ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ T20I ಸರಣಿಗೆ ಭಾರತ ತಂಡ ಪ್ರಕಟಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡದ ಪ್ರಮುಖ ಬ್ಯಾಟರ್ಗಳಾದ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಅವರುಗಳಿಗೆ ವಿಶ್ರಾಂತಿ ನೀಡಲಾಗಿದೆ.
ಕೆರೆಬಿಯನ್ನರ ವಿರುದ್ಧದ ಟಿ20 ಪಂದ್ಯಾವಳಿಗೆ ತಂಡದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿರುವ ಬಿಸಿಸಿಐ, ಹಲವು ಐಪಿಎಲ್ ಸ್ಟಾರ್ಗಳನ್ನ ತಂಡಕ್ಕೆ ಆಯ್ಕೆ ಮಾಡಿದೆ. ಪ್ರಮುಖವಾಗಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಿಂಚಿದ್ದ ತಿಲಕ್ ವರ್ಮ ಅವರಿಗೆ ಟಿ20 ಸರಣಿಗೆ ಆಯ್ಕೆ ಮಾಡಿದ್ದರೆ. ಈಗಾಗಲೇ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿರುವ ಯಶಸ್ವಿ ಜೈಸ್ವಾಲ್, ಇದೀಗ ಟಿ20 ಸರಣಿಯ ತಂಡಕ್ಕೂ ಆಯ್ಕೆಯಾಗಿದ್ದಾರೆ.
2023ರ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಆರಂಭಿಕನಾಗಿ ಆಡಿದ್ದ ಜೈಸ್ವಾಲ್, ಆರೆಂಜ್ ಕ್ಯಾಪ್ ಪಡೆದು ಮಿಂಚಿದ್ದರು.
ಇನ್ನೂ ಬೌಲಿಂಗ್ ವಿಭಾಗದಲ್ಲಿ ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಲಾಗಿದ್ದು, ಉಮ್ರಾನ್ ಮಲ್ಲಿಕ್, ಆವೇಶ್ ಖಾನ್, ಅರ್ಶದೀಪ್ ಸಿಂಗ್ ಹಾಗೂ ಮುಖೇಶ್ ಕುಮಾರ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಜೊತೆಗೆ ಸ್ಪಿನ್ ವಿಭಾಗದಲ್ಲಿ ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯಿ ಅವರ ಜೊತೆಗೆ ಆಲ್ರೌಂಡರ್ ಅಕ್ಸರ್ ಪಟೇಲ್ ಅವರನ್ನ ಪ್ರಮುಖ ಸ್ಪಿನ್ನರ್ಗಳಾಗಿ ಆಯ್ಕೆ ಮಾಡಲಾಗಿದೆ.
ಟಿ20 ಸರಣಿಗೆ ಇಬ್ಬರು ವಿಕೆಟ್ ಕೀಪರ್ಗಳನ್ನ ಆಯ್ಕೆ ಮಾಡಲಾಗಿದ್ದು, ಇಶಾನ್ ಕಿಶನ್ ಅವರೊಂದಿಗೆ ಸಂಜೂ ಸ್ಯಾಮ್ಸನ್ಗೆ ಟಿ20 ಸರಣಿಯಲ್ಲಿ ಅವಕಾಶ ನೀಡಲಾಗಿದೆ. ಉಳಿದಂತೆ ಪ್ರಮುಖ ಬ್ಯಾಟರ್ಗಳ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್, ಶುಭ್ಮನ್ ಗಿಲ್ ಕಾಣಿಸಿಕೊಂಡಿದ್ದರೆ. ನಿರೀಕ್ಷೆಯಂತೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಕೆರೆಬಿಯನ್ನರ ವಿರುದ್ಧದ ಟಿ20 ಸರಣಿಯಲ್ಲಿ ತಂಡವನ್ನ ಮುನ್ನಡೆಸಲಿದ್ದಾರೆ.
ಪ್ರವಾಸಿ ಭಾರತ ಹಾಗೂ ಅತಿಥೇಯ ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆಗಸ್ಟ್ 3ರಿಂದ ಆರಂಭವಾಗಲಿದ್ದು, 13ರವರೆಗೆ ನಡೆಯಲಿದೆ. ಎರಡು ತಂಡಗಳು ಎರಡು ಪಂದ್ಯಗಳ ಟೆಸ್ಟ್ ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿ ಬಳಿಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ.
ಭಾರತ ಟಿ20 ಪಂದ್ಯ:
ಇಶಾನ್ ಕಿಶನ್, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ಸೂರ್ಯಕುಮಾರ್ ಯಾದವ್, ಸಂಜೂ ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯಿ, ಅರ್ಶದೀಪ್ ಸಿಂಗ್, ಉಮ್ರಾನ್ ಮಲ್ಲಿಕ್, ಅವೇಶ್ ಖಾನ್ ಹಾಗೂ ಮುಖೇಶ್ ಕುಮಾರ್.








