ಭೋಪಾಲ್ : ದೇಶದಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಭಕ್ತರು ಮಹಾದೇವನನ್ನು ಒಲಿಸಿಕೊಳ್ಳಲು ಪೂಜೆ, ಪುನಸ್ಕಾರ, ಉಪವಾಸದ ಮೊರೆ ಹೋಗಿದ್ದಾರೆ. ದೇಶದ ಶಿವನ ಎಲ್ಲಾ ದೇವಾಲಯಗಳಲ್ಲಿ ಮುಂಜಾನೆಯಿಂದಲೂ ಪೂಜೆ ಪುನಸ್ಕಾರಗಳು ನೆರವೇರುತ್ತಿವೆ. ಈ ನಡುವೆ ಶಿವರಾತ್ರಿ ಅಂಗವಾಗಿ ಮಧ್ಯಪ್ರದೇಶದ ಭೋಪಾಲ್ ನ ಪೊಲೀಸ್ ಠಾಣೆಯೇ ಮಹಾದೇದನ ಮಂದಿರವಾಗಿ ಬದಲಾಗಿದೆ.
ಹೌದು, ಮಧ್ಯಪ್ರದೇಶದ ಭೋಪಾಲ್ ನ ಭೈರಾಗರ್ ನಲ್ಲಿರೋ ಸಂತ ಹಿರ್ದರಾಮ್ ನಗರ ಠಾಣೆಯೇ ಇದೀಗ ಥಾಣೇಶ್ವರ ಮಹಾದೇವ ಮಂದಿರವಾಗಿ ಬದಲಾಗಿದೆ. ಮಹಾಶಿವರಾತ್ರಿ ಪ್ರಯುಕ್ತ ಠಾಣೆಯ ಆವರಣದಲ್ಲಿದ್ದ ಶಿವಲಿಂಗಕ್ಕೆ ಪೂಜೆ ಮಾಡಲಾಗಿತ್ತು. ನಂತರ ಪೊಲೀಸರು ಠಾಣೆಯ ಹೆಸರನ್ನು ಥಾಣೇಶ್ವರ ಮಹಾದೇವ ಮಂದಿರ ಠಾಣಾ ಎಂದು ಬದಲಾಯಿಸಿದ್ದಾರೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








