ಮುಂಬೈ: ಮಹಾರಾಷ್ಟçದಲ್ಲಿ ಕೊರೊನಾ ಪ್ರಕರಣಗಳ ನಾಗಾಲೋಟ ಮುಂದುವರೆದ ಬೆನ್ನಲ್ಲೇ, ಅಲ್ಲಿನಸ ಸರ್ಕಾರದ ಆಡಳಿತ ಪಕ್ಷ ಶಿವಸೇನೆಗೂ ಕೊರೊನಾ ಕಂಟಕ ಎದುರಾಗಿದೆ.
ಶಿವಸೇನೆ ಕಾರ್ಯಕರ್ತರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುಂಬೈನ ದಾದರ್ನಲ್ಲಿರುವ ಶಿವಸೇನಾ ಭವನವನ್ನು ಸೀಲ್ಡೌನ್ ಮಾಡಲಾಗಿದೆ.
ಸೀಲ್ಡೌನ್ ಮಾಡಿದ ನಂತರ ಶಿವಸೇನಾ ಕಚೇರಿಗೆ ಕ್ರಿಮಿನಾಶಕ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಗಿದೆ. ಯಾವ ಕಾರ್ಯಕರ್ತರು ಕೇಂದ್ರ ಕಚೇರಿಗೆ ಬರಬಾರದು. ಪಕ್ಷದ ಕೆಲಸವಿದ್ದರೆ ಮನೆಯಲ್ಲಿದ್ದುಕೊಂಡೇ ಮಾಡುವಂತೆ ಸೂಚನೆ ನೀಡಲಾಗಿದೆ.
ಮಹಾರಾಷ್ಟçದಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿದ್ದು, ಇಂದು ಸೋಂಕಿತರ ಸಂಖ್ಯೆ ೧ ಲಕ್ಷದ ೩೫ ಸಾವಿರಕ್ಕೆ ಏರಿಕೆಯಾಗಿದೆ. ಕೊರೊನಾಗೆ ೬೨೮೩ ಮಂದಿ ಮಹಾರಾಷ್ಟçದಲ್ಲಿ ಬಲಿಯಾಗಿದ್ದಾರೆ.
ಮಹಾರಾಷ್ಟçದಲ್ಲಿ ಕೊರೊನಾದಿಂದ ಮೃತಪಟ್ಟವರ ಡಾಟಾ ಮಿಸ್ಸಿಂಗ್ ಆಗಿದೆ ಎನ್ನಲಾಗುತ್ತಿದೆ. ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯನ್ನು ಬಚ್ಚಿಡಲು ಸರ್ಕಾರ ಹೊರಟಿದೆ ಎಂದು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನಿವಿಸ್ ಆರೋಪಿಸಿದ್ದಾರೆ.
ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ
ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...








