ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬರು ತಮ್ಮಿಬ್ಬರ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಹತ್ತಿರ ನಡೆದಿದೆ. ಆದರೆ, ಘಟನೆಯಲ್ಲಿ ಓರ್ವ ಬಾಲಕಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಯಿ ನಾಗಮ್ಮ (38) ಹಾಗೂ ಮಗಳು ಶ್ರೀನಿಧಿ (5) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. 7 ವರ್ಷದ ಗಂಗೋತ್ರಿ ಬಾವಿಯಿಂದ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾಳೆ ಎನ್ನಲಾಗಿದೆ. ಮೃತದೇಹಗಳಿಗಾಗಿ ಆಗ್ನಿಶಾಮಕದಳ ಶೋಧ ಕಾರ್ಯ ನಡೆಯುತ್ತಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