ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಕಾವೇರಿ ನದಿ ಬಗ್ಗೆ ನಿಮಗೆಷ್ಟು ಗೊತ್ತು?

admin by admin
August 2, 2023
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಕಾವೇರಿ ನದಿ ಬಗ್ಗೆ ನಿಮಗೆಷ್ಟು ಗೊತ್ತು?

How much do you know about Kaveri River?

Related posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

July 12, 2026

ದಕ್ಷಿಣ ಮಂದಾಕಿನಿ, ಕರ್ನಾಟಕದ ಜೀವನದಿ ಕಾವೇರಿ. ಹಿಂದಿನ ಸಂಚಿಕೆಯಲ್ಲಿ ಕಾವೇರಿ ನದಿಗೆ ಕಾವೇರಿ ಹೆಸರು ಹೇಗೆ ಬಂತು ಅಂತ ಹಿಂದಿನ ಸಂಚಿಕೆಯಲ್ಲಿ ತಿಳಕೊಂಡ್ರಿ. ಅದರ ಲಿಂಕ್ ಡಿಸ್ಕ್ರಿಪ್ಶನ್ ನಲ್ಲಿ ಇದೆ ನೋಡಬಹುದು. ಈ ಸಂಚಿಕೆಯಲ್ಲಿ ಕಾವೇರಿ ನದಿ ಹುಟ್ಟುವುದು ಎಲ್ಲಿ? ಯಾವಾಗ? ಯಾವ ರಾಜ್ಯಗಳಲ್ಲಿ ಹರಿಯುತ್ತೆ ತಿಳಿದುಕೊಳ್ಳೋಣ.

ವೀರರ ನಾಡು, ಮಲೆನಾಡಿನ ತಪ್ಪಲು ಪಶ್ಚಿಮ ಘಟ್ಟ ಕೊಡಗು ಜಿಲ್ಲೆಯ ತಲಕಾವೇರಿಯೆಂಬ ಸ್ಥಳದಲ್ಲಿ ಕಾವೇರಿ ನದಿ ಉಗಮವಾಗುತ್ತದೆ. ಸೂರ್ಯನು ತುಲಾ ರಾಶಿಯನ್ನು ಪ್ರವೇಶಿಸುವ ದಿನವನ್ನು ತುಲಾ ಸಂಕ್ರಮಣವೆಂದು ಕರೆಯುತ್ತಾರೆ. ಆಂಗ್ಲ ಕ್ಯಾಲೆಂಡರ್ ಪ್ರಕಾರ ಇದು ಅಕ್ಟೋಬರ್ ತಿಂಗಳಿನಲ್ಲಿ ಬರುತ್ತೆ.

ತುಲಾ ಸಂಕ್ರಮಣದ ದಿನ ನಿರ್ಧರಿತ ಲಗ್ನ ಹಾಗೂ ಮುಹೂರ್ತದಲ್ಲಿ ಗಂಗೆ ಮೊದಲು ಮಾಡಿಕೊಂಡು ಆರು ಪವಿತ್ರ ನದಿಗಳು ಕಾವೇರಿಯಲ್ಲಿ ಬಂದು ಸೇರುತ್ತವೆ ಎಂಬ ನಂಬಿಕೆಯಿದೆ. ಹೀಗೆ ಬಂದು ಸೇರುವ ಈ ಪುಣ್ಯ ದಿನದಂದು ತಲಕಾವೇರಿಯ ಜ್ಯೋತಿ ಮಂಟಪದ ಮುಂದಿರುವ ಕುಂಡದಲ್ಲಿ ಕಾವೇರಿ ನದಿ ಉಗಮವಾಗುತ್ತದೆ.

ನಂತರ ಕೊಡಗಿನ ಬೆಟ್ಟಗಳಲ್ಲಿ ಹರಿದು ನಂತರ ದಕ್ಷಿಣ ಪ್ರಸ್ಥಭೂಮಿಯ ಮೇಲೆ ಪೂರ್ವಕ್ಕೆ ಹರಿಯುತ್ತಾಳೆ. ಮುಂದೆ ಮೈಸೂರು, ಮಂಡ್ಯ ಜಿಲ್ಲೆಯನ್ನು ಪ್ರವೇಶಿಸುತ್ತಾಳೆ. ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕೃಷ್ಣರಾಜ ಸಾಗರ ಆಣೆಕಟ್ಟು ಕಟ್ಟಲಾಗಿದೆ. ಈ ಮೂಲಕ ಮಂಡ್ಯ ಜಿಲ್ಲೆಯ ಜನರ ಬದುಕಿಗೆ ಜೀವನಾಡಿಯಾಗಿದ್ದಾಳೆ. ಮೈಸೂರು, ಮಂಡ್ಯ, ರಾಜಧಾನಿ ಬೆಂಗಳೂರು ಜನತೆಗೆ ಜೀವಜಲವಾಗಿದ್ದಾಳೆ.
ಅಲ್ಲದೆ ಮಂಡ್ಯ ಜಿಲ್ಲೆಯ, ಮಳವಳ್ಳಿಯಲ್ಲಿ ಶಿವನಸಮುದ್ರದಲ್ಲಿ 320 ಅಡಿಗಳ ಎತ್ತರದಿಂದ ಧುಮುಕಿ ಗಗನಚುಕ್ಕಿ ಮತ್ತು ಭರಚುಕ್ಕಿ ಎಂಬ ಜಲಪಾತಗಳನ್ನು ಸೃಷ್ಟಿಸುತ್ತಾಳೆ.

ಕರ್ನಾಟಕದಲ್ಲಿ ಕಾವೇರಿ ನದಿಗೆ ಹನ್ನೆರಡು ಅಣೆಕಟ್ಟುಗಳಿವೆ. ಈ ಎಲ್ಲ ಅಣೆಕಟ್ಟುಗಳ ಮುಖ್ಯ ಉದ್ದೇಶ ನೀರಾವರಿ. ಕಾವೇರಿ ನದಿ ತಟದಲ್ಲಿ ಬರುವ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಶ್ರೀರಂಗಪಟ್ಟಣ ಒಂದು.

ಕಾವೇರಿ ನದಿಗೆ ಪ್ರಮುಖವಾಗಿ ಹರಂಗಿ, ಹೇಮಾವತಿ, ಕಬಿನಿ, ಭವಾನಿ, ಲಕ್ಷ್ಮಣ ತೀರ್ಥ, ನೊಯಾಲ್ ಮತ್ತು ಅರ್ಕಾವತಿ ಸೇರಿದಂತೆ ಹಲವು ಉಪನದಿಗಳಿವೆ.

ಕಾವೇರಿ ಮೂರು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಹರಿಯುತ್ತಾಳೆ. ಕರ್ನಾಟಕದಲ್ಲಿ 34,273 ಚದರ ಕಿಲೋಮೀಟರ್, ತಮಿಳುನಾಡು, 43,868 ಚದರ ಕಿಲೋಮೀಟರ್, ಕೇರಳದಲ್ಲಿ 2,866 ಚದರ ಕಿಲೋಮೀಟರ್ ಮತ್ತು ಪುದುಚೇರಿ, 148 ಚದರ ಕಿಲೋಮೀಟರ್ ಹರಿಯುತ್ತಾಳೆ.

ಹೊಗೇನಕಲ್ ಜಲಪಾತವಾಗಿ ಧುಮುಕಿ ತಮಿಳುನಾಡನ್ನು ಪ್ರವೇಶಿಸಿ ಕಾವೇರಿ ತಂಜಾವೂರು ಜಿಲ್ಲೆಯ ಮುಖಾಂತರ ಹರಿದು ಕೊನೆಗೆ ಇಬ್ಭಾಗವಾಗಿ ಬಂಗಾಳ ಕೊಲ್ಲಿಯನ್ನು ಸೇರುತ್ತಾಳೆ.

Tags: kaveri riverriverRiver KAveri
ShareTweetSendShare
Join us on:

Related Posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram