ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Kannada Film : ಟ್ರೇಲರ್ ನೊಂದಿಗೆ ಬಂದ ‘ದೂರದರ್ಶನ’ ಚಿತ್ರತಂಡ 

Namratha Rao by Namratha Rao
February 19, 2023
in Cinema, News, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Kannada Film : ಟ್ರೇಲರ್ ನೊಂದಿಗೆ ಬಂದ ‘ದೂರದರ್ಶನ’ ಚಿತ್ರತಂಡ

ಸುಕೇಶ್ ಶೆಟ್ಟಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ದೂರದರ್ಶನ’ ಸಿನಿಮಾ ಸ್ಯಾಂಡಲ್ ವುಡ್ ಅಂಗಳದಲ್ಲಿ ನಿರೀಕ್ಷೆ ಹುಟ್ಟಿಸಿದೆ. ಮಾರ್ಚ್ 3ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಚಿತ್ರದಲ್ಲಿ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಹಾಗೂ ಅಯಾನ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಡ್ರಾಮಾ ಹಾಗೂ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

 

ನಾಯಕ ಪೃಥ್ವಿ ಅಂಬರ್ ಮಾತನಾಡಿ ಈ ಸಿನಿಮಾ ಎಲ್ಲರಿಗೂ ತುಂಬಾ ಹತ್ತಿರ ಆಗುತ್ತೆ. ಒಂದು ಕಾದಂಬರಿ ಓದಿದ ಅನುಭವವನ್ನು ಈ ಸಿನಿಮಾ ಎಲ್ಲರಿಗೂ ನೀಡುತ್ತೆ. ನಾನು ಮನು ಎಂಬ ಪಾತ್ರ ಮಾಡಿದ್ದೇನೆ. ಬಾಲ್ಯದಲ್ಲಿ ಮಾಡಿದ ತರಲೆ ಎಲ್ಲವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ತುಂಬಾ ಚೆನ್ನಾಗಿ ಈ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ದೂರದರ್ಶನ ಒಂದು ಒಳ್ಳೆಯ ಕಟೆಂಟ್ ಸಿನಿಮಾ. ಲವ್ ಸ್ಟೋರಿ, ಕಾಮಿಡಿ, ಎಮೋಷನ್ಸ್ ಎಲ್ಲವೂ ಈ ಚಿತ್ರದಲ್ಲಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ನಾಯಕಿ ಅಯಾನ ಮಾತನಾಡಿ ಈ ಸಿನಿಮಾ ನಮ್ಮ ನಿರ್ದೇಶಕರ ಡ್ರೀಮ್ ಪ್ರಾಜೆಕ್ಟ್. ಈ ಚಿತ್ರದಲ್ಲಿ ನನಗೆ ಅವಕಾಶ ಕೊಟ್ಟಿದಕ್ಕೆ ತುಂಬಾ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ಮೈತ್ರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿಂಪಲ್ ಹುಡುಗಿ ಪಾತ್ರ. ಲವ್ ಸ್ಟೋರಿ ಕೂಡ ಇದೆ. ಎಲ್ಲಾ ಕಲಾವಿದರೊಂದಿಗೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆ ಎಂದು ಸಂತಸ ಹಂಚಿಕೊಂಡ್ರು.

ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ ಈ ಸಿನಿಮಾ ಈ ಮಟ್ಟಿಗೆ ಬಂದು ನಿಂತಿದೆ ಅಂದ್ರೆ ಅದಕ್ಕೆ ಕಾರಣ ನಮ್ಮ ನಿರ್ಮಾಪಕರು. ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಸಿನಿಮಾ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರ ಒಂದಷ್ಟು ವಿಷಯಗಳಿಗೆ ಸ್ಪೆಷಲ್ ಎನಿಸಿಕೊಳ್ಳುತ್ತೆ. ರೆಗ್ಯೂಲರ್ ಸ್ಟೈಲ್ ಬಿಟ್ಟು ತುಂಬಾ ಆಪ್ತವಾಗೋ ಹಾಗೆ ಸಿನಿಮಾವನ್ನು ನರೇಟ್ ಮಾಡಲಾಗಿದೆ. ಎರಡು ಕಾಲು ಗಂಟೆ ಒಂದು ಊರೊಳಗೆ ಹೋಗಿ ಎಂಜಾಯ್ ಮಾಡಿದ ಅನುಭವವನ್ನು ಈ ಸಿನಿಮಾ ಪ್ರತಿಯೊಬ್ಬರಿಗೂ ನೀಡಲಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ನಿರ್ಮಾಪಕ ರಾಜೇಶ್ ಭಟ್ ಮಾತನಾಡಿ ಈ ಸಿನಿಮಾ ಕೇವಲ ನನ್ನೊಬ್ಬನಿಂದ ಆಗಿಲ್ಲ. ತಾಂತ್ರಿಕ ವರ್ಗ, ಕಲಾವಿದರ ಸಹಕಾರ ಇವರೆಲ್ಲರಿಂದ ಈ ಸಿನಿಮಾ ಆಗಿದೆ. ನಿರ್ದೇಶಕ ಸುಕೇಶ್ ಶೆಟ್ಟಿ ಜೊತೆ ಕೆಲಸ ಮಾಡಿದ್ದು ತುಂಬಾ ಹೆಮ್ಮೆ ಎನಿಸುತ್ತೆ. ಎಲ್ಲರ ಸಪೋರ್ಟ್ ಸಿನಿಮಾ ಮೇಲೆ ಇರಲಿ ಎಂದು ತಿಳಿಸಿದ್ರು.

ಉಗ್ರಂ ಮಂಜು ಮಾತನಾಡಿ ಇಡೀ ತಂಡ ಶ್ರಮ ಹಾಗೂ ಪ್ರೀತಿಯಿಂದ ಮಾಡಿರುವ ಸಿನಿಮಾ ‘ದೂರದರ್ಶನ’. ಚಿತ್ರದಲ್ಲಿ ಕಿಟ್ಟಿ ಎಂಬ ಪಾತ್ರ ಮಾಡಿದ್ದೇನೆ. 80.90ರ ದಶಕದಲ್ಲಿ ನೋಡುವ ಸ್ನೇಹ, ದ್ವೇಷ ಜೊತೆಗೆ ಕುಟುಂಬದ ಕನಸನ್ನು ನೆರವೇರಿಸುವ ಹುಡುಗನ ಪಾತ್ರ. ಎಲ್ಲಾ ಕಲಾವಿದರು, ತಾಂತ್ರಿಕ ವರ್ಗದ ಸಹಕಾರದಿಂದ ಈ ಚಿತ್ರ ಈ ಮಟ್ಟಿಗೆ ಬಂದಿದೆ. ನಿರ್ದೇಶಕ ಸುಕೇಶ್ ಶೆಟ್ಟಿ ನನಗೆ ಕಥೆ ಹೇಳುವಾಗ ಏನು ಪ್ರಾಮಿಸ್ ಮಾಡಿದ್ದರೋ ಹಾಗೆಯೇ ಸಿನಿಮಾ ಮೂಡಿ ಬಂದಿದೆ. ಅವರ ಎಫರ್ಟ್ ನೋಡಿ ಹೆಮ್ಮೆ ಎನಿಸುತ್ತೆ. ಮಾರ್ಚ್ 3ರಂದು ಎಲ್ಲರೂ ಸಿನಿಮಾ ನೋಡಿ ನಮ್ಮ ತಂಡವನ್ನು ಪ್ರೋತ್ಸಾಹಿಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

 

ವಿ ಎಸ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ರಾಜೇಶ್ ಭಟ್ ಚಿತ್ರವನ್ನು ನಿರ್ಮಾಣ ಮಾಡಿದ್ದು, ಉಗ್ರಂ ಮಂಜು ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ. ಉಗ್ರಂ ಮಂಜು, ಸುಂದರ್, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಚಿತ್ರದಲ್ಲಿದೆ. ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ಪ್ರದೀಪ್ ಆರ್ ರಾವ್ ಸಂಕಲನ, ನಂದೀಶ್ ಟಿ ಜಿ ಸಂಭಾಷಣೆ, ವಾಸುಕಿ ವೈಭವ ಸಂಗೀತ ಚಿತ್ರಕ್ಕಿದೆ.

 

Kannada Film , dooradarshan trailer release

Tags: dooradarshankannada film
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram