ಬೆಂಗಳೂರು: ಸತತ ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹತ್ವಾಕಾಂಕ್ಷೆಯ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್ ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಚಾಲನೆ ನೀಡಿದರು.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕು ಸ್ಥಾಪನೆ ಸಮಾರಂಭವನ್ನು ಆನ್ಲೈನ್ ಮೂಲಕ ಉದ್ಘಾಟನೆ ನೆರವೇರಿಸಿದರು.
ಜೊತೆಗೆ ರಾಷ್ಟ್ರೀಯ ಹೆದ್ದಾರಿ ವಿಭಾಗೀಯ ಕಚೇರಿಯ ಉದ್ಘಾಟನೆಯನ್ನು ಬಿಎಸ್ವೈ ನೆರವೇರಿಸಿದರು.
ಡಿಸಿಎಂ ಗೋವಿಂದ ಎಂ. ಕಾರಜೋಳ, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








