ಬೆಂಗಳೂರು: ಸತತ ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹತ್ವಾಕಾಂಕ್ಷೆಯ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್ ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಚಾಲನೆ ನೀಡಿದರು.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕು ಸ್ಥಾಪನೆ ಸಮಾರಂಭವನ್ನು ಆನ್ಲೈನ್ ಮೂಲಕ ಉದ್ಘಾಟನೆ ನೆರವೇರಿಸಿದರು.
ಜೊತೆಗೆ ರಾಷ್ಟ್ರೀಯ ಹೆದ್ದಾರಿ ವಿಭಾಗೀಯ ಕಚೇರಿಯ ಉದ್ಘಾಟನೆಯನ್ನು ಬಿಎಸ್ವೈ ನೆರವೇರಿಸಿದರು.
ಡಿಸಿಎಂ ಗೋವಿಂದ ಎಂ. ಕಾರಜೋಳ, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾನಸಿಕ ಒತ್ತಡ ನಿವಾರಿಸಲು ನಿಮ್ಮ ಆಹಾರ ಪದ್ಧತಿ ಹೇಗಿರಬೇಕು ಗೊತ್ತಾ!
ಮಾನಸಿಕ ಒತ್ತಡ ನಿವಾರಿಸಲು ಸಹಾಯ ಮಾಡುವ ಕೆಲವು ಆಹಾರಗಳ ಮಾಹಿತಿ ಇಲ್ಲಿದೆ. ಒತ್ತಡ ನಿವಾರಕ ಆಹಾರಗಳು ಕೆಲವು ಆಹಾರಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಮನಸ್ಥಿತಿಯನ್ನು...








