ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸರ್ವಪಕ್ಷ ಸಭೆಯಲ್ಲಿ ನಾಯಕರು ಮಂಡಿಸಿದ ಅಭಿಪ್ರಾಯಗಳು

admin by admin
June 20, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಸರ್ವಪಕ್ಷ ಸಭೆಯಲ್ಲಿ ನಾಯಕರು ಮಂಡಿಸಿದ ಅಭಿಪ್ರಾಯಗಳು

ಹೊಸದಿಲ್ಲಿ, ಜೂನ್ 20: ಗಾಲ್ವಾನ್ ನದಿ ಕಣಿವೆ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ಸರ್ವಪಕ್ಷ ಸಭೆ ನಡೆದಿದ್ದು, ದೇಶದ ಪ್ರಮುಖ 20 ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು . ಸರ್ವಪಕ್ಷ ಸಭೆ ಆರಂಭಕ್ಕೂ ಮೊದಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಎದ್ದುನಿಲ್ಲುವ ಮೂಲಕ ಗಾಲ್ವಾನ್ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಅರ್ಪಿಸಿದರು.

Related posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

March 25, 2026
ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

March 25, 2026

ಗಾಲ್ವಾನ್ ನದಿ ಕಣಿವೆ ಸಂಘರ್ಷಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೂ ತಮ್ಮ ಬೆಂಬಲವಿರುವುದಾಗಿ ಎಲ್ಲ ಪ್ರತಿಪಕ್ಷಗಳು ಮತ್ತು ಎನ್​ ಡಿಎನ ಮಿತ್ರಪಕ್ಷಗಳು ಈ ಸಂದರ್ಭದಲ್ಲಿ ಘೋಷಿಸಿದವು. ವಿವಿಧ ಪಕ್ಷದ ನಾಯಕರು ಮಂಡಿಸಿದ ಅಭಿಪ್ರಾಯಗಳ ಬಗ್ಗೆ ಇಲ್ಲಿದೆ ಒಂದು ವರದಿ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ

ಭಾರತ-ಚೀನಾ ನಡುವಿನ ಸಂಘರ್ಷಕ್ಕೆ ಮೂಲ ಕಾರಣ ಭಾರತೀಯ ಗುಪ್ತಚರ ಇಲಾಖೆಯ ವೈಫಲ್ಯ ಎಂದು ಆರೋಪಿಸಿದರು. ಗಡಿ ನಿಯಂತ್ರಣ ರೇಖೆಯ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವ ಎಲ್ಲಾ ಮಾರ್ಗಗಳನ್ನು ಕಳೆದುಕೊಂಡಿರುವ ಪರಿಣಾಮದಿಂದಾಗಿ ನಾವು 20 ಭಾರತೀಯ ಯೋಧರನ್ನು ಕಳೆದುಕೊಳ್ಳಬೇಕಾಯಿತು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಸರ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ನಮ್ಮೆಲ್ಲರ ಮನದಲ್ಲೂ ನಾವೆಲ್ಲರೂ ಒಂದೇ ಎಂಬ ಭಾವನೆಯಿದೆ.‌ ಪ್ರಧಾನ ಮಂತ್ರಿಗಳೇ ನಿಮ್ಮೊಂದಿಗೆ ಸದಾ ನಾವು ಇರುತ್ತೇವೆ. ಭಾರತೀಯ ಯೋಧರ ಜೊತೆ ಮತ್ತು ಕುಟುಂಬದವರ ಜೊತೆಗೆ ನಾವು ಸದಾ ಬೆಂಬಲವಾಗಿ ನಿಲ್ಲುತ್ತೇವೆ. ನಮ್ಮದು ಶಾಂತಿ ಪ್ರಿಯ ರಾಷ್ಟ್ರ ಆದರೆ ಇದು ನಮ್ಮ ದೌರ್ಬಲ್ಯವಲ್ಲ.‌ಭಾರತ ಬಲಶಾಲಿ ರಾಷ್ಟ್ರವೇ ಹೊರತು ಅಸಹಾಯಕವಾಗಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಚೀನಾದ ಎದುರು ಭಾರತವು ಎಂದಿಗೂ ತಲೆ ಬಾಗುವುದಿಲ್ಲ.‌ ಚೀನಾದಲ್ಲಿರುವುದು ಸರ್ವಾಧಿಕಾರಿ ಪ್ರಭುತ್ವವೇ ಹೊರತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲ . ಅವರು ತಮಗೆ ಬೇಕಾದ ವ್ಯವಸ್ಥೆಗಳನ್ನು ಬೇಕೆನಿಸಿದಾಗ ಮಾಡುತ್ತಾರೆ. ಅವರ ವಿರುದ್ಧ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್

ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ ಅಂತಾರಾಷ್ಟ್ರೀಯ ಒಪ್ಪಂದಕ್ಕೆ ಭಾರತವು ಬದ್ಧವಾಗಿರಬೇಕು. ಗಡಿಯಲ್ಲಿ ಯಾವುದೇ ಕಾರಣಕ್ಕೂ ಶಸ್ತ್ರಾಸ್ತ್ರಗಳನ್ನು ಬಳಸಲು ಅವಕಾಶ ನೀಡಬಾರದು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅಭಿಪ್ರಾಯ ವ್ಯಕ್ತಪಡಿಸಿದರು. 1996ರ ಭಾರತ-ಚೀನಾ ಪಂಚಶೀಲಾ ಒಪ್ಪಂದದ ಪ್ರಕಾರ ಗಡಿಯಲ್ಲಿ ಎರಡೂ ದೇಶಗಳ ಸೇನಾಪಡೆಯ ಸೈನಿಕರು ಯಾವುದೇ ರೀತಿಯ ಮದ್ದು-ಗುಂಡುಗಳನ್ನು ಮತ್ತು ಸ್ಪೋಟಕಗಳನ್ನು ಇಟ್ಟುಕೊಳ್ಳುವಂತಿಲ್ಲ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ವಪಕ್ಷ ಸಭೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆಹ್ವಾನವಿರದಿದ್ದರೂ, ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನಿರ್ಧಾರಕ್ಕೆ ತಮ್ಮ ಬೆಂಬಲವಿದೆ ಎಂದೂ ಚೀನಾಗೆ ಸರಿಯಾದ ಪಾಠ ಕಲಿಸಬೇಕಿದೆ ಎಂದು ಹೇಳಿದರು

Tags: #ಕರ್ನಾಟಕCongressDelhiindiaIndia-China borderIndia-China conflickarnatakaPrime Minister Narendra Modi
ShareTweetSendShare
Join us on:

Related Posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

by Shwetha
March 25, 2026
0

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

by Shwetha
March 25, 2026
0

ರಾಜ್ಯದಲ್ಲಿ ಬಹುಕಾಲದಿಂದ ಮುಂದೂಡಲಾಗುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ. ಸುಮಾರು 5,950 ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿಯನ್ನು ಅಂತಿಮಗೊಳಿಸಲು...

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram