ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಐಪಿಎಲ್ 2023

IPL 2023: ಸನ್ ರೈಸರ್ಸ್ ಸವಾಲು ಗೆಲ್ಲುವ ವಿಶ್ವಾಸದಲ್ಲಿ ಆರ್ ಸಿಬಿ!

ಆರ್ ಸಿಬಿ ಗೆದ್ದರೆ ಪ್ಲೇ ಆಫ್ ಹಾದಿ ಜೀವಂತ

Author2 by Author2
May 18, 2023
in ಐಪಿಎಲ್ 2023, Sports
Share on FacebookShare on TwitterShare on WhatsappShare on Telegram

ಪ್ಲೇ ಆಫ್ ಗೇರಲು ಮುಂದಿನ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಸನ್ರೈಸರ್ಸ್ ಈಗಾಗಲೆ ಮುಂದಿನ ಹಂತಕ್ಕೆ ತೇರ್ಗಡೆಯಾಗುವ ಅವಕಾಶವನ್ನು ಕಳಕೊಂಡಿದೆಯಾದರೂ ಆರ್ಸಿಬಿಯ ಅವಕಾಶವನ್ನು ಮೊಟಕುಗೊಳಿಸುವ ಅವಕಾಶವನ್ನಂತೂ ಪಡೆದಿದೆ.

ಆರ್ಸಿಬಿ ಹಲವಾರು ಕೊರತೆಗಳೊಂದಿಗೇ ಆಡುತ್ತಿದೆ. ಮುಖ್ಯವಾಗಿ ಆರ್ಸಿಬಿಯ ಬ್ಯಾಟಿಂಗ್ ವಿಭಾಗವು ಹಲವಾರು ಲೋಪಗಳನ್ನು ಹೊಂದಿದೆ. ವಿರಾಟ್ ಕೊಹ್ಲಿ ಫಾಫ್ ಡುಪ್ಲೆಸಿಸ್ ಮತ್ತು ಮ್ಯಾಕ್ಸ್ವೆಲ್ ಚೆನ್ನಾಗಿ ಆಡಿದರೆ ಆರ್ಸಿಬಿ ಗೆಲ್ಲುತ್ತದೆ, ಇವರು ವಿಫಲರಾದರೆ ತಂಡವು ಸೋಲು ಕಾಣುತ್ತದೆ ಎಂಬಂತಹ ಪರಿಸ್ಥಿತಿಯಿದೆ. ಮಧ್ಯಮ ಸರದಿ ಮತ್ತು ಕೆಳಸರದಿಯಲ್ಲಿ ಯಾವನೇ ಆಟಗಾರ ಗಮನಾರ್ಹ ನಿರ್ವಹಣೆಯನ್ನು ಈವರೆಗೆ ನೀಡಿಲ್ಲ. ಬೇರೆ ತಂಡಗಳಲ್ಲಿ ಇನ್ನಿಂಗ್ಸಿನ ಕೊನೆಯ ಹಂತದಲ್ಲಿ ಕೆಲವು ಆಟಗಾರರು ರನ್ ಗತಿ ಹೆಚ್ಚಿಸುವ ಆಟ ಪ್ರದರ್ಶಿಸುವುದಿದೆ. ಆದರೆ ಆರ್ಸಿಬಿಯಲ್ಲಿ ಅಂತಹ ಪ್ರಸಂಗ ಕಾಣುತ್ತಿಲ್ಲ. ಕೆಳಸರದಿಯಲ್ಲಿ ದೊಡ್ಡ ಹೊಡೆತಗಳ ಆಟಗಾರರಿಗೆ ಕೊರತೆಯಿದೆ ಎಂಬಂತೆ ಕಂಡುಬರುತ್ತದೆ.
ಅದೃಷ್ಟವಶಾತ್ ಕೊಹ್ಲಿ, ಮ್ಯಾಕ್ಸ್ವೆಲ್ ಮತ್ತು ಡುಪ್ಲೆಸಿ ಉತ್ತಮ ಫಾರ್ಮ್ನಲ್ಲಿ ಇರುವುದು ತಂಡಕ್ಕೆ ನಿರಾಳತೆ ತರುವ ಅಂಶ. ಇಂದಿನ ಪಂದ್ಯದಲ್ಲೂ ಅವರಿಂದ ಉತ್ತಮ ನಿರ್ವಹಣೆಯನ್ನು ನಿರೀಕ್ಷಿಸಲಾಗುತ್ತಿದೆ. ಡುಪ್ಲೆಸಿ ಈಗಾಗಲೆ 12 ಪಂದ್ಯಗಳಿಂದ 631 ರನ್ ಗಳಿಸಿ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಮ್ಯಾಕ್ಸ್ವೆಲ್ ಕೂಡಾ 5 ಅರ್ಧ ಶತಕಗಳನ್ನು ದಾಖಲಿಸಿದ್ದಾರೆ.

Related posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಕೊಹ್ಲಿ ಆರ್ಸಿಬಿ ಪರ ರನ್ಗಳಿಕೆಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು 438 ರನ್ ಗಳಿಸಿದ್ದಾರೆ. ಆದರೆ ಕಳೆದೆರಡು ಪಂದ್ಯಗಳಲ್ಲಿ ಕೊಹ್ಲಿ ಉತ್ತಮ ರನ್ ಗಳಿಸಲು ವಿಫಲರಾಗಿದ್ದಾರೆ. ಅದನ್ನೀಗ ಅವರು ಇಂದಿನ ಪಂದ್ಯದಲ್ಲಿ ಸರಿಪಡಿಸಿಕೊಳ್ಳಬೇಕಾಗಿದೆ. ಇನ್ನುಳಿದ ಎರಡು ಪಂದ್ಯಗಳಲ್ಲಾದರೂ ಆರ್ಸಿಬಿಯ ಮಧ್ಯಮ ಮತ್ತು ಕೆಳಸರದಿಯ ಬ್ಯಾಟರ್ಗಳು ತಮ್ಮ ನಿರ್ವಹಣೆಯನ್ನು ಸುಧಾರಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಿದೆ.

ಆರ್ಸಿಬಿಯ ಗೆಲುವಿನಲ್ಲಿ ಬೌಲರುಗಳ ಪಾತ್ರ ದೊಡ್ಡದು. ರಾಜಸ್ಥಾನವನ್ನು 59 ರನ್ಗಳಿಗೆ ಆಲೌಟ್ ಮಾಡಿ ದೊಡ್ಡ ಅಂತರದಲ್ಲಿ ಸೋಲಿಸಲು ನೆರವಾಗುವ ಮೂಲಕ ತಂಡದ ರನ್ರೇಟ್ ಹೆಚ್ಚಿಸುವಲ್ಲೂ ಅವರು ನೆರವಾಗಿದ್ದಾರೆ. ಸಿರಾಜ್, ಪರ್ನೆಲ್ ಮತ್ತು ಬ್ರೇಸ್ವೆಲ್ ಇಂದಿನ ಪಂದ್ಯದಲ್ಲೂ ಅದೇ ಬಗೆಯ ನಿರ್ವಹಣೆ ನೀಡುವ ಆಶಾವಾದ ತಂಡದ್ದಾಗಿದೆ.

ಈಗಾಗಲೆ ಪ್ಲೇ ಆಫ್ ಅವಕಾಶವನ್ನು ಕಳಕೊಂಡಿರುವ ಸನ್ರೈಸರ್ಸ್ ತನ್ನ ಗೌರವ ಕಾಪಾಡಿಕೊಳ್ಳುವ ಯತ್ನವಾಗಿ ಇಂದಿನ ಪಂದ್ಯ ಜಯಿಸಲು ಯತ್ನಿಸುವುದು ಖಚಿತ. ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ಬಲವನ್ನು ಹೊಂದಿದ್ದೂ ನಿರಾಶಾಜನಕ ನಿರ್ವಹಣೆ ನೀಡಿರುವ ತಂಡವಿದು. ಆದರೆ ಕೊನೆಯ ಹಂತದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶನಕ್ಕೆ ಸರ್ವಪ್ರಯತ್ನ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಈ ಪಂದ್ಯವನ್ನು ಆರ್ಸಿಬಿ ನಿರ್ಲಕ್ಷಿಸುವ ಹಾಗಿಲ್ಲ ಎಂಬುದು ಖಚಿತ.

Tags: IPL 2023: RCB confident of winning Sunrisers challenge!
ShareTweetSendShare
Join us on:

Related Posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram