ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೇ ಆಲ್ ದಿ ಬೆಸ್ಟ್

admin by admin
June 23, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೇ ಆಲ್ ದಿ ಬೆಸ್ಟ್

ಮೊದಲಾಗಿ ನಿಮಗೆ ಆಲ್ ದಿ ಬೆಸ್ಟ್ ನೀವೆಲ್ಲರೂ ಈ ಪರೀಕ್ಷೆಯಲ್ಲಿ ವಿಜಯಶಾಲಿಗಳಾಗಿರುತ್ತೀರಿ ಎರಡೂ ಮಾತಿಲ್ಲ. ಯಾಕೆಂದರೆ ಸವಾಲುಗಳ ವಿರುದ್ಧ ಹೋರಾಡಿ ಗೆಲ್ಲುವ ಛಲ ನಿಮ್ಮಲಿದೆ ಮಾರ್ಚ್ ಏಪ್ರಿಲ್ ನಲ್ಲಿ ನಡೆಯಬೇಕಾಗಿದ್ದ ಈ ಪರೀಕ್ಷೆ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿತು. ಮುಖ್ಯವಾಗಿ ಅನಿವಾರ್ಯವಾಗಿ ಹೇರಿದ ಲಾಕ್ ಡೌನ್ ನಿಯಮವನ್ನು ಪಾಲಿಸಬೇಕಾಗಿತ್ತು ಇರಲಿ. ಈಗ ನೀವೆಲ್ಲರೂ ತಿಳಿದಂತೆ ಜೂನ್ 25 ರಿಂದ ಪ್ರಾರಂಭವಾಗಿ ಜುಲೈ 3 ರತನಕ ನಡೆಲಿರುವ ಪರೀಕ್ಷಾ ವೇಳಾಪಟ್ಟಿಯೂ ನಿಮ್ಮಲಿದೆ. ಮತ್ತೆ ಹೊಸದಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ಪಡೆದಿರುತ್ತೀರಿ. ಹಾಗಾಗಿ ಗೆಲುವು ನಿಮ್ಮ ದೇ.
ನಿಮ್ಮ ವಿದ್ಯಾರ್ಥಿ ಜೀವನದಲ್ಲಿ ಮೊದಲ ಬಾರಿಗೆ ರಾಜ್ಯವೇ ಗಮನ ಸೆಳೆಯುವ ಪರೀಕ್ಷೆಯನ್ನು ನೀವು ಬರೆಯುತ್ತಿದ್ದೀರಿ. ಪ್ರಥಮ ಭಾಷಾ ವಿಷಯವನ್ನು ಮೂರು ಗಂಟೆಗಳಷ್ಟು ಹಾಗೂ ದ್ವೀತಿಯ ತೃತೀಯ ಭಾಷೆ ಹಾಗೂ ಕೋರ್ ಸಬ್ಜೆಕ್ಟ್ ಎರಡೂವರೆ ಗಂಟೆಗಳಷ್ಟು ಬರೆಯುತ್ತಿರಬಹುದು.. ಹೌದು ವಿದ್ಯಾರ್ಥಿಗಳೇ ಪ್ರತೀ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಇದು ಮುಂದಿನ ವ್ಯಾಸಂಗಕ್ಕೆ ಅರ್ಹತೆ ಪಡೆಯಲು ಇದೊಂದು ಒಳ್ಳೆಯ ಅವಕಾಶ. ಹಾಗಾಗಿ ನಿಮ್ಮ ಬೌದ್ಧಿಕ ಮಟ್ಟಕ್ಕನುಗುಣವಾಗಿ ಆರು ಪಠ್ಯ ವಿಷಯಗಳ ಆಧಾರಿತವಾಗಿ ಈ ಪರೀಕ್ಷೆ ನಡೆಯುವುದು ನಿಮಗೆಲ್ಲ ತಿಳಿದ ವಿಷಯ. ಆದರೆ ತುಂಬಾ ಅಭಿಮಾನದ ಸಂಗತಿಯೆಂದರೆ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಈ ಪರೀಕ್ಷೆಗೆ ಮೊದಲ ಬಾರಿ ನೀವು ಅರ್ಹತೆಯನ್ನು ಪಡೆದುಕೊಂಡಿರುವುದು. ಈ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಸಾಧಕ ಹರಿಕಾರರು ನೀವಾಗಿದ್ದೀರಿ.ಹಾಗಾಗಿ ಆತ್ಮವಿಶ್ವಾಸ ದಿಂದ ಪರೀಕ್ಷೆಗೆ ತೆರಳಿರಿ. ನಿಮ್ಮ ಪ್ರೀತಿಯ ಗುರುಗಳು ಹೇಳಿದ ಸೂಚನೆಯಂತೆ ಪರೀಕ್ಷೆಯಲ್ಲಿ ಪ್ರಶ್ನೆಗಳನ್ನು ಓದಿ ಅಂದವಾದ ಅಕ್ಷರ ಗಳಲ್ಲಿ ಬರೆದು ಉತ್ತರಿಸಿರಿ.

Related posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026

ಈ ಬಾರಿ ಪರೀಕ್ಷೆಗೆ ಸಂಬಂಧಿಸಿದಂತೆ ಇಡೀ ರಾಜ್ಯದ ಪ್ರತೀ ತಾಲೂಕಿನಲ್ಲಿ ಪರೀಕ್ಷಾ ಕೇಂದ್ರ ಗಳನ್ನು ಮಾನ್ಯ ಮುಖ್ಯಮಂತ್ರಿಗಳ ಶಿಕ್ಷಣ ಸಚಿವರ ಜಿಲ್ಲಾಧಿಕಾರಿಗಳ ಶಿಕ್ಷಣ ಇಲಾಖಾ ಅಧಿಕಾರಿಗಳ ಸೂಚನೆಯಂತೆ ವಿಶೇಷವಾದ ರೀತಿಯಲ್ಲಿ ಸಿದ್ಧ ಗೊಳಿಸಿದ್ದಾರೆ. ಕಾರಣ ಕೋವಿಡ್ 19 ಸೋಂಕು ಹರಡದಂತೆ ಅನುಸರಿಸುತ್ತಿರುವ ಮುಂಜಾಗ್ರತಾ ಕ್ರಮಗಳಾಗಿವೆ ಆದರೆ ನೀವುಗಳು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ರಾಜ್ಯ ಸರಕಾರವು ಪ್ರತೀ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ಆರೋಗ್ಯದ ಬಗ್ಗೆ ಬಹಳಷ್ಟು ಕಾಳಜಿ ವಹಿಸಿದೆ ಅಂತಹ ತೊಂದರೆಗಳು ಬಂದಲ್ಲಿ ಸರಕಾರ ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯೇ ಪ್ರಕಟಣೆಯನ್ನು ಸೂಚಿಸಬಹುದು ಹಾಗಾಗಿ ನೀವುಗಳೆಲ್ಲರೂ ಬರೆಯಬೇಕೆಂದಿರುವ ಪರೀಕ್ಷೆ ಯನ್ನು ಪ್ರೀತಿಯಿಂದ ಆತ್ಮವಿಶ್ವಾಸ ದಿಂದ ಮತ್ತು ಗೌರವಪೂರ್ವಕವಾಗಿ ಬರೆದು ಉತ್ತಮ ಅಂಕಗಳನ್ನು ಪಡೆಯಿರಿ. ನಿಮಗೆ ಇದೊಂದು ಸುವರ್ಣಾವಕಾಶವೇ ಸರಿ ನಿಮ್ಮ ಮನೆಯಿಂದ ನಿಮ್ಮ ಪರೀಕ್ಷಾ ಕೇಂದ್ರ ಕ್ಕೆ ಬರುವಲ್ಲಿ ನಿಮಗೆ ಬೇಕಾದ ಸಹಾಯ, ಭದ್ರತೆ ,ಸಾರಿಗೆ ವ್ಯವಸ್ಥೆ ಎಲ್ಲವೂ ಸಿದ್ಧತೆ ಯಾಗಿದೆ ನಿಮ್ಮ ಶಾಲೆಗಳಿಗೆ ದೂರವಾಣಿ ಕರೆಯ ಮೂಲಕ ತಿಳಿಸಿದರೆ ಎಲ್ಲಾ ಮಾಹಿತಿ ನೀಡುವರು .ಅದರಲ್ಲೂ ಈ ಬಾರಿ ಆರೋಗ್ಯ ಹಿತ ದೃಷ್ಟಿಯಿಂದ ಆರೋಗ್ಯ ಹಾಗೆಯೇ ಬೇರೆ ಬೇರೆ ಇಲಾಖೆಗಳು ನಿಮ್ಮ ಮೇಲಿನ ಜವಾಬ್ದಾರಿ ಹಾಗೂ ಪ್ರೀತಿಯಿಂದ ಸಂಪೂರ್ಣ ಸಹಕಾರಕ್ಕೆ ಕೈ ಜೋಡಿಸಿದೆ ಹಾಗಾಗಿ ನೀವಾಗಲಿ ನಿಮ್ಮ ಮನೆಯವರಾಗಲಿ ಈ ಪರೀಕ್ಷೆಯ ಕುರಿತಂತೆ ಆತಂಕ ಪಡುವ ಅವಶ್ಯಕತೆ ಇಲ್ಲ ಅಂತಹ ಪರಿಸ್ಥಿತಿ ಬಂದರೆ ಸಂಬಂಧಪಟ್ಟ ವರಿಗೆ ತಿಳಿಸಿದರೆ ನಿಮಗೆ ಸಹಕರಿಸುವರು.

