ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಿಂಗಾರು ಮಳೆ ಚುರುಕುಗೊಂಡಿದ್ದು, ಇಂದು ಹಾಗೂ ನಾಳೆ ಹಲವೆಡೆ ಮಳೆ (Rain) ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ 2 ದಿನಗಳ ಕಾಲ ವರುಣ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಂಗಳೂರು, ಚಾಮರಾಜನಗರ, ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಿನ್ನೆ ಕೂಡ ಬೆಂಗಳೂರಿನಲ್ಲಿ ಮಳೆ ಸುರಿದಿದ್ದು. ನಿನ್ನೆ ಸಂಜೆ ಆರಂಭವಾದ ಮಳೆ ರಾತ್ರಿಯವರೆಗೂ ಸುರಿದಿದ್ದು ಅನೇಕ ರಸ್ತೆಗಳು ಜಲಾವೃತವಾಗಿವೆ. ಹೀಗಾಗಿ ಸವಾರರು ಪರದಾಟ ನಡೆಸುವಂತಾಗಿತ್ತು.
ಮುಂಗಾರು ಕೈಕೊಟ್ಟ ಬಳಿಕ ಮಳೆ ಕಾಣದೆ ಕಂಗಾಲಾಗಿದ್ದ ಕರುನಾಡಿಗೆ ಸದ್ಯ ವರುಣ ದೇವ ಕೊಂಚ ರಿಲ್ಯಾಕ್ಸ್ ನೀಡುತ್ತಿದ್ದಾನೆ. ಹಿಂಗಾರು ಅಧಿಕೃತ ಪ್ರವೇಶ ಮಾಡಿರುವ ಬೆನ್ನಲ್ಲಿಯೇ ಹಲವೆಡೆ ಮಳೆಯಾಗುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.