ಕೊಪ್ಪಳ : ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ ಕೆಆರ್ ಪಿ ಪಕ್ಷದ ಆಂಬುಲೆನ್ಸ್ ನ್ನು ಕನಕಗಿರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಾಲಿ ಜನಾರ್ಧನ ರೆಡ್ಡಿ ಅವರು ಗಂಗಾವತಿ ಕ್ಷೇತ್ರದಲ್ಲಿನ ಸಾರ್ವಜನಿಕರ ಅನಕೂಲಕ್ಕಾಗಿ ಇತ್ತೀಚೆಗೆ ಆಂಬುಲೆನ್ಸ್ ಸೇವೆ ಆರಂಭಿಸಿದ್ದರು. ಆಂಬುಲೆನ್ಸ್ ನ್ನು ತಮ್ಮ ಪಕ್ಷದ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗಿದೆ ಎಂದು ಕನಕಗಿರಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ರಾಜ್ಯದಲ್ಲಿ ಚುನಾವಣೆಗೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಸಮಯದಲ್ಲಿ ಮುಖಂಡರ ಭಾವಚಿತ್ರ ಬಳಸದಂತೆ ನಿಯಮ ಇದ್ದರೂ ನೂತನ ಪಕ್ಷದ ನಾಯಕ ಹಾಗೂ ಗಂಗಾವತಿ ಕ್ಷೇತ್ರದ ಅಭ್ಯರ್ಥಿ ಜನಾರ್ಧನ ರೆಡ್ಡಿ, ಬಳ್ಳಾರಿ ಅಭ್ಯರ್ಥಿ ಅರುಣಾ ಲಕ್ಷ್ಮೀ ಹಾಗೂ ಕನಕಗಿರಿ ಕ್ಷೇತ್ರದ ಅಭ್ಯರ್ಥಿ ಡಾ. ಚಾರುಲ್ ಅವರ ಭಾವಚಿತ್ರವಿರುವ ಪೋಸ್ಟರ್ ಗಳನ್ನು ಆಂಬುಲೆನ್ಸ್ ಮೇಲೆ ಅಂಟಿಸಲಾಗಿದೆ. ಹೀಗಾಗಿ ಆಂಬುಲೆನ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.