ಹೌದು ವಿದ್ಯಾರ್ಥಿಗಳೇ ಈ ಪರೀಕ್ಷೆ ಗೆ ನಾವು ಏನನ್ನೂ ಬರೆಯಲಿ ಹೇಗೆ ಬರೆಯಲಿ ಎಂದೂ ಪ್ರಶ್ನಿಸದಿರಿ. ಈಗಾಗಲೇ ನಿಮ್ಮಲ್ಲಿ ಪಠ್ಯ ಪುಸ್ತಕ, ಪಾಠ ಟಿಪ್ಪಣಿ ,ಮಾದರಿ ಪ್ರಶ್ನೆ ಪತ್ರಿಕೆಗಳು , ಪೂರಕ ಮಾಹಿತಿಗಳು ಸಾಕಷ್ಟು ಇರಬಹುದು.ಇವೆಲ್ಲಕ್ಕಿಂತಲೂ ಹೆಚ್ಚಾಗಿ ನಿಮ್ಮ ಪಠ್ಯ ವಿಷಯ ಶಿಕ್ಷಕರು ಸಾಕಷ್ಟು ಮಾಹಿತಿಯನ್ನು ನೀಡಿ ಯಾವ ಪ್ರಶ್ನೆಗಳು ಎಷ್ಟು ಅಂಕಳಿಗೆ ಬರಬಹುದು ನಿರೀಕ್ಷಿತ ಉತ್ತರ ಬರವಣಿಗೆಯಲ್ಲಿಎಷ್ಟಿರಬೇಕೆಂದು ಸ್ಪಷ್ಟ ಸೂಚನೆಯನ್ನು ನೀಡಿರುತ್ತಾರೆ. ಅಲ್ಲದೇ ಸಂಭಾವ್ಯ ಪ್ರಶ್ನೆಗಳು ಪುನರಾವರ್ತಿತ ಪ್ರಶ್ನೆಗಳು ಯಾವ್ಯಾವು ಎನ್ನುವ ಸೂಚನೆಯನ್ನು ನೀಡಿರುತ್ತಾರೆ. ಅವುಗಳನ್ನೆಲ್ಲ ಚೆನ್ನಾಗಿ ಓದಿ ಸಿದ್ಧತೆ ಯನ್ನು ಮಾಡಿಕೊಳ್ಳಿರಿ. ಅವಶ್ಯಕತೆ ಎನಿಸಿದರೆ ದೂರವಾಣಿಯ ಕರೆಯ ಮೂಲಕ ಕೇಳಿ ತಿಳಿಯಿರಿ.ನಿಮಗೆ ನಮಗೆಲ್ಲಾ ತಿಳಿದಿರುವಂತೆ ಅನಿವಾರ್ಯ ಕಾರಣಗಳಿಂದಾಗಿ ವೇಳಾಪಟ್ಟಿ ಬದಲಾವಣೆಯಾಗಿದೆ. ಹೊರತು ಈಗಾಗಲೇ ಬರೆದ ಪೂರ್ವ ಸಿದ್ಧತಾ ಪರೀಕ್ಷಾ ಮಾದರಿಯಲ್ಲೇ ನಡೆಯುವುದು.

