ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಅವರ ಹೆಸರು ಕಾಂಗ್ರೆಸ್ ನ ಮೂರನೇ ಪಟ್ಟಿಯಲ್ಲಿ ಬರಲಿ ಎಂದು ಕಾರ್ಯಕರ್ತರು ಹಾಗೂ ಮುಖಂಡರು ದೇವಸ್ಥಾನ ಹಾಗೂ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ನ (Congress) ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರ ಹೆಸರು ಬರಲಿ ಎಂದು ಪುಲಕೇಶಿನ ಗರದಲ್ಲಿನ ತಂಗಬೆಟ್ಟ ಸುಬ್ರಮಣ್ಯ ದೇಗುಲ ಹಾಗೂ ಮಸೀದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಾಂಗ್ರೆಸ್ ಹೈಕಮಾಂಡ್ ಹತ್ತಿರ ಹೋಗಿ ಅವರಲ್ಲಿ ಟಿಕೆಟ್ ಗಾಗಿ ಮನವಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ದೇವರ ಮೊಹೆ ಹೋಗಿದ್ದೇವೆ. ಪೂಜೆಯಿಂದ ಹೈಕಮಾಂಡ್ ಅಖಂಡ ಶ್ರೀನಿವಾಸ ಮೂರ್ತಿಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿ ಎಂದು ಪ್ರಾರ್ಥಿಸಿದರು.
ಕಳೆದ ಬಾರಿಯ ಚುನಾವಣೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು 81 ಸಾವಿರ ಮತಗಳಿಂದ ಅಮೋಘ ಗೆಲುವು ಸಾಧಿಸಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಲು ವಿಳಂಬವಾಗುತ್ತಿರುವುದಕ್ಕೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಿದ್ದೇ ಆದ್ದಲ್ಲಿ ಅವರನ್ನು ಕಳೆದ ಬಾರಿಗಿಂತ ಇನ್ನೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವಂತೆ ಮಾಡಲಾಗುವುದು ಎಂದು ಬೆಂಬಲಿಗರು ಭರವಸೆ ನೀಡಿದ್ದಾರೆ.








