ಬೆಂಗಳೂರು : ಇಂದು ರಾಜ್ಯದಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಭ ಹಾರೈಸಿದ್ದಾರೆ.
ಈ ಕುರಿತು ಫೇಸ್ ಬುಕ್ ವಿಡಿಯೋ ಒಂದನ್ನು ಪೋಸ್ಟ್ ಮಾಡಿರುವ ಅವರು, ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿ ಮಿತ್ರರಿಗೆ ಶಿಕ್ಷಣ ಸಚಿವನಾಗಿ ಹಾಗೂ ರಾಜ್ಯದ ಎಲ್ಲಾ ಜನರ ಪರವಾಗಿ ಶುಭಹಾರೈಕೆಗಳು. ಭವಿಷ್ಯದ ದೃಷ್ಟಿಯಿಂದ ಅತ್ಯಮೂಲ್ಯವಾದ ಈ ಪರೀಕ್ಷೆಯನ್ನು ನೀವು ನಿರ್ಭೀತಿಯಿಂದ. ಆತ್ಮವಿಶ್ವಾಸದಿಂದ ಎದುರಿಸಿ. ನಿಮಗೆ ಅಗತ್ಯವಾದ ಎಲ್ಲ ಸುರಕ್ಷತಾ ಕಾರ್ಯಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ಎಲ್ಲರಿಗೂ ಶುಭವಾಗಲಿ. ಇಡೀ ರಾಜ್ಯದ ಜನತೆ ನಿಮ್ಮೊಂದಿಗೆ ಇದ್ದಾರೆ. ಅವರ ಆಶೀರ್ವಾದ ನಿಮ್ಮ ಜೊತೆ ಇದೆ ಎಂದು ಧೈರ್ಯ ತುಂಬಿದ್ದಾರೆ.