ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಪ್ರಚಾರಕ್ಕೆ (Election Campaign) ಇನ್ನೊಂದೇ ದಿನ ಬಾಕಿಯಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ಕೆಪಿಸಿಸಿ (KPCC) ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಶಿವಕುಮಾರ್ (DK Shivakumar) ಪರ ಪತ್ನಿ ಉಷಾ ಶಿವಕುಮಾರ್ (Usha Shivakumar) ಹಾಗೂ ಪುತ್ರ ಆಕಾಶ್ ಕೆಂಪೇಗೌಡ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಕನಕಪುರದ ಕೋಡಿಹಳ್ಳಿ ಭಾಗದಲ್ಲಿ ಆಕಾಶ್ ಕೆಂಪೇಗೌಡ ಭರ್ಜರಿ ಪ್ರಚಾರ ನಡೆಸಿದ್ದಾರೆ. ಪ್ರಚಾರ ಕಾರ್ಯದಲ್ಲಿ ಕೈ ಮುಖಂಡರು ಹಾಗೂ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಉಷಾ ಶಿವಕುಮಾರ್ ಕಳೆದ 15 ದಿನಗಳಿಂದಲೂ ಪತಿ ಡಿಕೆಶಿ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಾರಿ ಡಿಕೆಶಿ ಸಿಎಂ ಆಗುವ ಸಾಧ್ಯತೆ ಇದೆ. ನಿಮ್ಮ ಕ್ಷೇತ್ರದ ಮಗ ಸಿಎಂ ಆಗಲು ನೀವು ಶಕ್ತಿ ತುಂಬಬೇಕು ಎಂದು ಮನವಿ ಮಾಡಿದ್ದಾರೆ.








