Ranaji trophy : ಇಂದಿನಿಂದ ಕರ್ನಾಟಕ, ಉತ್ತರಖಂಡ ಕ್ವಾರ್ಟರ್ ಫೈಟ್
2022-23ರ ಸಾಲಿನ ರಣಜಿ ಟ್ರೋಫಿ ಕ್ವಾರ್ಟರ್ ಕದನಕ್ಕೆ ವೇದಿಕೆ ಸಜ್ಜಾಗಿದ್ದು ಆತಿಥೇಯ ಕರ್ನಾಟಕ ತಂಡ ಉತ್ತರಾಖಂಡ ತಂಡವನ್ನು ಎದುರಿಸಲಿದೆ.
ಎರಡನೆ ಕ್ವಾರ್ಟರ್ ಕದನಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನ ಆತಿಥ್ಯವಹಿಸಲಿದೆ. 2014-15ರಲ್ಲಿ ಚಾಂಪಿಯನ್ ಆದ ನಂತರ ಕರ್ನಾಟಕ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿಲ್ಲ.
ನಾಯಕ ಮಯಾಂಕ್ ಅಗರ್ವಾಲ್ ಮತ್ತೊಂದು ಅಗ್ನಿ ಪರೀಕ್ಷೆ ಎದುರಿಸಲಿದ್ದಾರೆ.
ರಾಜ್ಯ ತಂಡ ಈ ಋತುವಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ,ಆಲೂರು ಕ್ರೀಡಾಂಗಣಗಳಲ್ಲಿ 4 ಪಂದ್ಯಗಳನ್ನಾಡಿದ್ದು 3ರಲ್ಲಿ ಗೆಲುವು ಸಾಧಿಸಿದ್ದು ಮತ್ತೊಮ್ಮೆ ತವರಿನ ಲಾಭ ಪಡೆಯಲು ಎದುರು ನೋಡುತ್ತಿದೆ.
ನಾಯಕ ಮಯಾಂಕ್ ಅಗರ್ವಾಲ್ 500ಕ್ಕೂ ಹೆಚ್ಚು ರನ್ ಹೊಡೆದು ಮಿಂಚಿದ್ದಾರೆ. ಆರ್.ಸಮರ್ಥ್,ಅನುಭವಿ ಬ್ಯಾಟರ್ ಮನೀಶ್ ಪಾಂಡೆ, ದೇವದತ್ ಪಡಿಕಲ್ ತಂಡದ ಆಧಾರ ಸ್ತಂಭಗಳಾಗಿದ್ದಾರೆ. ಶರತ್, ನಿಕಿನ್ ಜೋಸ್ ಬ್ಯಾಟಿಂಗ್ ಬಲ ಹೆಚ್ಚಿಸಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ವಿಜಯ್ ವೈಶಾಕ್,ವಾಸುಕಿ ಕೌಶಿಕ್, ವಿದ್ವತ್ ಕಾವೇರಪ್ಪ, ಕೆ.ಗೌತಮ್ ಶ್ರೇಯಸ್ ಗೋಪಾಲ್ ತವರಿನಲ್ಲಿ ಮಿಂಚುವ ನಿರೀಕ್ಷೆಯಲ್ಲಿದ್ದಾರೆ.
Ranaji trophy , quarter finals , match updates , saakshatv