ರಾಜ್ಯದ ರೈತರು ತೀವ್ರ ಬರಗಾಲ ಎದುರಿಸುತ್ತಿದ್ದು, ಸಚಿವರೊಬ್ಬರು ಹಲವೆಡೆ ಮೋಡ ಬಿತ್ತನೆಗೆ ಮುಂದಾಗಿದೆ. ಸದ್ಯ ರಾಯಚೂರು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಸಚಿವ ಭೋಸರಾಜ್ ಅವರ ಫೌಂಡೇಷನ್ ವತಿಯಿಂದ ರಾಯಚೂರು ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲಾಗುತ್ತಿದೆ. ಹೀಗಾಗಿ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಿಂದ ವಿಮಾನ ತೆರಳಿ ಮೂರು ದಿನಗಳ ಕಾಲ ಮೋಡ ಬಿತ್ತನೆ ನಡೆಸಲಿವೆ ಎನ್ನಲಾಗುತ್ತಿದೆ.
ಈ ಜಿಲ್ಲೆಯಲ್ಲಿ ರೈತರು ಬೆಳೆದ ಭತ್ತ, ಮೆಣಸಿನಕಾಯಿ, ಹತ್ತಿ ಸೇರಿದಂತೆ ಬಹುತೇಕ ಬೆಳೆಗಳು ಬೆಳೆದು ನಿಂತಿವೆ. ಸದ್ಯದ ಸ್ಥಿತಿಯಲ್ಲಿ ಮಳೆಯ ಅನಿವಾರ್ಯತೆ ಇದ್ದು, ಸಚಿವರು, ಮೋಡ ಬಿತ್ತನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಾವೇರಿ, ಬೆಳಗಾವಿಯಲ್ಲಿ ಮೋಡ ಬಿತ್ತನೆ ಮಾಡಿದ್ದು, ಬಹುತೇಕ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ರಾಯಚೂರು ಜಿಲ್ಲೆಯಲ್ಲಿ ಕೂಡ ಮೋಡ ಬಿತ್ತನೆ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಮೋಡ ಬಿತ್ತನೆಗಾಗಿ ಪ್ರತ್ಯೇಕವಾದ ಟೆಕ್ನಿಕ್ಲಲ್ ತಂಡ ಬಂದಿದೆ. ಕಳೆದೊಂದುವರೆ ತಿಂಗಳಿಂದ ವಾತಾವರಣವನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲಾಗಿದ್ದು, ಕೃತಕ ಮೋಡ ಬಿತ್ತನೆ ಮಾಡುವ ಕಾರ್ಯ ಮಾಡಲಾಗುತ್ತದೆ.