ರಾಜ್ಯ ಚುನಾವಣೆ(Karnataka state assembly elections) ಗೆ ದಿನಗಣನೆ ಆರಂಭವಾಗಿದ್ದು, ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳು ಮುಂದಾಗಿವೆ. ಚುನಾವಣೆ ಸಮೀಪಿಸುತ್ತಿದ್ದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ (IT Raid) ನಡೆಸಲು ಆರಂಭಿಸಿದ್ದಾರೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ (Puttur assembly constituency) ಅಶೋಕ್ ರೈ (Ashok Rai) ಸಹೋದರನ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಹಣ ವಶಕ್ಕೆ ಪಡೆದಿದ್ದಾರೆ.
ಅಶೋಕ್ ರೈ ಸಹೋದರ ಕೆ. ಸುಬ್ರಹ್ಮಣ್ಯ ರೈ (K. Subrahmanya Rai) ಅವರ ಮೈಸೂರಿನ (Mysore) ನಿವಾಸದಲ್ಲಿ ಐಟಿ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಮನೆ ಮುಂದಿನ ಮರದ ಮೇಲೆ ನೇತು ಹಾಕಲಾಗಿದ್ದ 1 ಕೋಟಿ ರೂ. ನಗದು ಹಣ ಪತ್ತೆಯಾಗಿದೆ ಎನ್ನಲಾಗಿದೆ.
ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಅವರ ಸಹೋದರ ಸುಬ್ರಹ್ಮಣ್ಯ ರೈ ಎನ್ನಲಾಗಿದೆ. ಇವರ ಮೈಸೂರಿನಲ್ಲಿರುವ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮರದಲ್ಲಿ ಹಣ ಪತ್ತೆಯಾಗಿದೆ. ದಾಳಿ ನಡೆದ ಸಂದರ್ಭದಲ್ಲಿ ಗಿಡದಲ್ಲಿ ಬ್ಯಾಗ್ ಒಂದು ನೇತು ಹಾಕಲಾಗಿತ್ತು. ಅದನ್ನು ತೆಗೆದು ಪರಿಶೀಲಿಸಿದ ಅಧಿಕಾರಿಗಳು ಶಾಕ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಹಣ ವಶಕ್ಕೆ ಪಡೆದಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.