲ್ಲಿ ಗೋಧ್ರಾದಲ್ಲಿ ಸಾಬರಮತಿ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ ಕೃತ್ಯದಲ್ಲಿ 59 ಮಂದಿ ಮೃತಪಟ್ಟಿದ್ದರು.
ಅವರಲ್ಲಿ ಹೆಚ್ಚಿನವರು ಅಯೋಧ್ಯೆಯಿಂದ ಮರಳುತ್ತಿದ್ದ ಕರಸೇವಕರಾಗಿದ್ದರು.
22 accused acquitted in Godhra riots case








