ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir)ಲ್ಲಿ ಭಾರತೀಯ ಸೇನೆ ಉಗ್ರನ ಬೇಟೆಯಾಡಿದೆ.
ಶೋಪಿಯಾನ್ನ ಕಥೋಹಾಲನ್ನಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು (Police) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರನನ್ನು ಬಲಿ ಪಡೆಯಲಾಗಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ನ (TRF) ಉಗ್ರನನ್ನೇ ಹೊಡೆದುರುಳುಸಿಲಾಗಿದೆ.
ಹತ್ಯೆಯಾದ ಉಗ್ರರನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಎನ್ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.