ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

CWC 2023: ಇಂದು ಡಬಲ್‌ ಧಮಾಕ: ನೆದರ್ಲೆಂಡ್ಸ್‌ಗೆ ಲಂಕಾ ಸವಾಲು: ಇಂಗ್ಲೆಂಡ್‌ಗೆ ಸೌತ್‌ ಆಫ್ರಿಕಾ ಚಾಲೆಂಜ್‌

C Dinesh by C Dinesh
October 21, 2023
in Sports, ಕ್ರಿಕೆಟ್ ವಿಶ್ವಕಪ್ 2023
Netherlands

Netherlands

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಇಂದು ಮತ್ತೊಂದು ಡಬಲ್‌ ಹೆಡ್ಡರ್‌ ನಡೆಯುತ್ತಿದ್ದು, ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನೆದರ್ಲೆಂಡ್ಸ್‌ ಇದೀಗ ಶ್ರೀಲಂಕಾ ಸವಾಲು ಎದುರಿಸಲು ಸಜ್ಜಾಗಿದ್ದರೆ. ಹಿಂದಿನ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿರುವ ಇಂಗ್ಲೆಂಡ್‌ ಹಾಗೂ ಸೌತ್‌ ಆಫ್ರಿಕಾ 2ನೇ ಪಂದ್ಯದಲ್ಲಿ ಮುಖಾಮುಖಿ ಆಗುತ್ತಿವೆ.

ಇಂದಿನ ಮೊದಲ ಪಂದ್ಯದಲ್ಲಿ ನೆದರ್ಲೆಂಡ್ಸ್‌ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿ ಆಗುತ್ತಿವೆ. ಕಳೆದ ಪಂದ್ಯದಲ್ಲಿ ಸೌತ್‌ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿರುವ ನೆದರ್ಲೆಂಡ್ಸ್‌ ಗೆಲುವಿನ ಆತ್ಮವಿಶ್ವಾದಲ್ಲಿದೆ. ಹೀಗಾಗಿ ಆಡಿರುವ ಮೂರು ಪಂದ್ಯಗಳಲ್ಲಿ ಸೋಲಿನ ಸುಳಿಗೆ ಸಿಲುಕಿರುವ ಶ್ರೀಲಂಕಾ ವಿರುದ್ಧ ಮತ್ತೊಂದು ಜಯಭೇರಿ ಬಾರಿಸುವ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಹಣಾಹಣಿಗೆ ಲಕ್ನೋದಲ್ಲಿ ವೇದಿಕೆ ಸಜ್ಜಾಗಿದೆ.

NED v SL

ಟೂರ್ನಿಯಲ್ಲಿ ಸತತ ಎರಡು ಸೋಲು ಕಂಡಿದ್ದ ನೆದರ್ಲೆಂಡ್ಸ್‌, ನಂತರ ನಡೆದ ಸೌತ್‌ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಅಚ್ಚರಿ ಮೂಡಿಸಿತ್ತು. ಸಂಘಟಿತ ಪ್ರದರ್ಶನದಿಂದ ಬಲಿಷ್ಠ ಆಫ್ರಿಕನ್ನರಿಗೆ ಮಣ್ಣುಮುಕ್ಕಿಸಿದ್ದ ನೆದರ್ಲೆಂಡ್ಸ್‌, ಇದೇ ನಿರೀಕ್ಷೆಯೊಂದಿಗೆ ಶ್ರೀಲಂಕಾ ತಂಡದ ವಿರುದ್ಧ ಜಯದ ನಗೆಬೀರುವ ಲೆಕ್ಕಾಚಾರದಲ್ಲಿದೆ. ಮತ್ತೊಂದೆಡೆ ಟೂರ್ನಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಸೋಲಿನ ಆಘಾತ ಕಂಡಿರುವ ಶ್ರೀಲಂಕಾ, ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ತಂಡದ ಬ್ಯಾಟಿಂಗ್‌ ಉತ್ತಮವಾಗಿದ್ದರು, ಬೌಲಿಂಗ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದಿರುವುದು ತಂಡದ ಸೋಲಿಗೆ ಕಾರಣವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು, ಗೆಲುವಿನ ಹಾದಿ ಕಂಡುಕೊಳ್ಳುವ ಲೆಕ್ಕಾಚಾರದಿಂದ ಲಂಕನ್ನರು ಕಣಕ್ಕಿಳಿಯಲಿದ್ದಾರೆ.

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026

ಪಂದ್ಯದ ಸಮಯ: ಬೆಳಗ್ಗೆ 10.30ಕ್ಕೆ

ಇಂಗ್ಲೆಂಡ್‌ v ಸೌತ್‌ ಆಫ್ರಿಕಾ ಹಣಾಹಣಿ:
ಟೂರ್ನಿಯಲ್ಲಿ ಎದುರಾದ ಅಚ್ಚರಿಯ ಸೋಲಿನಿಂದ ಕಂಗೆಟ್ಟಿರುವ ಇಂಗ್ಲೆಂಡ್‌ ಹಾಗೂ ಸೌತ್‌ ಆಫ್ರಿಕಾ ತಂಡಗಳು ಕಮ್‌ಬ್ಯಾಕ್‌ ಮಾಡುವ ತವಕದಲ್ಲಿದೆ. ಉಭಯ ತಂಡಗಳ ನಡುವಿನ ಜಿದ್ದಾಜಿದ್ದಿನ ಹಣಾಹಣಿಗೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ವೇದಿಕೆ ಸಜ್ಜಾಗಿದ್ದು, ಇಂದಿನ ಪಂದ್ಯಕ್ಕಾಗಿ ಎರಡು ತಂಡಗಳು ಭರ್ಜರಿ ತಯಾರಿ ಮಾಡಿಕೊಂಡಿವೆ.

SA v ENG

ಕಳೆದ ಪಂದ್ಯದಲ್ಲಿ ಅಫ್ಘಾನಿಸ್ತಾನದ ಸ್ಪಿನ್ನರ್‌ಗಳ ದಾಳಿಗೆ ತತ್ತರಿಸಿದ್ದ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಮಾತ್ರವೇ ಗೆಲುವು ಸಾಧಿಸಿದ್ದು, ಉಳಿದ 2 ಪಂದ್ಯಗಳಲ್ಲಿ ಸೋಲಿನ ಆಘಾತ ಕಂಡಿದೆ. ಹೀಗಾಗಿ 3 ಪಂದ್ಯಗಳಲ್ಲಿ 2 ಅಂಕ ಪಡೆದಿರುವ ಇಂಗ್ಲೆಂಡ್‌, ಟೂರ್ನಿಯ ಮುಂದಿನ ಹಂತಕ್ಕೇರಲು ಗೆಲುವು ಅನಿವಾರ್ಯವಾಗಿದೆ. ಆದರೆ ಇದಕ್ಕಾಗಿ ಸೌತ್‌ ಆಫ್ರಿಕಾ ವಿರುದ್ಧ ಸಂಘಟಿತ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿದೆ.
South Africa

ಮತ್ತೊಂದೆಡೆ ಟೂರ್ನಿಯಲ್ಲಿ ಅದ್ಭುತ ಆರಂಭ ಕಂಡಿದ್ದ ಸೌತ್‌ ಆಫ್ರಿಕಾ, ಕಳೆದ ಪಂದ್ಯದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಸೋಲಿನ ಆಘಾತ ಕಂಡಿದೆ. ಹೀಗಾಗಿ ಟೂರ್ನಿಯ ಮುಂದಿನ ಹಂತಕ್ಕೇರಲು ತೆಂಬಾ ಬವುಮಾ ಪಡೆ ಇಂಗ್ಲೆಂಡ್‌ ವಿರುದ್ಧ ಗೆದ್ದು ಕಮ್‌ಬ್ಯಾಕ್‌ ಮಾಡಬೇಕಾದ ಒತ್ತಡದಲ್ಲಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಬಲಿಷ್ಠವಾಗಿರುವ ಸೌತ್‌ ಆಫ್ರಿಕಾ ತನ್ನ ಹಿಂದಿನ ಪಂದ್ಯದ ತಪ್ಪುಗಳಿಂದ ಎಚ್ಚತ್ತುಕೊಳ್ಳಬೇಕಿದೆ. ಎರಡು ತಂಡಗಳಲ್ಲಿ ಯಾರಿಗೆ ಗೆಲುವು ಲಭಿಸಿದರು, ಸೆಮಿಫೈನಲ್‌ ರೇಸ್‌ನಲ್ಲಿ ಜೀವಂತ ಉಳಿಯಲು ಅನುಕೂಲವಾಗಲಿದೆ.

ಪಂದ್ಯದ ಸಮಯ: ಮಧ್ಯಾಹ್ನ 2ಕ್ಕೆ

CWC 2023, England, South Africa, Netherlands, Sri Lanka

Tags: CWC 2023EnglandNetherlandsSouth AfricaSri Lanka
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram