ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ.
ಹಾಲಿ ಶಾಸಕ ರಾಮಪ್ಪ ಲಮಾಣಿ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಂಡಾಯ ಸಾರಿದ್ದಾರೆ. ಗದಗ ಜಿಲ್ಲೆಯಲ್ಲಿ ಶಿರಹಟ್ಟಿ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಲಕ್ಷ್ಮೇಶ್ವರ ಪಟ್ಟಣದ ಪಂಚಾಚಾರ್ಯ ಮಂಗಲ ಮಂದಿರದಲ್ಲಿ ಸಭೆ ನಡೆಸಿದರು ಮುಖಂಡರು ಹಾಗೂ ಕಾರ್ಯಕರ್ತರು, ಲಮಾಣಿ ಅವರನ್ನು ಬಿಟ್ಟು ಬೇರೆ ಯಾರಿಗಾದರೂ ಟಿಕೆಟ್ ನೀಡಿದರೆ ಓಕೆ. ಇಲ್ಲವಾದರೆ, ನಾವು ಬಂಡಾಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಶಿರಹಟ್ಟಿ ಕ್ಷೇತ್ರದ ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಸಾವಿರಾರು ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿದ್ದರು.