ಹಾಗಾಗಿ ಒಂದು ವೇಳೆ ಕೆಲವೊಂದು ಕಾರಣಗಳಿಂದಾಗಿ ನಿಮ್ಮ ಪೋಷಕರೇ ಗಾಬರಿಯಾದರೆ ನೀವೇ ಅವರಿಗೆ ಧೈರ್ಯವನ್ನು ಹೇಳಿ ಜಾಗ್ರತೆಯಿಂದ ಪರೀಕ್ಷೆ ಬರೆದು ಬರೆವೆನು ಎಂದು ತಿಳಿಸಿರಿ. ಸಮಯಕ್ಕೆ ಸರಿಯಾಗಿ ಆಹಾರ ತೆಗೆದುಕೊಳ್ಳಿ. ರಾತ್ರಿಯಿಡೀ ಓದುತ್ತಲೇ ಬೆಳಗು ಮಾಡದಿರಿ. ಆರೋಗ್ಯ ಹಿತ ದೃಷ್ಟಿಯಿಂದ ಬೇಕಾಗುವಷ್ಟು ನಿದ್ದೆಯನ್ನು ಮಾಡಿರಿ. ಮರುದಿನ ಎಂದಿನಂತೆ ಬೆಳಿಗ್ಗೆ ಬೇಗ ಎದ್ದು ಓದಿರಿ.ಪರೀಕ್ಷೆ ಎಂದು ಕೆಟ್ಟ ಯೋಚನೆಯನ್ನು ಮಾಡದಿರಿ.ಪರೀಕ್ಷಾ ಕೇಂದ್ರ ಗಳಲ್ಲಿ ನೀಡುವ ಸೂಚನೆಯನ್ನು ಸರಿಯಾಗಿ ಪಾಲಿಸಿರಿ. ಹಾಗೆಯೇ ಉತ್ತಮವಾಗಿ ಬರೆದು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರಿ. ಪರ ಇದು ಜೀವನ ಪರೀಕ್ಷೆಯಲ್ಲ ಆದರೂ ನಮ್ಮ ಮುಂದಿನ ವ್ಯಾಸಂಗಕ್ಕೆ ಒಂದು ಒಳ್ಳೆಯ ಭೂಮಿಕೆಯಾಗುವುದು ಎನ್ನುವುದು ಮತ್ತೊಮ್ಮೆ ಹೇಳುವೆನು. ಮರೆಯದಿರಿ. ನಿಮ್ಮ ಹೆತ್ತವರ ಗುರಃಗಳ ಹಾಗೂ ಎಲ್ಲರ ಆಶೀರ್ವಾದ ನಿಮಗಿದೆ. ಮುಂದೆ ಬರಲಿರುವ ಫಲಿತಾಂಶ ನಿಮಗೆ ಶುಭ ಸುದ್ದಿಯಾಗಲಿ. ನಂತರ ಒಂದಿಷ್ಟು ದಿನಗಳವರೆಗೆ ನೀವು ಆರಾಮವಾಗಿರುವಿರಿ ಅಲ್ವೇ? ಶಿಕ್ಷಣವೇ ಶಕ್ತಿ. ನೀವೇ ದೇಶದ ಭಾವೀ ಪ್ರಜೆಗಳು. ನೀವೇ ಭವ್ಯ ಭಾರತದ ಶಿಲ್ಪಿಗಳು. ಮತ್ತೊಮ್ಮೆ ಹೇಳುವೆ all the best, do best .

ಗಣೇಶ್ ಜಾಲ್ಸೂರು

Tags: all the bestCoronacoronavirusCOVID-19Lockdownsslcstudent
ShareTweetSendShare
Join us on:

Related Posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram